ಪೌರಾಣಿಕ ಪ್ರಸಂಗಗಳಿಂದ ನೈತಿಕ ಸಮಾಜ ನಿರ್ಮಾಣ: ಡಾ. ತಲ್ಲೂರು

KannadaprabhaNewsNetwork |  
Published : Sep 09, 2025, 01:01 AM IST
08ನಾಟಕ | Kannada Prabha

ಸಾರಾಂಶ

ಉಪ್ಪೂರಿನ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಮಣಿಪಾಲ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಪರ್ವದಲ್ಲಿ ಜಯರಾಮ್ ಮಣಿಪಾಲ ಅವರ ‘ಬಿಕ್ರಮ ಭಜರಂಗಿ’ ಪೌರಾಣಿಕ ನಾಟಕ ಬಿಡುಗಡೆಗೊಳಿಸಲಾಯಿತು.

ಉಡುಪಿ: ಮಕ್ಕಳು, ಯುವಜನತೆಯಲ್ಲಿ ನೈತಿಕತೆಯ ಸಂದೇಶ ಬಿತ್ತುವಲ್ಲಿ ಪುರಾಣಗಳು ಹೆಚ್ಚು ಪರಿಣಾಮಕಾರಿಯಾಗಿವೆ. ಪುರಾಣ ಪ್ರಸಂಗಗಳ ಯಕ್ಷಗಾನ ನಾಟಕಗಳಲ್ಲಿ ಅಡಕವಾಗಿರುವ ಸತ್ಯ, ಧರ್ಮ, ನಿಷ್ಠೆ, ಪ್ರಾಮಾಣಿಕತೆ ಮೊದಲಾದ ಮೌಲ್ಯಗಳು ಯುವಜನತೆಯಲ್ಲಿ ನೈತಿಕ ಪ್ರಜ್ಞೆಯನ್ನು ಬಡಿದೆಬ್ಬಿಸುವ ಶಕ್ತಿಯನ್ನು ಹೊಂದಿವೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.ಇಲ್ಲಿನ ಉಪ್ಪೂರಿನ ಶ್ರೀರಾಮಾಂಜನೇಯ ದೇವಸ್ಥಾನದಲ್ಲಿ ಮಣಿಪಾಲ ಗುರುವಸಂತಿ ಸಾಂಸ್ಕೃತಿಕ ವೇದಿಕೆಯ ದಶಮಾನೋತ್ಸವ ಪರ್ವದಲ್ಲಿ ಜಯರಾಮ್ ಮಣಿಪಾಲ ಅವರ ‘ಬಿಕ್ರಮ ಭಜರಂಗಿ’ ಪೌರಾಣಿಕ ನಾಟಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ರಂಗಭೂಮಿ ಉಡುಪಿ ಈ ವರ್ಷ 25 ಶಾಲೆಗಳಲ್ಲಿ ರಂಗ ಶಿಕ್ಷಣವನ್ನು ನೀಡುತ್ತಿದೆ. ನಮ್ಮೆಲ್ಲರ ಉದ್ದೇಶ ಸುಸಂಸ್ಕೃತ ಸಮಾಜದ ನಿರ್ಮಾಣ. ಮಕ್ಕಳನ್ನು ಸುಶಿಕ್ಷಿತರನ್ನಾಗಿ ಮಾಡಿದರಷ್ಟೇ ಸಾಲದು. ಬಾಲ್ಯದಲ್ಲಿಯೇ ನೈತಿಕ ಮೌಲ್ಯಗಳನ್ನು ಕಲಿಸಿ. ಮಕ್ಕಳನ್ನು ನಾಟಕ, ಯಕ್ಷಗಾನ, ಭಜನೆ, ಜಾನಪದ ರಂಗಕಲೆ ಪ್ರದರ್ಶನಕ್ಕೆ ಕರೆದುಕೊಂಡು ಹೋಗಿ ಅವರಲ್ಲಿ ಆಸಕ್ತಿ ಹುಟ್ಟಿಸಿ ಎಂದು ಡಾ.ತಲ್ಲೂರು ಹೇಳಿದರು.

ಶ್ರೀ ರಾಮಾಂಜನೇಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪರಮೇಶ್ವರ ಮುದ್ದೋಡಿ ಶುಭಾಶಂಸನೆಗೈದರು. ಉಷಾ ಮ್ಯಾರೇಝ್ ಬ್ಯುರೋದ ಎಂ.ಡಿ. ಸುಗುಣ ಕುಮಾರ್, ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕೋಅಪರೇಟಿವ್ ಸೊಸೈಟಿ ಅಧ್ಯಕ್ಷ ಅಶೋಕ್ ಕಾಮತ್ ಕೊಡಂಗೆ, ಸಿವಿಲ್ ಇಂಜಿನಿಯರ್ ಪರಮೇಶ್ವರ ಪರ್ಕಳ, ಉಡುಪಿ ತಾ.ಪಂ. ಮಾಜಿ ಸದಸ್ಯ ಸತ್ಯಾನಂದ ನಾಯಕ್, ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್.ಪಿ., ರಾಮಾಂಜನೇಯ ದೇವಳದ ಅಧ್ಯಕ್ಷ ಕೆ.ಪಿ.ನಾಯಕ್, ಸಂಗೀತ ವಿದ್ವಾನ್ ಪಾಡಿಗಾರ್ ಲಕ್ಷ್ಮೀನಾರಾಯಣ ಉಪಾಧ್ಯ ಉಪಸ್ಥಿತರಿದ್ದರು.

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಸುಗುಣ ಕುಮಾರ್ ಅವರಿಗೆ ಅಭಿನಂದನೆ ನಡೆಯಿತು. ಸಂತೋಷ್ ಸಗ್ರಿ ನಿರೂಪಿಸಿದರು. ಜಯರಾಮ ಮಣಿಪಾಲ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ