ಮೌಲ್ಯಯುತ ಸಮಾಜ ನಿರ್ಮಾಣ ಇಂದಿನ ಅಗತ್ಯ

KannadaprabhaNewsNetwork | Published : Jul 2, 2024 1:31 AM

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಮೌಲ್ಯಯುತ ಹಾಗೂ ಸಂಸ್ಕಾರಯುತ ಸಮಾಜ ನಿರ್ಮಾಣದ ಅವಶ್ಯಕತೆಯಿದ್ದು, ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಂತೆ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮೌಲ್ಯಯುತ ಹಾಗೂ ಸಂಸ್ಕಾರಯುತ ಸಮಾಜ ನಿರ್ಮಾಣದ ಅವಶ್ಯಕತೆಯಿದ್ದು, ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಂತೆ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.

ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠ ಹಾಗೂ ನಗರದ ಹಿರಿಯ ವಕೀಲ ಎಚ್.ಬಿ.ಶಿರೋಳ ಕುಟುಂಬದ ಆಶ್ರಯದಲ್ಲಿ ನಗರದ ಪ್ಲೇಸಂಟ್ ಸ್ಟೇ ಹೋಟೆಲ್ ಸಭಾಭವನದಲ್ಲಿ ಜರುಗಿದ ಹೇಮ-ವೇಮನ ಸದ್ಬೋಧನ ಪೀಠದ ವಾರ್ಷಿಕೋತ್ಸವ, ಪ್ರತಿಭಾವಂತ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಳ ಆದರ್ಶ ಬದುಕು ಹಾಗೂ ಮಹಾಯೋಗಿ ವೇಮನರ ತತ್ವ ಚಿಂತನೆಗಳನ್ನು ಮನೆ ಮನಗಳಿಗೆ ತಲುಪಿಸಿ ಸಮಾಜದಲ್ಲಿ ಪರಿವರ್ತನೆ ತರುವ ಉದ್ದೇಶವಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಪಡೆದು ಅವರ ಕಲಿಕೆಗೆ ನೆರವಾಗುವ ಮೂಲಕ ಹೇಮ-ವೇಮನ ಸದ್ಬೋಧನ ಪೀಠ ಸಮಾಜಕ್ಕೆ ಮಾದರಿಯಾಗಿದೆ. ಪೀಠದ ಕಾರ್ಯಕ್ಕೆ ರಡ್ಡಿ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಸಲಹೆ ನೀಡಿದರು.

ವಿಜಯಪುರ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಸುರೇಶ ದೇಸಾಯಿ(ಕಲಕೇರಿ) ಮಾತನಾಡಿ, ಹೇಮ ವೇಮನ ಸದ್ಬೋಧನ ಪೀಠದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಪ್ರಶಂಸನೀಯ. ಬಡ ಮಕ್ಕಳ ಶಿಕ್ಷಣಕ್ಕಾಗಿ ನೆರವಾಗುವ ಈ ಕಾರ್ಯ ಪುಣ್ಯದ ಕೆಲಸ. ಇದರ ಪ್ರೇರಣೆಯಿಂದ ನಮ್ಮ ಸಂಸ್ಥೆಯೂ ವಿದ್ಯಾರ್ಥಿಗಳನ್ನು ದತ್ತು ಪಡೆಯುತ್ತಿದೆ ಎಂದು ತಿಳಿಸಿದರು.

ಜೇವರ್ಗಿಯ ಸಿದ್ಧಬಸವ ಕಬೀರಾನಂದ ಸ್ವಾಮಿಗಳು ಮತ್ತು ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಮಾತನಾಡಿ, ಬಡ ಪ್ರತಿಭಾವಂತ ಮಕ್ಕಳನ್ನು ದತ್ತು ಪಡೆದು ಅವರ ಓದಿಗೆ ನೆರವಾಗುವ ಸದ್ಬೋಧನ ಪೀಠಕ್ಕೆ ಇಡೀ ಸಮಾಜದ ಸಹಕಾರವಿರಲಿ ಎಂದರು.

ಕಾರ್ಯಕ್ರಮದಲ್ಲಿ ಇಬ್ಬರು ಪಿಯುಸಿ, ಇಬ್ಬರು ಬಿಇ ಪ್ರವೇಶ ಪಡೆದ ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲಾಯಿತಲ್ಲದೇ, ಕಳೆದ ವರ್ಷ ದತ್ತು ಪಡೆದಿರುವ ವಿದ್ಯಾರ್ಥಿಗಳಿಗೆ ಸಹಾಯಧನ ನೀಡಲಾಯಿತು. ರಡ್ಡಿ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡಲಾಯಿತು.

ಎರೆಹೊಸಳ್ಳಿಯ ವೇಮನ ಸಂಸ್ಥಾನಮಠದ ರಡ್ಡಿ ಗುರುಪೀಠದ ಶ್ರೀ ವೇಮನಾನಂದ ಮಹಾಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಎಚ್.ಬಿ.ಶಿರೋಳ, ಶಾರದಾ ಶಿರೋಳ, ಎಸ್.ಟಿ.ಪಾಟೀಲ, ಬಸವರಾಜ ಯಾಳಗಿ, ಹನಮಂತಗೌಡ ಪಾಟೀಲ(ಪಡಗಾನೂರ), ಅನಂದ ಶಿರೋಳ, ಶೈಲಾ ಶಿರೋಳ, ಸಂಗಪ್ಪ ಹುಣಸಿಕಟ್ಟಿ, ಕಾಶೀನಾಥ ಸಾಹುಕಾರ, ಡಿ.ಪಿ.ಅಮಲಝರಿ, ಮಹಾದೇವ ಪಾಟೀಲ, ಸದ್ಬೋಧನ ಪೀಠದ ನಿರ್ದೇಶಕ ರಂಗಣ್ಣ ಕಟಗೇರಿ, ರಮೇಶ ಅಣ್ಣಿಗೇರಿ, ಎಚ್.ಜಿ.ಹುದ್ದಾರ, ಡಿ.ಎಂ.ಬೆಣ್ಣೂರ, ವಿನಾಯಕ ಪಾಟೀಲ, ಈಶ್ವರ ಕೋನಪ್ಪನವರ, ಕೃಷ್ಣಾ ಯಡಹಳ್ಳಿ, ಸಿದ್ದಣ್ಣ ಮೆಳ್ಳಿಗೇರಿ, ಸಿ.ಎನ್.ಬಾಳಕ್ಕನವರ, ಮಾಲತೇಶ ಅಮಾತೆಪ್ಪನವರ, ಪೀಠದ ಕಾರ್ಯದರ್ಶಿ ಟಿ.ಎಚ್.ಸನ್ನಪ್ಪನವರ ಇದ್ದರು.

ಬೆನಕಟ್ಟಿಯ ಹೇಮರಡ್ಡಿ ಮಲ್ಲಮ್ಮ ಭಜನಾ ತಂಡದವರು ವೇಮನರ ವಚನ ಪ್ರಸ್ತುತಪಡಿಸಿದರು. ಇಂದಿರಾ ಬಿದರಿ ಸ್ವಾಗತಿಸಿದರು. ಅಜಿತಗೌಡ ಪಾಟೀಲ ನಿರೂಪಿಸಿದರು. ಶ್ರೀನಿವಾಸ ಬೆನಕಟ್ಟಿ ವಂದಿಸಿದರು.

------------------------------

ಕೋಟ್‌....

ಸಮಾಜದ ಹಿತಕ್ಕಾಗಿ ಬಾಳಿದವರು ಅಳಿದ ಮೇಲೂ ಉಳಿಯುತ್ತಾರೆ. ಎಲ್ಲರಂತೆ ಸಾಮಾನ್ಯ ವ್ಯಕ್ತಿಗಳಾಗಿ ಆದರ್ಶದ ಬದುಕು ಬಾಳಿ ಜಗತ್ತಿಗೆ ದಾರಿ ತೋರಿದ ಹೇಮರಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನರು ಇಂದು ಪೂಜ್ಯನೀಯ ಸ್ಥಾನದಲ್ಲಿದ್ದಾರೆ.

- ಬಿ.ಆರ್.ಪೊಲೀಸ್‌ ಪಾಟೀಲ, ಹಿರಿಯ ಸಾಹಿತಿ

Share this article