ಬುದ್ಧ, ಬಸವ, ಅಂಬೇಡ್ಕರ್‌ ಜಾತಿಗೆ ಸೀಮಿತರಲ್ಲ: ಸಚಿವ ತಂಗಡಗಿ

KannadaprabhaNewsNetwork |  
Published : Apr 30, 2025, 12:39 AM IST
(ಫೋಟೋ 29ಬಿಕೆಟಿ5, ವಚನ ಸಾಹಿತ್ಯ ಸಮಕಾಲಿನ ಸಂವೇದನೆಕುರಿತುಜರುಗಿದ ವಿಚಾರಗೋಷ್ಠಿಕಾರ್ಯಕ್ರಮವನ್ನು ಉದ್ಘಾಟಿಸಿದ ುಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ) | Kannada Prabha

ಸಾರಾಂಶ

ಬುದ್ಧ, ಬಸವ, ಅಂಬೇಡ್ಕರ್‌ ಯಾವುದೇ ಜಾತಿಗೆ ಸೀಮಿತರಾಗಿರದೆ ಈ ಜಗತ್ತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬುದ್ಧ, ಬಸವ, ಅಂಬೇಡ್ಕರ್‌ ಯಾವುದೇ ಜಾತಿಗೆ ಸೀಮಿತರಾಗಿರದೆ ಈ ಜಗತ್ತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ಕೂಡಲಸಂಗಮದ ಬಸವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಹಾಗೂ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಅನುಭವ ಮಂಟಪ ಬಸವಾದಿ ಶರಣರ ವೈಭವ ಕಾರ್ಯಕ್ರಮದಲ್ಲಿ ವಚನ ಸಾಹಿತ್ಯ ಸಮಕಾಲಿನ ಸಂವೇದನೆ ಕುರಿತು ಜರುಗಿದ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ತಮ್ಮ ವಚನದ ಮೂಲಕ ಆಡಳಿತ ವ್ಯವಸ್ಥೆ ಕಲಿಸಿಕೊಟ್ಟಿದ್ದಾರೆ. ಅವರ ಹುಟ್ಟು ಹಾಕಿದ ಅನುಭವ ಮಂಟಪ ಇಂದು ಸಂಸತ್ತಾಗಿ ನಡೆಯುತ್ತಿದೆ ಎಂದರು.

ಜಯಂತಿಗಳ ಆಚರಣೆ ಮಾಡುವ ಉದ್ದೇಶ ಮಹಾಪುರುಷರ ಇತಿಹಾಸವನ್ನು ಯುವಕರಿಗೆ ಪರಿಚಯಿಸುವುದಾಗಿದೆ. ಬಸವಣ್ಣನವರ ವಚನಗಳನ್ನು ಇಡೀ ರಾಜ್ಯಕ್ಕೆ ಪರಿಚಯಿಸುವ ಕಾರ್ಯ ಮಾಡಿ ಯುವಕರಲ್ಲಿ ಪರಿಣಾಮ ಬೀರುವಂತೆ ಮಾಡುವ ಉದ್ದೇಶ ಹೊಂದಲಾಗಿದೆ. ಶರಣರ ಆಚಾರ, ವಿಚಾರ, ವಚನಗಳ ಮೂಲಕ ಇತಿಹಾಸ ಸೃಷ್ಟಿಸಿ ಸಾಮಾಜಿಕ ನ್ಯಾಯ ಕೊಡುವ ಕೆಲಸ ಸರಕಾರ ಮಾಡುತ್ತಿದೆ. ಬಸವಣ್ಣನವರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆದರೆ ಅವರ ಆಚಾರ, ವಿಚಾರಗಳನ್ನು ದಿನನಿತ್ಯ ಚಿಂತನೆ ಮಾಡಿ ಜೀವನ ನಡೆಸುತ್ತಿರುವವರು ಬಹಳ ಕಡಿಮೆ ಇದ್ದಾರೆಂದು ಅಭಿಪ್ರಾಯಪಟ್ಟರು.ಅಧ್ಯಕ್ಷತೆ ವಹಿಸಿದ್ದ ಹುನಗುಂದ ಶಾಸಕ ವಿಜಯಾನಂದಕಾಶಪ್ಪನವರ ಮಾತನಾಡಿ, ಇತಿಹಾಸ ಪಟದಲ್ಲಿರುವ ಐತಿಹಾಸಿಕ ಕೂಡಲಸಂಗಮದಲ್ಲಿ ಬಸವಾದಿ ಶರಣರ ವೈಭವವನ್ನು ಹಮ್ಮಿಕೊಳ್ಳಲಾಗಿದೆ. ಸರಕಾರ ಸರ್ವಧರ್ಮ ಸಂಸತ್ತು ಎಂಬ ಹೆಸರಿನಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲು ಬಜೆಟ್‌ ನಲ್ಲಿ ಘೋಷಿಸಿದೆ. ಈ ಹಿನ್ನೆಲೆ ಕೂಡಲಸಂಗಮದಲ್ಲಿ ಅದ್ಧೂರಿ ಕಾರ್ಯಕ್ರಮ ಏರ್ಪಡಿಸಿರುವುದು ಹೆಮ್ಮೆಯ ವಿಷಯ ಎಂದರು.

ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪೂರ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು.

ಬೈಲೂರ ನಿಷ್ಕಳ ಮಂಟಪದ ನಿಜಗುಣಾನಂದ ಶ್ರೀ, ಮೈಸೂರು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಶ್ರೀ, ಸಿದ್ದನಕೊಳ್ಳದ ಧರ್ಮಾಧಿಕಾರಿ ಡಾ.ಶಿವಕುಮಾರ ಶ್ರೀ, ಇಳಕಲ್ಲಿನ ಗುರುಮಹಾಂತ ಶ್ರೀ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾಹಿತಿ ರಂಜಾನ ದರ್ಗಾ, ಡಾ.ಮೀನಾಕ್ಷಿ ಬಾಳಿ, ಡಾ.ಪುರುಶೋತ್ತಮ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಪಂ ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ, ಕನ್ನಡ ಮತ್ತು ಸಂಸ್ಕೃತಿಇಲಾಖೆ ನಿರ್ದೇಶಕಿ.ಎಂ. ಗಾಯತ್ರಿ, ಕೂಡಲಸಂಗಮದ ಅಭಿವೃಧ್ದಿ ಪ್ರಾಧಿಕಾರ ಆಯುಕ್ತ ಮಹಾದೇವ ಮುರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.12ನೇ ಶತಮಾನದಲ್ಲಿ ಅಸ್ಪೃಶ್ಯತೆ ತೊಡೆದು ಹಾಕುವುದರ ಜೊತೆಗೆ ಎಲ್ಲರನ್ನು, ಎಲ್ಲ ಜನಾಂಗಗಳನ್ನು ಒಂದುಗೂಡಿಸುವ ಕಾರ್ಯ ನಡೆದಿದೆ. ಅದು ಇವತ್ತಿನವರೆಗೂ ಬಗೆಹರಿಯದೇ ಜಾತಿ, ಧರ್ಮ, ಘರ್ಷಣೆಗಳು ದಿನಂಪ್ರತಿ ನಡೆಯುತ್ತಿವೆ. ಮಾನವನನ್ನು ಮಾನವನನ್ನಾಗಿ ಕಾಣದ ಧರ್ಮ ಯಾವುದು. ಬಸವಣ್ಣನವರು ಹಾಕಿ ಕೊಟ್ಟ ಹಾದಿಯಲ್ಲಿ ನಾವೆಲ್ಲರೂ ನಡೆಯಬೇಕೆಂಬ ಉದ್ದೇಶದಿಂದ ಅವರ ತತ್ವಾದರ್ಶಗಳನ್ನು ಪರಿಚಯಿಸುವ ಕಾರ್ಯಕ್ರಮದ ಮೂಲಕ ಮಾಡಲಾಗುತ್ತಿದೆ.

ಆರ್.ಬಿ. ತಿಮ್ಮಾಪೂರ ಜಿಲ್ಲಾ ಉಸ್ತುವಾರಿ ಸಚಿವ ಬಾಗಲಕೋಟೆ

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ