ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಉತ್ತಮ ಬದುಕು ಕಟ್ಟಿಕೊಳ್ಳಿ: ಸಿ.ಎಸ್.ಪುಟ್ಟರಾಜು

KannadaprabhaNewsNetwork |  
Published : May 16, 2026, 12:45 AM IST
15ಕೆಎಂಎನ್ ಡಿ22 | Kannada Prabha

ಸಾರಾಂಶ

ಗ್ರಾಮೀಣ ಭಾಗದಲ್ಲಿ ಓದಿರುವ ನಮ್ಮ ಮಕ್ಕಳು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಂತಹ ದೊಡ್ಡ ಪಟ್ಟಣಗಳಲ್ಲಿ ಉತ್ತಮ ಸಂಬಳ ಪಡೆದು ಕೆಲಸ ನಿರ್ವಹಿಸುತ್ತಿರುವುದನ್ನು ಸ್ವತಃ ಅವರ ಬಾಯಿಂದಲೇ ಕೇಳಿದಾಗ ಆಗುವ ಸಂತಸ ಮತ್ಯಾವುದೂ ಇಲ್ಲ.

ಕನ್ನಡಪ್ರಭ ವಾರ್ತೆ ಪಾಂಡವಪುರ

ವಿದ್ಯಾಭ್ಯಾಸ ಮುಗಿದ ನಂತರ ವಿದ್ಯಾರ್ಥಿಗಳು ತಂದೆ ತಾಯಿಯರ ಭರವಸೆ ಈಡೇರಿಸಿ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಎಸ್‌ಟಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸಲಹೆ ನೀಡಿದರು.

ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ವಿಭಾಗವು ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಘಟಕದಿಂದ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಓದಿರುವ ನಮ್ಮ ಮಕ್ಕಳು ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಂತಹ ದೊಡ್ಡ ಪಟ್ಟಣಗಳಲ್ಲಿ ಉತ್ತಮ ಸಂಬಳ ಪಡೆದು ಕೆಲಸ ನಿರ್ವಹಿಸುತ್ತಿರುವುದನ್ನು ಸ್ವತಃ ಅವರ ಬಾಯಿಂದಲೇ ಕೇಳಿದಾಗ ಆಗುವ ಸಂತಸ ಮತ್ಯಾವುದೂ ಇಲ್ಲ ಎಂದರು.

ನಮ್ಮ ಕಾಲೇಜಿನಲ್ಲಿ ಓದು ಮುಗಿಸಿ ಹೋದ ಮೇಲು ನಿಮ್ಮ ಮುಂದಿನ ಭವಿಷ್ಯದ ಬದುಕಿಗೆ ನಮ್ಮ ನೆರವು ನಿರಂತರವಾಗಿರುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ನಿಶಾಂತ್ ಎ.ನಾಯ್ಡು ಮಾತನಾಡಿ, ಮಾಜಿ ಸಚಿವ ಪುಟ್ಟರಾಜು ಅವರನ್ನು ‘ಶಿಕ್ಷಣ ಸಂತ’ ಎಂದು ಉಲ್ಲೇಖಿಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಅಗತ್ಯ ವಾತಾವರಣ ನಿರ್ಮಿಸಲು ಅಧ್ಯಕ್ಷರು ಸದಾ ಸಿದ್ದರಿದ್ದು ವಿದ್ಯಾರ್ಥಿಗಳು ಅದನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಗುರಿಯನ್ನು ಸಾಧಿಸಬೇಕು ಎಂದರು.

ಸಂಸ್ಥೆ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸಿ.ಪಿ.ಶಿವರಾಜು ಅವರಿಗೆ ಕೃತಜ್ಞತೆ ಅರ್ಪಿಸಿದರು.

ವೇದಿಕೆಯಲ್ಲಿ ಸಂಸ್ಥೆ ಆಡಳಿತಾಧಿಕಾರಿಗಳಾದ ನಿವೇದಿತಾ ನಾಗೇಶ್, ಕೊನೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ವಿತರಿಸಿದರು.

ವಿಧಾನ ಪರಿಷತ್‌ಗೆ ನಾರಾಯಣ ನಾಮನಿರ್ದೇಶನಕ್ಕೆ ಒತ್ತಾಯ

ಕನ್ನಡಪ್ರಭ ವಾರ್ತೆ ಮಂಡ್ಯಮೈಸೂರಿನ ಮಾಜಿ ಮಹಾಪೌರರು, ಪೌರ ಕಾರ್ಮಿಕರ ಮಹಾ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಬೇಕು ಎಂದು ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ ಪೌರಕಾರ್ಮಿಕರ ಸಂಘದ ರಾಜ್ಯ ಕಾರ್ಯದರ್ಶಿ ಮದ್ದೂರು ಶ್ರೀನಿವಾಸ್ ಒತ್ತಾಯಿಸಿದರು.

ಚಾಮರಾಜನಗರ ವಿಧಾನ ಸಭಾ ಕ್ಷೇತ್ರದಿಂದ ಸಫಾಯಿ ಕರ್ಮಚಾರಿ ಸಮುದಾಯದ ಸಾಲಪ್ಪ ಅವರು ೧೯೭೦-೮೦ರ ದಶಕದಲ್ಲಿ ಶಾಸಕರಾಗಿದ್ದರು. ನಂತರ ರಾಜ್ಯವನ್ನಾಳಿದ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಗಳು ಈ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ನೀಡಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.ರಾಜ್ಯದ ಸರ್ಕಾರಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಲ್ಲಿ ೭೦ ಸಾವಿರಕ್ಕೂ ಹೆಚ್ಚು ಮಂದಿ ಹಾಗೂ ೩ ಲಕ್ಷಕ್ಕೂ ಹೆಚ್ಚು ಮಂದಿ ಖಾಸಗಿ ವಲಯಗಳಲ್ಲಿ ಸ್ವಚ್ಛತಾ ಕಾರ್ಯ ಮಾಡುತ್ತಾರೆ. ಇವರ ಸಮಸ್ಯೆಗಳ ಬಗ್ಗೆ ದನಿಯಾಗಿ ಯಾರೂ ರಾಜಕೀಯ ವಲಯದಲ್ಲಿ ಇಲ್ಲ. ಆದ್ದರಿಂದ ನಾರಾಯಣ ಅವರನ್ನು ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕೆಂದು ಆಗ್ರಹಿಸಿದರು. ಗೋಷ್ಠಿಯಲ್ಲಿ ಜಿಲಾಧ್ಯಕ್ಷ ರಂಗಸ್ವಾಮಿ, ಎಂ.ಗಣೇಶ್, ಶಂಕರ್, ಲಕ್ಷ್ಮಣಮೂರ್ತಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಮಠಗಳು
ಟ್ರ್ಯಾಕ್ಟರ್ ಪಲ್ಟಿ: ಒಂದೇ ಕುಟುಂಬದ 7 ಸಾವು