ದೇವಲ ಗಾಣಗಾಪೂರ: ಅಫಜಲಪುರ ತಾಲೂಕಿನ ಚವಡಾಪುರ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ಬೆಳಿಗ್ಗೆ 6.45ರ ಅವಧಿಯಲ್ಲಿ ನಡೆದಿದೆ.
ಮೃತದೇಹ ಚವಡಾಪುರ ಗ್ರಾಮದ ಬಳಿ ಪತ್ತೆಯಾಗಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆ ಕುರಿತು ದೇವಲ ಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ.ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ತಮ್ಮರಾಯ ಪಾಟೀಲ್ ಹಾಗೂ ಸಿಪಿಐ ಲಖನ್ ಮಸಗುಪ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಫೋೋ- ಗಾಣಾಪುರ