-ಹೈವೇ ಶಾಲೆಯಲ್ಲಿ ವಾರ್ಷಿಕೋತ್ಸವ
ಶಾಲೆಗಳು ಮಕ್ಕಳಿಗೆ ಶಿಕ್ಷಣ ನೀಡುವ ಜೊತೆ ಸ್ವಾಭಿಮಾನ ಮತ್ತು ದೇಶಾಭಿಮಾನ ಮೂಡಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಪಟ್ಟಣದ ಹೈವೇ ಇಂಗ್ಲೀಷ್ ಶಾಲೆಯಲ್ಲಿ ನಡೆದ ಹೈವೇ ಗ್ಯಾಲಾಕ್ಸಿ ಸಮಾರಂಭ ಉದ್ಘಾಟಿಸಿ ಮಾತನಾಡಿ ಶಾಲೆ ಆಡಳಿತ ಮಂಡಳಿ ತಾಲೂಕಿನಲ್ಲಿಯೇ ಪ್ರಥಮ ಇಂಗ್ಲೀಷ್ ಶಾಲೆಯನ್ನು ಕಡೂರು ಪಟ್ಟಣದಲ್ಲಿ ಪ್ರಾರಂಭಿಸಿ ಸಾವಿರಾರು ಮಕ್ಕಳಿಗೆ ಅಕ್ಷರ ಜ್ಞಾನವನ್ನು ಕಳೆದ 35 ವರ್ಷದಿಂದ ನೀಡುತ್ತಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಕಲಿಕೆ ತಮ್ಮ ಮಕ್ಕಳಿಗೆ ಮತ್ತಷ್ಟು ಸಿಗಬೇಕಾಗಿದೆ ಎಂದರು.ಮಕ್ಕಳಿಗೆ ಅಂಕ ಗಳಿಕೆ ಪಾಠದ ಜೊತೆಗೆ ಹಿರಿಯರಿಗೆ ಗೌರವ ಕೊಡುವ ಸಂಸ್ಕಾರ, ಭಾಷೆ, ಸಂಸ್ಕೃತಿ ಪರಂಪರೆ ಕಲಿಸಬೇಕಾಗಿದೆ. ಆದರೆ ಇಂಗ್ಲೀಷ್ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು ಎಂಬುದು ಪ್ರತಿಯೊಬ್ಬ ಪೋಷಕರ ಆಸೆಯಾಗಿದೆ. ಈ ಶಾಲೆ ಗುಣಮಟ್ಟದ ಕಟ್ಟಡ, ವಿಶಾಲವಾದ ಮೈದಾನ ಹೊಂದಿದ್ದು, ಪಠ್ಯ ಕ್ರಮಕ್ಕೆ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸು ವಂತಾಗಬೇಕು ಎಂದರು.
ಶಿಕ್ಷಣಾಧಿಕಾರಿ ಆರ್ . ಸಿದ್ದರಾಜ ನಾಯ್ಕ ಮಾತನಾಡಿ, ಕಳೆದ ಬಾರಿಯ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಈ ಶಾಲೆಯ ವಿದ್ಯಾರ್ಥಿನಿ ಇಡೀ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಕಡೂರು ಪಟ್ಟಣದ ಹೈವೆ ಇಂಗ್ಲೀಷ್ ಶಾಲೆಯಲ್ಲಿ ನಡೆದ ಹೈವೇ ಗ್ಯಾಲಾಕ್ಸಿ ಸಮಾರಂಭವನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು.