ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್‌ ಯೋಜನೆಗಳು

KannadaprabhaNewsNetwork | Published : Apr 24, 2025 11:45 PM

ಸಾರಾಂಶ

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಗೆ ಬಂಪರ್‌ ಕೊಡುಗೆಗಳು ದೊರಕಿದ್ದು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ 475 ಕೋಟಿ ಅಂದಾಜಿನಲ್ಲಿ 110 ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಗೆ ಬಂಪರ್‌ ಕೊಡುಗೆಗಳು ದೊರಕಿದ್ದು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ 475 ಕೋಟಿ ಅಂದಾಜಿನಲ್ಲಿ 110 ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಮಲೆಮಹದೇಶ್ವರ ಬೆಟ್ಟದ ವಜ್ರಮಲೆ ಎದುರಿನ ಜರ್ಮನ್‌ ಟೆಂಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ 2025 ಸಾಲಿನ ಸಚಿವ ಸಂಪುಟ ಸಭೆಯಲ್ಲಿ 78 ವಿಷಯಗಳಿಗೆ ಸಂಬಂಧಿಸಿದಂತೆ ಸುಮಾರು ₹3647 ಕೋಟಿ 62 ಲಕ್ಷ ರುಗಳಷ್ಟು ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಅಂಗೀಕಾರ ನೀಡಲಾಯಿತು. ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜು ಇದ್ದು, ಕಾಲೇಜು ಆಸ್ಪತ್ರೆ ಇರುವುದರಿಂದ ಕೊಳ್ಳೇಗಾಲದಲ್ಲಿ 250 ಹಾಸಿಗೆಯುಳ್ಳ ಜಿಲ್ಲಾ ಆಸ್ಪತ್ರೆ ಸ್ಥಾಪಿಸಲಾಗುವುದು ಮತ್ತು ಚಾಮರಾಜನಗರ ಮೆಡಿಕಲ್‌ ಕಾಲೇಜಿನಲ್ಲಿ ₹50 ಕೋಟಿ ವೆಚ್ಚದಲ್ಲಿ ಎಂಡೋಸ್ಕೋಪಿ ವಿಭಾಗ ತೆರೆಯಲಾಗುವುದು ಎಂದರು.

ಕೆರೆಗಳ ಸಮಗ್ರ ಅಭಿವೃದ್ಧಿ:ತಾಲೂಕಿನ ಮರಗದ ಕೆರೆ, ಯಡಿಯೂರು, ಅಡ್ಡಹಳ್ಳ ಕೆರೆ, ಅಮಚವಾಡಿ ಕೆರೆ, ಹಾಗೂ ಕಥನಾಯಕನ ಕೆರೆಗಳ ಸಮಗ್ರ ಅಭಿವೃದ್ಧಿ ಕಾಮಗಾರಿಗೆ 11 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಯಿತು. ಜಿಲ್ಲಾ ಕೇಂದ್ರಕ್ಕೆ 2ನೇ ಹಂತದ ಒಳಚರಂಡಿ ವ್ಯವಸ್ಧೆ ಕಲ್ಪಿಸಲು 138.31 ಕೋಟಿ ಮತ್ತು ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಮಾಲಂಗಿ ಗ್ರಾಮದ ಬಳಿಯಿಂದ ಕಾವೇರಿ ನದಿ ಮೂಲದಿಂದ 3ನೇ ಹಂತದ ನೀರು ಸರಬರಾಜು ಮಾಡುವ 154.28 ಕೋಟಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.ಅಭಿವೃದ್ಧಿ ಪ್ರಾಧಿಕಾರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಶ್ರೀ ಮಂಟೇಸ್ವಾಮಿ, ಶ್ರೀ ರಾಚಪ್ಪಾಜಿ ಹಾಗೂ ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲು ತೀರ್ಮಾನ ಕೈಗೊಳ್ಳಲಾಯಿತು. ಬುಡಕಟ್ಟು ಜನರು ವಾಸಿಸುವ ಪ್ರದೇಶದಲ್ಲಿ ರಸ್ತೆ, ಚರಂಡಿ, ವಿದ್ಯುತ್‌ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿಪಡಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಮಾನವ-ಆನೆ ಸಂಘರ್ಷ ತಡೆಗಟ್ಟಲು ₹210 ಕೋಟಿ ರು.ಗಳನ್ನು ವಿನಿಯೋಗಿಸಲು ತೀರ್ಮಾನ ಕೈಗೊಳ್ಳಲಾಯಿತು. 8.60 ಕೋಟಿ ವೆಚ್ಚದಲ್ಲಿ ಪ್ರಜಾಸೌಧ:

ಮತ್ತು ತಾಲೂಕು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಅವರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎಚ್ ಕೆ ಪಾಟೀಲ್, ಮಹಾದೇವಪ್ಪ, ಸುಧಾಕರ್, ಎ.ಆರ್‌. ಕೃಷ್ಣಮೂರ್ತಿ, ಪುಟ್ಟರಂಗಶೆಟ್ಟಿ, ಎಂ.ಆರ್‌. ಮಂಜುನಾಥ್‌ ಇತರರು ಇದ್ದರು.ಉಳುವವನೆ ಒಡೆಯ:

ಚಾಮರಾಜನಗರ ವಿಧಾಸಭಾ ಕ್ಷೇತ್ರದ ಸಿದ್ದಯ್ಯನಪುರ ಸುತ್ತಮುತ್ತಲ ಪ್ರದೇಶದಲ್ಲಿ ಹಲವಾರು ವರ್ಷಗಳಿಂದ ವ್ಯವಸಾಯ ಮಾಡುತ್ತಾ ಬಂದಿರುವ ಉಳುವವನೆ ಒಡೆಯನಿಗೆ ಖಾತೆ ಮಾಡಿಕೊಬೇಕಾಗುತ್ತದೆ. ನೂರಾರು ವರ್ಷಗಳಿಂದ ಅಲ್ಲೇ ಇದ್ದಾರೆ. ಅವರೇ ಒಡೆಯರು ಎಂದು ಪ್ರಮೋದಾದೇವಿ ಕೋರ್ಟ್ ಗೆ ಹೋದ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು.ಬಿಜೆಪಿಯವರ ಸುಳ್ಳಿಗೆ 3647 ಕೋಟಿ ಉತ್ತರ:

ಗ್ಯಾರಂಟಿ ಯೋಜನಗಳಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ ಹಣ ಖಾಲಿಯಾಗಿದೆ ಎಂದು ಎಂದು ಬಿಜೆಪಿಗರು ಸುಳ್ಳು ಹೇಳುತ್ತಾರೆ.ಇಷ್ಟು ದೊಡ್ಡ ನಿರ್ಣಯ ಮಹದೇಶ್ವರ ಬೆಟ್ಟದಲ್ಲಿ ಇವತ್ತು ಆಗಿದೆ. ಬಿಜೆಪಿಯವರ ಸುಳ್ಳಿಗೆ 3647 ಕೋಟಿ ರು. ಯೋಜನೆಗಳಿಗೆ ಅಂಗೀಕಾರ ನೀಡುವ ಮೂಲಕ ಉತ್ತರ ನೀಡಿದ್ದೇವೆ. ಸರ್ಕಾರದ ಬಳಿ ಹಣ ಇಲ್ಲದೇ ಇದೆಲ್ಲ ಸಾಧ್ಯವಾ ನಾವು ಗ್ಯಾರಂಟಿಗೆ ಹಣ ಬಳಸುತ್ತಾರೆ ಎಂದು ಸುಳ್ಳು ಹೇಳ್ತಾರೆ. ಹೀಗಾಗಿ ಬಿಜೆಪಿ ಅವರಿಗೆ ತಿಳಿಸಿ.ನಿಮಗೆ ಕಳಕಳಿಯ ಮನವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರ ಆಕ್ಸಿಜನ್ ಪ್ರಕರಣ:ಸತ್ತ ಕುಟುಂಬಕ್ಕೆ ಜಾಬ್ ಸಿಗಲಿಲ್ಲ ಎನ್ನುವ ಪ್ರಶ್ನೆ ಇವತ್ತು ಆ ವಿಷಯ ಚರ್ಚೆ ಮಾಡಿಲ್ಲ. ಒಂದು ಬಾರಿ ಅಪಾಯಿಂಟ್ ಮಾಡಿ ನಿರ್ಣಯ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಧ್ವನಿಗೂಡಿಸಿದರು.

Share this article