ಕನ್ನಡಪ್ರಭ ವಾರ್ತೆ ಮಂಗಳೂರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.6ರಂದು ಸಂಜೆ 5 ಗಂಟೆಗೆ ಶರವು ದೇವಸ್ಥಾನ ಬಳಿಯ ರಾಧಾಕೃಷ್ಣ ದೇವಸ್ಥಾನದಿಂದ ಶ್ರೀ ಸಿದ್ಧಿವಿನಾಯಕ ದೇವರ ವಿಗ್ರಹವನ್ನು ಓಂಕಾರ ನಗರಕ್ಕೆ ತರಲಾಗುವುದು. 3 ದಿನಗಳ ಕಾಲ ವೈದಿಕ ಕಾರ್ಯಕ್ರಮಗಳೊಂದಿಗೆ ವಿವಿಧ ಪೂಜೆಗಳು ನಡೆಯಲಿವೆ ಗಣೇಶೋತ್ಸವ ವೇದಿಕೆಯಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಲಿದೆ ಎಂದು ಹೇಳಿದರು.
ಸೆ.7ರಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ, ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತೆನೆ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ 5ರಿಂದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನಡೆಯಲಿದೆ. 8ರಿಂದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸೆ.8ರಂದು ಸಂಜೆ 5ರಿಂದ ಧಾರ್ಮಿಕ ಸಭೆ ನಡೆಯಲಿದೆ. ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ಸಾಧಕರನ್ನು ಸನ್ಮಾನಿಸಲಾಗುವುದು. 8ರಿಂದ ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಂದ ಕಲಾವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ವಿವರ ನೀಡಿದರು.ಸೆ.9ರಂದು ಬೆಳಗ್ಗೆ ಗಂಟೆ 8ರಿಂದ ಲೋಕ ಕಲ್ಯಾಣಾರ್ಥವಾಗಿ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗ ಆರಂಭಗೊಂಡು, 11.30ಕ್ಕೆ ಪೂರ್ಣಾಹುತಿಯಾಗಲಿದೆ. ಮಧ್ಯಾಹ್ನ 3.30ಕ್ಕೆ ಗಣಪತಿ ವಿಜರ್ಸನಾ ಶೋಭಾಯಾತ್ರೆಗೆ ಚಾಲನೆ ದೊರೆಯಲಿದೆ. ಓಂಕಾರ ನಗರದಿಂದ ಬಂಟ್ಸ್ ಹಾಸ್ಟೆಲ್, ಪಿ.ಪಿಎಸ್ ವೃತ್ತ, ನ್ಯೂಚಿತ್ರಾ ಟಾಕಿಸ್, ರಥಬೀದಿ, ವೆಂಕಟರಮಣ ದೇವಸ್ಥಾನ ರಸ್ತೆಯಲ್ಲಿ ಸಾಗಿ ಶ್ರೀ ಮಹಾಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ಗಣಪತಿ ಮೂರ್ತಿಯ ವಿಸರ್ಜನೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಜಿಲ್ಲೆಯ ವಿವಿಧ ಭಜನಾ ತಂಡಗಳು ಭಾಗವಹಿಸಲಿವೆ ಎಂದರು.