ಬಿಟಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ಜಪ್ತಿ

KannadaprabhaNewsNetwork |  
Published : Jun 13, 2025, 03:28 AM IST
ಬಿಟಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ಝರಾಕ್ಸ್ ಯಂತ್ರ, ಟೇಬಲ್, ಕುರ್ಚಿಗಳನ್ನು ಜಪ್ತಿ ಮಾಡಲಾಯಿತು | Kannada Prabha

ಸಾರಾಂಶ

ಬಾಗಲಕೋಟೆ ನವನಗರದ ಮೂರನೇ ಯೂನಿಟ್‌ಗಾಗಿ ಸ್ವಾಧೀನಪಡಿಸಿಕೊಂಡ ಭೂಮಿ ವಿಚಾರದಲ್ಲಿ ನ್ಯಾಯಾಲಯದ ಆದೇಶದಂತೆ ಪರಿಹಾರ ಧನ ವಿತರಿಸುವಲ್ಲಿ ವಿಫಲರಾದ ಬಿಟಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯ ಝರಾಕ್ಸ್ ಯಂತ್ರ, ಟೇಬಲ್, ಕುರ್ಚಿಗಳನ್ನು ಜಪ್ತಿ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ನವನಗರದ ಮೂರನೇ ಯೂನಿಟ್‌ಗಾಗಿ ಸ್ವಾಧೀನಪಡಿಸಿಕೊಂಡ ಭೂಮಿ ವಿಚಾರದಲ್ಲಿ ನ್ಯಾಯಾಲಯದ ಆದೇಶದಂತೆ ಪರಿಹಾರ ಧನ ವಿತರಿಸುವಲ್ಲಿ ವಿಫಲರಾದ ಬಿಟಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯ ಝರಾಕ್ಸ್ ಯಂತ್ರ, ಟೇಬಲ್, ಕುರ್ಚಿಗಳನ್ನು ಜಪ್ತಿ ಮಾಡಲಾಯಿತು.

ವಕೀಲ ಡಿ.ಬಿ. ಪೂಜಾರ ಅವರು ತಮ್ಮ ಪತ್ನಿ ಭುವನೇಶ್ವರಿ ಪೂಜಾರ ಹೆಸರಿನಲ್ಲಿ ಜಮೀನು ಹೊಂದಿದ್ದರು. ಸರ್ಕಾರಕ್ಕೆ ಭೂಮಿ ಬಿಟ್ಟುಕೊಡಲು ಒಪ್ಪದಿದ್ದಾಗ ಸರ್ಕಾರ ವಿಶೇಷ ಅಧಿಕಾರ ಬಳಸಿಕೊಂಡು ಎಕರೆಗೆ ₹6 ಲಕ್ಷ ನೀಡಿ ಭೂಮಿ ಸ್ವಾಧೀನಪಡಿಸಿಕೊಂಡಿತ್ತು. ಅವೈಜ್ಞಾನಿಕ ಪರಿಹಾರ ಮೊತ್ತ ನೀಡಿದೆ ಎಂದು ಡಿ.ಬಿ. ಪೂಜಾರ ನ್ಯಾಯಾಲಯದ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ 3.31 ಎಕರೆಗೆ ಸಂಬಂಧಿಸಿದಂತೆ ಪ್ರತಿ ಚದರ ಅಡಿಗೆ ₹789 ನೀಡಬೇಕೆಂದು ಆದೇಶ ಮಾಡಿತ್ತು. 2024ರ ಏಪ್ರಿಲ್ ತಿಂಗಳಿನಲ್ಲೇ ಆದೇಶ ಮಾಡಿದ್ದರೂ ಭೂಸ್ವಾಧೀನಾಧಿಕಾರಿ ಕಚೇರಿ ಪರಿಹಾರ ನೀಡದ ಕಾರಣ ಪೂಜಾರ ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಂಗ ಇಲಾಖೆ ಭೂಸ್ವಾಧೀನಾಧಿಕಾರಿ ತಂಡ ಕಚೇರಿಯ ಸಾಮಗ್ರಿಗಳನ್ನು ಜಪ್ತಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!