ಸ್ವಾಭಿಮಾನದ ಜೀವನ ಕಟ್ಟಿಕೊಳ್ಳಿ: ಕಾವ್ಯ

KannadaprabhaNewsNetwork |  
Published : Mar 09, 2024, 01:34 AM IST
ಪೊಟೊ-8ಕೆಎನ್‌ಎಲ್‌ಎಮ್‌1-ನೆಲಮಂಗಲ ನಗರದ  ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್‌ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಸಾದಕಿ ಮಹಿಳೆಯರಿಗೆ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಸನ್ಮಾನಿಸಿದರು. | Kannada Prabha

ಸಾರಾಂಶ

ನೆಲಮಂಗಲ: ಸ್ವಯಂ ಪ್ರೇರಣೆ, ಸಮಯ ನಿರ್ವಹಣೆ ಅಳವಡಿಸಿಕೊಂಡು, ಉದ್ಯಮಶೀಲರಾಗಿ ಆರ್ಥಿಕ ಸುಧಾರಣೆಯಿಂದ ಮಹಿಳಾ ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್‌ ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಸಲಹೆ ಮಾಡಿದರು.

ನೆಲಮಂಗಲ: ಸ್ವಯಂ ಪ್ರೇರಣೆ, ಸಮಯ ನಿರ್ವಹಣೆ ಅಳವಡಿಸಿಕೊಂಡು, ಉದ್ಯಮಶೀಲರಾಗಿ ಆರ್ಥಿಕ ಸುಧಾರಣೆಯಿಂದ ಮಹಿಳಾ ಸಬಲೀಕರಣವಾಗಬೇಕೆಂದು ಕೆನರಾ ಬ್ಯಾಂಕ್‌ ಅರಶಿನಕುಂಟೆ ಶಾಖೆಯ ವ್ಯವಸ್ಥಾಪಕರಾದ ಕಾವ್ಯ ಸಲಹೆ ಮಾಡಿದರು.

ನಗರದ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್‌ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರು ಜವಾಬ್ದಾರಿಗಳನ್ನು ಅರಿತು, ಸೂಕ್ತ ಮಾರ್ಗದಲ್ಲಿ ಸ್ವಾಭಿಮಾನದ ಜೀವನ ಕಟ್ಟಿಕೊಳ್ಳಬೇಕು, ಸರ್ಕಾರದಲ್ಲಿ ಹಾಗೂ ಬ್ಯಾಂಕಿನಲ್ಲಿ ಮಹಿಳೆಯರಿಗೆಂದೇ ಇರುವ ಯೋಜನೆ, ಸೌಲಭ್ಯಗಳನ್ನು ಸದ್ಬಳಸಿಕೊಳ್ಳಬೇಕು ಎಂದು ಹೇಳಿದರು.

ರುಡ್‌ಸೆಟ್‌ ಸಂಸ್ಥೆ ನಿರ್ದೇಶಕ ರವಿಕುಮಾರ ಮಾತನಾಡಿ, ಹೆಣ್ಣು ಕೇವಲ ಮನೆಗೆ ಮಾತ್ರ ಸೀಮಿತವಲ್ಲದೆ, ಎಲ್ಲ ಕ್ಷೇತ್ರಗಳಲ್ಲೂ ತನ್ನದೇ ಆದ ಛಾಪನ್ನು ಮೂಡಿಸಿದ್ದಾರೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಉಕ್ತಿಯಂತೆ ಆಕೆಯಿಂದು ಎಲ್ಲ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾಳೆ. ಮಹಿಳೆಯರು ಕೌಶಲ್ಯಗಳನ್ನು ಹೊಂದಿ, ದುಡಿಮೆ ಆರಂಭಿಸಿ ಎಂದು ಸಲಹೆ ನೀಡಿದರು.

ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ‌ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ರುಡ್‌ಸೆಟ್‌ ಸಂಸ್ಥೆಯ ಉಪನ್ಯಾಸಕರಾದ ರವೀಂದ್ರ, ವಿದ್ಯಾ ಹೊಸಮನಿ, ಕಚೇರಿ ಸಹಾಯಕರಾದ ಅರುಣ್‌ಕುಮಾರ್, ಸಂತೋಷ್ ಇತರರು ಉಪಸ್ಥಿತರಿದ್ದರು.

ಪೊಟೊ-8ಕೆಎನ್‌ಎಲ್‌ಎಮ್‌1-ನೆಲಮಂಗಲದ ರುಡ್‌ಸೆಟ್‌ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕಿಯರನ್ನು ಸಂಸ್ಥೆಯ ನಿರ್ದೇಶಕರಾದ ರವಿಕುಮಾರ್‌ ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ