-150ನೇ ಜಯಂತ್ಯುತ್ಸವದಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಬಣ್ಣನೆ
ಕನ್ನಡಪ್ರಭಾರ್ತೆ ಚಿತ್ರದುರ್ಗ
ಶೂನ್ಯ ಪೀಠದ ಮುರುಘಾ ಪರಂಪರೆಯ ಜಯದೇವಶ್ರೀ ಪ್ರಸಾದ ನಿಲಯಗಳ ನಿರ್ಮಾತೃ ಎಂದು ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು.ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ 24ನೆಯ ಪೀಠಾಧ್ಯಕ್ಷ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150ನೇ ಜಯಂತಿ ಮಹೋತ್ಸವಕ್ಕೆ ಮುರುಘಾಮಠದ ಮುರುಗಿ ಶಾಂತವೀರ ಮಹಾಸ್ವಾಮಿಗಳವರ ಕರ್ತೃ ಸನ್ನಿಧಿಯಲ್ಲಿ ಭಾವಚಿತ್ರಕ್ಕೆ ಪುಷ್ಪವೃಷ್ಟಿ ಮಾಡುವುದರ ಚಾಲನೆ ನೀಡಿ ಮಾತನಾಡಿದರು.
"ಮಹಾತ್ಮರನ್ನು ನೆನೆವುದೇ ಘನಮುಕ್ತಿ ಪದ ಶಿವಾಧವ " ಎಂದು ಮೈಲಾರ ಬಸವಲಿಂಗ ಶರಣರು ಸೇವೆಯ ಸಾಧಕರನ್ನ ನೆನೆಯುವುದು ಮುಕ್ತಿಗೆ ಸಮ ಎಂದಿದ್ದಾರೆ. ಸಮಾಜದಲ್ಲಿ ಸತ್ಕಾರ್ಯ ಉಳಿಯುತ್ತದೆ. ಅವರು ಸಮಾಜಕ್ಕೆ ಮಾಡಿರುವ ಸೇವೆ ಸದಾ ನಮ್ಮೊಂದಿಗೆ ಆ ಮೂಲಕ ಇದ್ದೇ ಇರುತ್ತದೆ ಎಂದರು.
ಮುರುಗೇಂದ್ರ ಸ್ವಾಮೀಜಿ, ಅಭಿಮಾನಿ ಭಕ್ತರು, ಎಸ್ ಜೆ ಎಂ ವಿದ್ಯಾಪೀಠದ ನೌಕರರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪೋಟೋ: ಚಿತ್ರದುರ್ಗ ಮುರುಘಾಮಠದಲ್ಲಿ ಆಯೋಜಿಸಿದ್ದ ಜಯದೇವ ಶ್ರೀಗಳ 150ನೇ ಜಯಂತ್ಯುತ್ಸವದಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಪೋಟೋ ಫೈಲ್ ನೇಮ್- 27 ಸಿಟಿಡಿ6