ಸಮಾಜಕ್ಕೆ ಬುದ್ಧ, ಬಸವಣ್ಣರ ಕೊಡುಗೆ ಅಪಾರ

KannadaprabhaNewsNetwork |  
Published : Aug 11, 2025, 12:30 AM IST
ಪೋಟೋ 10ಎಚ್‌ಎಸ್‌ಡಿ6: ನಗರದ ಮುರುಘ ಮಠದ ಅನುಭವ  ಮಂಟಪದಲ್ಲಿ ಟಿಬೆಟ್‌ ಧರ್ಮಗುರು ದಲೈಲಾಮ ಅವರ 90 ನೇ ಜನ್ಮ ದಿನದ ಅಂಗವಾಗಿ  ಮಾದಾರ ಚನ್ನಯ್ಯ ಗುರುಪೀಠ ಸಂತೋಷ್‌ ಲಾಡ್‌ ಫೌಂಡೇಷನ್‌  ಇಂಡೋ ಟಿಬೆಟ್‌ ಸ್ನೇಹ ಸೋಸೈಟಿ ವತಿಯಿಂದ ಆಯೋಜಿಸಲಾಗಿದ್ದ ಬಸವೇಶ್ವರರ ನಾಡಿನಲ್ಲಿ ಬುದ್ದ ಸ್ಮರಣೆ ಕಾರ್ಯಕ್ರಮದಲ್ಲಿ ದಲೈ ಲಾಮ ಕಳಿಸಿದ ಸ್ಲೋಗನ್ ಬಿಡುಗಡೆ ಮಾಡಲಾಯಿತು. | Kannada Prabha

ಸಾರಾಂಶ

ಚಿತ್ರದುರ್ಗ ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದ್ದ ‘ಬಸವ ನಾಡಿನಲ್ಲಿ ಬುದ್ಧ ಸ್ಮರಣೆ ಕಾರ್ಯಕ್ರಮ’ ದಲ್ಲಿ ದಲೈ ಲಾಮ ಕಳಿಸಿದ ಸ್ಲೋಗನ್ ಬಿಡುಗಡೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭಾರತ ಬೌದ್ಧ ಧರ್ಮ, ಕರ್ನಾಟಕ ಬಸವ ತತ್ವದ ತವರಾಗಿದ್ದು ಇವೆರಡು ಮಹಾಸಾದ್ವಿಕ ಧರ್ಮಗಳಾಗಿವೆ. ಸಮಾಕ್ಕೆ ಈ ಇಬ್ಬರು ಮಹನೀಯರ ಕೊಡುಗೆ ಬಹುದೊಡ್ಡದಿದೆ ಎಂದು ಕೈಗಾರಿಕ ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.

ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಟಿಬೆಟ್‌ ಧರ್ಮಗುರು ದಲೈಲಾಮ ಅವರ 90ನೇ ಜನ್ಮದಿನದ ಅಂಗವಾಗಿ ಮಾದಾರ ಚನ್ನಯ್ಯ ಗುರುಪೀಠ, ಸಂತೋಷ್‌ ಲಾಡ್‌ ಫೌಂಡೇಷನ್‌ ಹಾಗೂ ಇಂಡೋ ಟಿಬೆಟ್‌ ಸ್ನೇಹ ಸೋಸೈಟಿ ವತಿಯಿಂದ ಆಯೋಜಿಸಲಾಗಿದ್ದ ಬಸವೇಶ್ವರರ ನಾಡಿನಲ್ಲಿ ಬುದ್ಧ ಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನ ನಾಡಿನಲ್ಲಿ ಬುದ್ಧನ ಸ್ಮರಣೆ ಅವಿಸ್ಮರಣೀಯ ಹಾಗೂ ಐತಿಹಾಸಿಕ ಕಾರ್ಯಕ್ರಮ ಚಿತ್ರದುರ್ಗದ ಪರಿಸರವೂ ಬೌದ್ಧ ಧರ್ಮ ಮಾರ್ಗದಲ್ಲಿ ನಡೆದಿದೆ. ಅದಕ್ಕೆ ನಿದರ್ಶನವೆಂಬಂತೆ ಅಶೋಕನ ಕಾಲದ ಅನೇಕ ಶಾಸನಗಳು ಇಲ್ಲಿವೆ. ಈ ನಾಡಿನ ಸಾಂಸ್ಕೃತಿಕ ನಾಯಕ ಬಸವಣ್ಣನ ಸಂಸ್ಕೃತಿಯನ್ನು ಕೂಡ ನಾವಿಲ್ಲಿ ಕಾಣಬಹುದು. ಬುದ್ಧ ಮತ್ತು ಬಸವ ಭಾರತ ಕಂಡ ಅತ್ಯಂತ ಶ್ರೇಷ್ಠ ಸುಧಾರಕರು. ಭಿನ್ನ ದಾರಿಯಲ್ಲಿ ನಡೆದು ತಮ್ಮ ಕಾಲಘಟ್ಟದಲ್ಲಿ ಶೋಷಿತರ ದೀನದಲಿತರ ನೊಂದವರ ಪರವಾಗಿ ಧ್ವನಿ ಎತ್ತಿದವರು. ಅಹಿಂಸೆ ಸಮಾನತೆ ಮಾನವೀಯತೆ ಕಾರುಣ್ಯ ಪ್ರಮುಖ ತತ್ವಗಳಾಗಿವೆ ಎಂದರು.

ಟಿಬೆಟ್ 7ನೇ ಶತಮಾನದಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದು, ವಿಶ್ವದ ಹಲವು ರಾಷ್ಟ್ರಗಳು ಅದನ್ನೇ ಅನುಸರಿಸುತ್ತಿವೆ. 1950ರಲ್ಲಿ 3,500 ಕಿ.ಮೀ ಗಡಿ ಹೊಂದಿದ್ದ ಟಿಬೆಟ್‌ ನಮ್ಮೊಂದಿಗೆ ಉತ್ತಮ ಬಾಂಧವ್ಯ ಹೊಂದಿದೆ. ಭಾರತದಲ್ಲಿ ಅಂದಿನ ಪ್ರಧಾನಿ ನೆಹರೂ ಹಾಗೂ ಮುಖ್ಯಮಂತ್ರಿಗಳಾಗಿದ್ದ ರಾಷ್ಟ್ರನಾಯಕ ನಿಜಲಿಂಗಪ್ಪ ವೀರೇಂದ್ರ ಪಾಟೀಲ್ ಅವರು ಕರ್ನಾಟಕದಲ್ಲಿ ಟಿಬೆಟಿಯನ್ನರಿಗೆ ಆಶ್ರಯ ಕಲ್ಪಿಸಿದರು. ರಾಜ್ಯದಲ್ಲೂ ಅವರ ಸಂಖ್ಯೆ ಹೆಚ್ಚಿದೆ. ಸೌಹಾರ್ದಯುತ ಸಂಬಂಧವಿದೆ ಹೀಗಾಗಿ ಭಾರತೀಯ ಸಮಾಜ ವೈವಿಧ್ಯತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಬೌದ್ಧ ಧರ್ಮವೂ ಅತ್ಯಂತ ಪುರಾತನವಾದುದು. ದಕ್ಷಿಣ ಭಾರತದಲ್ಲಿ 4-5ನೇ ಶತಮಾನದಲ್ಲಿದ್ದ ಕುರುಹುಗಳನ್ನು ಪತ್ತೆ ಹಚ್ಚಿ ಪುನರುಜ್ಜೀವನಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಬೌದ್ಧ, ಜೈನ ಧರ್ಮ ಶಾಂತಿ ಮಂತ್ರ ಪಠಿಸಿದೆ ಜಗತ್ತಿಗೆ ಧರ್ಮ ಬೋಧನೆ ಮಾಡುವಲ್ಲೂ ಶ್ರಮಿಸಿವೆ. 12ನೇ ಶತಮಾನದ ಬಸವಣ್ಣನ ತತ್ವಾದರ್ಶ ಬುದ್ಧನ ಅಷ್ಠಾಂಗ ಮಾರ್ಗ ಸಮರ್ಪಕವಾಗಿ ಸಾರಿದ್ದರೆ ವಿಶ್ವಶಾಂತಿಗೆ ಮನ್ನಣೆ ದೊರೆಯುತ್ತಿತ್ತು ಎಂದು ಅಭಿಪ್ರಾಯಪಟ್ಟರು.

ಮಾರಸಂದ್ರ ಮುನಿಯಪ್ಪ ಮಾತನಾಡಿ, ಬುದ್ಧ ನೊಂದವರಿಗಾಗಿ ರಾಜ ಮನೆತನ ಬಿಟ್ಟರು ಮಾನವತಾ ಧರ್ಮ ಪ್ರತಿಪಾದಿಸಿದರು. ಬಸವಣ್ಣ ಸ್ಥಾಪಿಸಿದ್ದು ಜಾತಿಯಲ್ಲ ಅದೊಂದು ಪವಿತ್ರವಾದ ಧರ್ಮ, ಅಂಬೇಡ್ಕರ್ ಮತದಾನದ ಹಕ್ಕು ನೀಡಿದ್ದರಿಂದಾಗಿ ಶೋಷಿತ ದಲಿತ ಹಿಂದುಳಿದವರು ಜನಪ್ರತಿನಿಧಿಯಾಗಲು ಸಹಕಾರಿಯಾಗಿದೆ. ಬುದ್ಧ, ಬಸವ, ಅಶೋಕ ಚಕ್ರವರ್ತಿ, ಅಂಬೇಡ್ಕರ್ ಇವರೆಲ್ಲರೂ ನಮ್ಮ ತಾತಂದಿರು ಎಂಬುದನ್ನು ಮರೆಯಬಾರದು ಎಂದರು.

ಸಾನ್ನಿಧ್ಯ ವಹಿಸಿದ್ದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಟಿಬೆಟ್ ಬೌದ್ಧ ಗುರು ದಲೈ ಲಾಮಾ ಅವರು ಅನಾರೋಗ್ಯ ಕಾರಣಕ್ಕೆ ಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸಿದ್ದಾರೆ. ಅದಕ್ಕಾಗಿ ನೇರ ಪ್ರಸಾರದ ಮೂಲಕ ವೀಕ್ಷಿಸಲು ಅನುವು ಮಾಡಿಕೊಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಿವಲಿಂಗಾನಂದ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ಪ್ರಸನ್ನಾನಂದಪುರಿ ಸ್ವಾಮೀಜಿ,

ಡಾ.ಬಸವಕುಮಾರ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವೇದಿಕೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ದಲೈಲಾಮರ ಪ್ರತಿನಿಧಿ ಜಿಗ್ಮೆ ಜಗ್ನೆ, ಮುಂಡಗೋಡಿನ ರಿನ್ ಚೆನ್‌ ವಾನ್ಗೋ, ರಾಜ್ಯಸಭಾ ಮಾಜಿ ಸದಸ್ಯ ಎಚ್.ಹನುಮಂತಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌