ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳಿ ಅಭಿವೃದ್ಧಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆರೋಗ್ಯಕರ ಸದೃಢ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪೌಷ್ಟಿಕ ಆಹಾರದ ಮಹತ್ವ ಅರಿತು ಅನುಸರಿಸಬೇಕು ಎಂದರು.
ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಮುಖ್ಯವಾಗಿದ್ದು, ಗರ್ಭಾವಸ್ಥೆಯಿಂದಲೇ ತಾಯಂದಿರು ಸಮತೋಲಿತ ಆಹಾರ ಸೇವಿಸುವುದು ಅಗತ್ಯವಾಗಿದೆ. ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳೆವಣಿಗೆಗೆ ಅಗತ್ಯವಾದ ಪೌಷ್ಠಿಕಾಂಶಗಳನ್ನು ಒದಗಿಸುವಲ್ಲಿ ಕುಟುಂಬದೊಂದಿಗೆ ಅಂಗನವಾಡಿ ಮತ್ತು ಆರೋಗ್ಯ ಇಲಾಖೆಗಳ ಪಾತ್ರವೂ ಮಹತ್ವದ್ದಾಗಿದೆ. ಪೌಷ್ಠಿಕ ಆಹಾರ, ಆರೋಗ್ಯ, ಸ್ವಚ್ಚತೆ ಹಾಗೂ ಮಕ್ಕಳ ಸಮಗ್ರ ಬೆಳವಣಿಗೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ ಮಾತನಾಡಿ, 0 ದಿಂದ 6 ವರ್ಷದ ಮಕ್ಕಳಲ್ಲಿ ಗರ್ಭಿಣಿಯರು, ಬಾಣಂತಿಯರು ಮತ್ತು ಕಿಶೋರಿಯರಲ್ಲಿ ಅಪೌಷ್ಟಿಕತೆ, ಕುಂಠಿತ ಬೆಳೆವಣಿಗೆ ರಕ್ತ ಹೀನತೆ ಹಾಗೂ ಕಡಿಮೆ ತೂಕದ ಮಕ್ಕಳ ಜನನ ಕಡಿಮೆಗೊಳಿಸುವ ಉದ್ದೇಶ ಈ ಪೋಷಣ್ ಮಾಸಾಚರಣೆಯದ್ದಾಗಿದೆ. ಪ್ರತಿ ವರ್ಷ ಸೆಪ್ಟೆಂಬರ ಮಾಹೆಯಲ್ಲಿ ಪ್ರಮುಖ 5 ಆದ್ಯತೆಗಳೊಂದಿಗೆ ಆಚರಿಸಲ್ಪಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತದ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ತಾ.ಪಂ ಇಒ ಸುಭಾಷ ಸಂಪಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ, ಶಿಶು ಅಭಿವೃದ್ದಿ ಯೋಜನಾಧಿಕಾರಿ ರಮೇಶ ಸೂಳಿಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನವ ಮತದಾರರ ನೋಂದಣಿಗೆ ಜಾಗೃತಿ
-ಪಿ.ಎಸ್.ವಸ್ತ್ರದ, ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ