ಕನ್ನಡಪ್ರಭ ವಾರ್ತೆ ಮಂಡ್ಯ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಶಿವಣ್ಣ ಹುಟ್ಟುಹಬ್ಬದ ಅಂಗವಾಗಿ ನಗರದ ಮಿಮ್ಸ್ ಆವರಣದಲ್ಲಿರುವ ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಆಹಾರ ವಿತರಿಸಿ ಮಾತನಾಡಿದರು.
ಲೋಹಿಯಾ ವಿಚಾರ ವೇದಿಕೆ ಮೂಲಕ ಬಿ.ಎಸ್.ಶಿವಣ್ಣ ಅವರು ಜಿಲ್ಲೆಯಲ್ಲಿ ಸಾಮಾಜಿಕ ಕಳಕಳಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ತುಳಿತಕ್ಕೊಳಗಾದವವರು, ಬಡವರಿಗೆ ಸಾಕಷ್ಟು ನೆರವು ನೀಡಿ ಮೇಲೆತ್ತುವ ಕೆಲಸ ಮಾಡಿದ್ದಾರೆ ಎಂದರು.ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಮಾತನಾಡಿ, ಶಿವಣ್ಣ ಅವರು ದಡದಪುರ ಗ್ರಾಮದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ, ಗ್ರಾಮದಲ್ಲಿ ಶೌಚಾಲಯ ನಿರ್ಮಾಣ, ಹೊಗೆಮುಕ್ತ ಹಳ್ಳಿಗಳ ನಿರ್ಮಾಣಕ್ಕೆ ಗ್ಯಾಸ್ ವಿತರಣೆ ಸೇರಿದಂತೆ ಹತ್ತು ಹಲವು ಸಮಾಜಮುಖಿ ಕೆಲಸ ಮಾಡಿದ್ದಾರೆ ಎಂದರು.
ನಾಳೆ ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ಎಚ್ಚರಿಕೆ
ಚುನಾವಣೆಯಲ್ಲಿ ಮಾತು ಕೊಟ್ಟಂತೆ ನಡೆದಿದ್ದೇವೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರಿಗೆ ಕೊಟ್ಟ ಮಾತನ್ನು ಉಳಿಸದೆ ವಂಚಿಸಿರುವ ಪರಿಶಿಷ್ಟರ ವಿರೋಧಿ ಮುಖ್ಯಮಂತ್ರಿಗಳಿಗೆ ಮದ್ದೂರಿನಲ್ಲಿ ಜು.೨೮ರಂದು ಕಪ್ಪುಪಟ್ಟಿ ಪ್ರದರ್ಶನ ಮಾಡುವುದಾಗಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಅಂದಾನಿ ಸೋಮನಹಳ್ಳಿ ಎಚ್ಚರಿಕೆ ನೀಡಿದರು.
ಸುಪ್ರೀಂ ಕೋರ್ಟ್ನಿಂದ ದುರ್ಬಲಗೊಂಡಿರುವ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ಗೆಜೆಟ್ ನೋಟಿಫಿಕೇಶಷನ್ ಹೊರಡಿಸಬೇಕು ಮತ್ತು ದಲಿತರ ಭೂ ರಕ್ಷಣೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಮೂರ್ತಿ ಕಂಚಿನಕೋಟೆ, ಶಿವು ಎಂ., ಟಿ.ಡಿ. ಬಸವರಾಜು, ಮುರುಗನ್ ಗೋಷ್ಠಿಯಲ್ಲಿದ್ದರು.