ಕನ್ನಡಪ್ರಭ ವಾರ್ತೆ ರಾಮನಗರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡಲಿದೆ. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಅವಕಾಶ ನೀಡಿದಂತೆ, ಮತದಾರರು ಬಹುಜನಸಮಾಜ ಪಕ್ಷಕ್ಕೆ ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿ ಪಕ್ಷವೂ ದೇಶದ ಎಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸುತ್ತಿದೆ. ನಾವು ಎನ್ಡಿಎ ಹಾಗೂ ಐಎನ್ಡಿಐ ಒಕ್ಕೂಟವನ್ನು ಸೇರದೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ನಮ್ಮ ಪಕ್ಷಕ್ಕೆ ಬಹುಮತ ದೊರೆತರೆ, ಸಂವಿಧಾನದ ಆಶಯಗಳನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ. ಉಚಿತ ಶಿಕ್ಷಣ, ಆರೋಗ್ಯ ಹಾಗೂ ನಿರುದ್ಯೋಗ ನಿವಾರಣೆ, ಭೂ ರಹಿತರಿಗೆ ಭೂಮಿ ನೀಡುವುದು ನಮ್ಮ ಉದ್ದೇಶ ಎಂದರು.ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಕುಟುಂಬ ರಾಜಕಾರಣಕ್ಕೆ ಜೋತು ಬಿದ್ದಿವೆ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ, ಡಿಸಿಎಂ ಆಗಿದ್ದಾರೆ. ಅವರ ಸಹೋದರ ಹಾಲಿ ಸಂಸದರಾಗಿದ್ದಾರೆ. ಎಚ್ಡಿಕೆ ಕುಟುಂಬ ರಾಜಕಾರಣದ ಹಿನ್ನೆಲೆ ಹೊಂದಿದೆ. ಹಾಲಿ ಎನ್ಡಿಎ ಅಭ್ಯರ್ಥಿಯಾಗಿರುವ ಡಾ.ಮಂಜುನಾಥ್ ಸಹ ಮಾಜಿ ಪ್ರಧಾನಿ ದೇವೇಗೌಡರ ಅಳಿಯ. ಇಂತಹ ಕುಟುಂಬ ರಾಜಕಾರಣಕ್ಕೆ ಜಿಲ್ಲೆಯಲ್ಲಿ ಬ್ರೇಕ್ ಹಾಕಬೇಕಿದೆ ಎಂದರು.
ಬಿಎಸ್ಪಿ ರಾಜ್ಯ ಕಾರ್ಯದರ್ಶಿ ನಾಗೇಶ್ ಮಾತನಾಡಿ, ಹಾಲಿ ಸಂಸದ ಡಿ.ಕೆ.ಸುರೇಶ್ ಅಭಿವೃದ್ಧಿ ಮಾಡಿದ್ದರೆ, ಮತದಾರರಿಗೆ ಕುಕ್ಕರ್, ತವಾ ಹಾಗೂ ಸೀರೆ ಹಂಚಿಕೆ ಮಾಡುವ ಪ್ರಮೆಯವೇ ಬರುತ್ತಿರಲಿಲ್ಲ. ಯುಗಾದಿ ಹಬ್ಬದ ಕೊಡುಗೆಯಾಗಿ ಮತದಾರರಿಗೆ ಕೋಳಿ ಹಾಗೂ ಕುರಿ ಹಂಚಿಕೆ ಮಾಡುತ್ತಿದೆ. ಜತೆಗೆ, ಎಸ್ಸಿ ಎಸ್ಟಿ ಅಭಿವೃದ್ಧಿಗೆ ಮೀಸಲಿಟ್ಟಿದ್ದ 11 ಸಾವಿರ ಕೋಟಿ ಹಣ ದುರುಪಯೋಗವಾಗಿದ್ದು, ಗ್ಯಾರಂಟಿ ಯೋಜನೆ ಜಾರಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಂದಾನಪ್ಪ, ಕೃಷ್ಣಪ್ಪ, ಮಹದೇವ, ಅಬ್ದುಲ್, ದೇವರಾಜು, ಸ್ವಾಮಿ, ಉಮೇಶ್, ವೆಂಕಟಚಲ, ಗೌರಮ್ಮ, ಪಾರ್ವತಮ್ಮ, ಸುರೇಶ್, ಕೃಷ್ಣ ಮೂರ್ತಿ, ರಮೇಶ್, ಮುರುಗೇಶ್, ಬಸವರಾಜು, ಗೌರಿ ಶಂಕರ್, ಲೋಕೇಶ್, ತಬ್ರೇಜ್ ಪಾಷ, ಅಜಯ್ ಇದ್ದರು.
- ಡಾ.ಚಿನ್ನಪ್ಪ ವೈ.ಚಿಕ್ಕಹಾಗಡೆ, ಬಿಎಸ್ಪಿ ಅಭ್ಯರ್ಥಿ, ಬೆಂಗಳೂರು ಗ್ರಾ. ಕ್ಷೇತ್ರ