ಬೆಂ-ಮೈ ಎಕ್ಸ್ ಪ್ರೆಸ್ ವೇನಲ್ಲಿ ಹೊತ್ತಿ ಉರಿದ ಹೂ ಗಿಡಗಳು

KannadaprabhaNewsNetwork |  
Published : Feb 03, 2024, 01:48 AM IST
2ಕೆಆರ್ ಎಂಎನ್ 5.ಜೆಪಿಜಿಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇನ ವಿಭಜಕದಲ್ಲಿನ ಹೂ ಗಿಡಗಳಿಗೆ ಬೆಂಕಿ ಹೊತ್ತಿಕೊಂಡಿರುವುದು | Kannada Prabha

ಸಾರಾಂಶ

ರಾಮನಗರ: ಬೆಂಕಿ ಕಿಡಿಯಿಂದಾಗಿ ಹೂ, ಗಿಡಗಳು ಹೊತ್ತಿ ಉರಿದಿರುವಂತಹ ಘಟನೆ ಬೆಂ-ಮೈ ಎಕ್ಸ್​ಪ್ರೆಸ್ ವೇನಲ್ಲಿ ಮಾಯಗಾನಹಳ್ಳಿ ಸಮೀಪ ನಡೆದಿದೆ.

ರಾಮನಗರ: ಬೆಂಕಿ ಕಿಡಿಯಿಂದಾಗಿ ಹೂ, ಗಿಡಗಳು ಹೊತ್ತಿ ಉರಿದಿರುವಂತಹ ಘಟನೆ ಬೆಂ-ಮೈ ಎಕ್ಸ್​ಪ್ರೆಸ್ ವೇನಲ್ಲಿ ಮಾಯಗಾನಹಳ್ಳಿ ಸಮೀಪ ನಡೆದಿದೆ. ಎಕ್ಸ್ ಪ್ರೆಸ್ ವೇ ಸುಂದರವಾಗಿ ಕಾಣಿಸಲೆಂದು ಹೆದ್ದಾರಿಯ ವಿಭಜಕ (ಡಿವೈಡರ್ )ನಲ್ಲಿ ಹೂ ಗಿಡಗಳನ್ನು ನೆಟ್ಟು ಬೆಳೆಸಲಾಗಿದೆ. ಈ ಹೂವಿನ ಗಿಡಗಳು ಬೆಂಕಿಗಾಹುತಿಯಾಗಿವೆ. ಸಿಗರೇಟ್ ಸೇದಿ ಬಿಸಾಕಿದ ಪರಿಣಾಮ ಕಿಡಿ ಹತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಿಡಗಳಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಗೆ ಆವರಿಸಿಕೊಂಡಿತ್ತು. ನೀರಿನ ವಾಹನ ಬರಲು ತಡವಾದ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರ ವಾಹನ ತಡೆದು ಬಾಟಲ್​ ನೀರು ಹಾಕಿ ಬೆಂಕಿ ನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!