ವಿದ್ಯುತ್ ಸ್ಪರ್ಶಿಸಿ ಎತ್ತು ಸಾವು

KannadaprabhaNewsNetwork |  
Published : Jul 23, 2024, 12:37 AM IST
ಪೋಟೋ:- ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಬಳಿಯ ದೊಡ್ಡಳ್ಳಿ ಗ್ರಾಮದಲ್ಲಿ ರೈತ ಸದಾ ಎಂಬುವರು ಉಳಿಮೆ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಗೊಂಡು ಒಂದು ಎತ್ತು ಸಾವುಗೀಡಾಗಿರುವುದು | Kannada Prabha

ಸಾರಾಂಶ

ವಿದ್ಯುತ್‌ ಲೀಕೇಜ್‌ಗೊಂಡು ಗದ್ದೆಯೊಳಗೆ ಉಳುಮೆ ಮಾಡುತ್ತಿದ್ದಾಗ ವಿದ್ಯುತ್‌ ಸ್ಪರ್ಶಿಸಿ ಎತ್ತು ಸಾವನ್ನಪ್ಪಿದೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಶನಿವಾರಸಂತೆ

ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದಾಗ ಗದ್ದೆ ಏರಿಯಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶಿಸಿ ಎತ್ತು ಸಾವಿಗೀಡಾಗಿದ್ದು ಹಾಗೂ ಮತ್ತೊಂದು ಎತ್ತು ಮತ್ತು ಉಳುಮೆ ಮಾಡುತ್ತಿದ್ದ ರೈತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಬೆಳಗ್ಗೆ ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಸಮೀಪದ ದೊಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ.

ಭಾನುವಾರ ಬೆಳಗ್ಗೆ ದೊಡ್ಡಳ್ಳಿ ಗ್ರಾಮದ ರೈತ ಕುಂಬುಗೌಡನ ಸದಾ ಎಂಬುವರು ತಮ್ಮ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದರು. ಗದ್ದೆ ಏರಿಯಲ್ಲಿ ಹಾದು ಹೋಗಿರುವ ವಿದ್ಯುತ್ ಕಂಬದಿಂದ ವಿದ್ಯತ್ ಲೀಕೇಜ್‍ಗೊಂಡು ಗದ್ದೆಯೊಳಗೆ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಗೊಂಡು ಎತ್ತು ಸಾವನ್ನಪ್ಪಿದೆ. ಉಳುಮೆ ಮಾಡುತ್ತಿದ್ದ ಸದಾ ಅವರಿಗೆ ವಿದ್ಯುತ್ ಶಾಕ್ ಹೊಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ಸಂದರ್ಭದಲ್ಲಿ ಮತ್ತೊಂದು ಎತ್ತು ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ವೇಳೆ ಸದಾ ಅವರ ಪತ್ನಿ ವೀಣಾ ಗದ್ದೆಯ ಮತ್ತೊಂದು ಬದಿಯಲ್ಲಿ ಕೆಲಸ ಮಾಡುತ್ತಿದ್ದರು, ರೈತ ಸದಾ ಅವರಿಗೆ ಸ್ವಲ್ಪ ಮಟ್ಟಿಗೆ ವಿದ್ಯುತ್ ಶಾಕ್ ತಗುಲಿದ್ದರಿಂದ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರಪೇಟೆ ವ್ಯಾಪ್ತಿಯಲ್ಲಿ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೀದಿ ನಾಯಿ ಮರಿ ದತ್ತು ಪಡೆದು ಮಾನವೀಯತೆ ತೋರಿ
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಕಡ್ಡಾಯ