ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಹೊರವಲಯದಲ್ಲಿ ಪೇಟೆ ಒಕ್ಕಲಗೇರಿಯ ನಾಡಪ್ರಭು ಕೆಂಪೇಗೌಡ ಯುವಕರ ಬಳಗ ಆಯೋಜಿಸಿದ್ದ 1ನೇ ವರ್ಷದ ರಾಜ್ಯ ಮಟ್ಟದ ಜೋಡಿ ಹಸುಗಳು ಮತ್ತು ಚಕ್ಕಡಿ ಓಟದ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಯಾವುದೇ ಸ್ಪರ್ಧೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಸ್ಪರ್ಧಾ ಸಮಯದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡಿದಂತೆ ಶಾಂತ ರೀತಿಯಿಂದ ವರ್ತಿಸಬೇಕು ಎಂದರು.
ಗ್ರಾಮೀಣ ಸೊಗಡಿನ ಸಂಸ್ಕೃತಿ ಬಿಂಬಿಸುವ ಎತ್ತಿನಗಾಡಿ ಓಟದ ರಾಸುಗಳಿಗೂ ಮತ್ತು ರೈತರಿಗೂ ಅವಿನಾವಭಾವ ಸಂಬಂಧವಿದೆ. ಸ್ಪರ್ಧೆಗಳಿಂದ ರೈತರಿಗೆ ಮನರಂಜನೆ ಜೊತೆಗೆ ಕ್ರೀಡಾ ಸ್ಫೂರ್ತಿ ತುಂಬುತ್ತದೆ ಎಂದರು.ಈ ಹಿಂದೆ ಗ್ರಾಮೀಣ ಪ್ರದೇಶದ ಜನರು ಶುಭ ಸಮಾರಂಭಗಳಿಗೆ ತೆರಳಲು ಎತ್ತಿನ ಗಾಡಿಗಳನ್ನು ಬಳಸುತ್ತಿದ್ದರು. ರೈತರು ಜಾನುವಾರುಗಳೊಂದಿಗೆ ಸಂಬಂಧಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ರಾಸುಗಳ ಪಾತ್ರ ಶ್ಲಾಘನೀಯ ಎಂದು ಬಣ್ಣಿಸಿದರು.
ರೈತರು ಕೃಷಿ ಚಟುವಟಿಕೆಗಳ ಜೊತೆಗೆ ಮನರಂಜನೆಗೂ ಜಾನುವಾರುಗಳನ್ನು ಬಳಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲಿ ಇಂತಹ ಸ್ಪರ್ಧೆಗಳಿಗೆ ಉತ್ತೇಜನ ನೀಡಬೇಕು ಎಂದರು.
ರಾಜ್ಯ ವಿವಿಧ ಭಾಗಗಳಿಂದ 40ಕ್ಕೂ ಅಧಿಕ ಜೋಡಿ ರಾಸುಗಳು ಭಾಗವಹಿಸಿದ್ದವು. ಈ ವೇಳೆ ತಾಪಂ ಇಒ ಎಚ್.ಜಿ. ಶ್ರೀನಿವಾಸ್, ಮನ್ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಜೆ.ದೇವರಾಜು, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ.ಎಸ್.ಕೀರ್ತನ್ ಕುಮಾರ್, ಮುಖಂಡ ಬಸವರಾಜು ಹಾಗೂ ನಾಡಪ್ರಭು ಕೆಂಪೇಗೌಡ ಯುವಕರ ಬಳಗದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.