ಕನ್ನಡಪ್ರಭ ವಾರ್ತೆ ಹಲಗೂರು
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಐಕ್ಯೂ ಎಸಿ ಮತ್ತು ಅರ್ಥಶಾಸ್ತ್ರ ವಿಭಾಗ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಬುಧವಾರ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಒಂದು ರಾಷ್ಟ್ರ, ರಾಜ್ಯ ಕುಟುಂಬ ಅಥವಾ ವ್ಯವಸ್ಥೆಗಾಗಲಿ ಒಬ್ಬ ವ್ಯಕ್ತಿ ಅಂದಾಜಿಲ್ಲದೆ ಯಾವುದನ್ನು ಬೆಳೆಸಲು ಹಾಗೂ ಅಭಿವೃದ್ಧಿಗೊಳಿಸಲು ಸಾಧ್ಯವಿಲ್ಲ. ನಮ್ಮ ಆದಾಯಕ್ಕಿಂತ ಹೆಚ್ಚಿನ ಜೀವನ ಕ್ರಮ ನಮ್ಮದಾಗಬಾರದು ಎಂದರು.ಯುವಕ ಯುವತಿಯರು ತಂದೆ ತಾಯಿಗಳು ಅಪಾರ ಕಾಳಜಿ ಇಟ್ಟು ನಿಮ್ಮ ಸಮಗ್ರ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ. ನಿಮ್ಮ ಬೆಳವಣಿಗೆಯೇ ನಿಮ್ಮ ತಂದೆ ತಾಯಿಗಳ ಮುಂಗಡ ಪತ್ರವಾಗಿದೆ. ನೀವು ಶ್ರಮ ವಿಭಜನೆ ಮಾಡಿ ಉನ್ನತ ಮಟ್ಟದ ವಿದ್ಯಾಭ್ಯಾಸವನ್ನು ಮಾಡಿ ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದರೆ ನೀವು ನಿಮ್ಮದೇ ಆದ ಕ್ರಮ ಅಳವಡಿಸಿಕೊಳ್ಳಬೇಕು ಎಂದರು.
ಉಪನ್ಯಾಸಕಿ ಡಾ.ಸೀಮಾ ಕೌಸರ್ ಮಾತನಾಡಿ, ಬಜೆಟ್ ಎಂಬುದು ಜೀವನದ ಒಂದು ಯೋಜನೆ. ಇಂದಿನ ಸಂಪನ್ಮೂಲ ವ್ಯಕ್ತಿಗಳು ಅಪಾರ ಜ್ಞಾನ ಹೊಂದಿರುತ್ತಾರೆ ಎಂದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ತಾರಾ ಜಯಲಕ್ಷ್ಮಿ, ಲೆಕ್ಕಾಚಾರವಿಲ್ಲದ ಜೀವನ ಆದಾಯ ಶೂನ್ಯವಾಗಿರುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.