ಚಲಿಸುತ್ತಿರುವಾಗಲೇ ಹೃದಯಾಘಾತ: ಬಸ್‌ ಚಾಲಕ ಮೃತ್ಯು

KannadaprabhaNewsNetwork |  
Published : May 09, 2026, 02:30 AM IST
ಚಿತ್ರ :  8ಎಂಡಿಕೆ1 : ರಸ್ತೆ ಬದಿಗೆ ಜಾರಿದ ಬಸ್.  | Kannada Prabha

ಸಾರಾಂಶ

ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ಶುಕ್ರವಾರ ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ. ಬೆಂಗಳೂರು ಮೂಲದ ಶಿವಕುಮಾರ್ (50) ಮೃತರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿ ಬಸ್ ಅಪಘಾತಕ್ಕೀಡಾದ ಘಟನೆ ಮಡಿಕೇರಿ ಸಮೀಪದ ತಾಳತ್ ಮನೆ ಬಳಿ ಶುಕ್ರವಾರ ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ. ಬೆಂಗಳೂರು ಮೂಲದ ಶಿವಕುಮಾರ್ (50) ಮೃತರು.

ಬೆಂಗಳೂರಿನಿಂದ ಹೊರಟ ಖಾಸಗಿ ಬಸ್ ಮಡಿಕೇರಿ ಸಮೀಪದ ತಲುಪುತ್ತಿದ್ದಂತೆ ಚಾಲಕನಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ಪರಿಣಾಮ ಬಸ್ ರಸ್ತೆ ಪಕ್ಕದ ಇಳಿಜಾರಿಗೆ ವಾಲಿಕೊಂಡಿದೆ. ತನಗೆ ಹೃದಯಘಾತವಾಗುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ. ಹೃದಯಾಘಾತ ತೀವ್ರವಾಗುತ್ತಿದ್ದಂತೆ ಚಾಲಕ ಚರಂಡಿಯ ಬಳಿ ಬಸ್ ನಿಲ್ಲಿಸಿದ್ದಾರೆ. ಈ ವೇಳೆ ಬಸ್ ಕೊಂಚ ವಾಲಿಕೊಂಡಿದೆ. ಆದರೆ ಪ್ರಯಾಣಿಕರ ಜೀವಕ್ಕೇನು ಅಪಾಯವಾಗಿಲ್ಲ. ತಕ್ಷಣವೇ ಚಾಲಕನನ್ನು ಮಡಿಕೇರಿ ಬಳಿಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಾಲಕ ಈ ಸಂದರ್ಭ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಮಡಿಕೇರಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಸ್ತೆ ಬದಿಯಲ್ಲಿ ಬಸ್ ವಾಲಿಕೊಂಡು ನಿಂತ ಕಾರಣ ಹೆದ್ದಾರಿಯಲ್ಲಿ ಇತರ ವಾಹನ ಸಂಚಾರಕ್ಕೆ ಯಾವುದೇ ಅಡೆ ತಡೆ ಆಗಿಲ್ಲ. ಇತ್ತ ಘಟನೆಯಿಂದ ಆತಂಕಗೊಂಡ ಪ್ರಯಾಣಿಕರಿಗೆ ಬೇರೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಗತ್ತಿನೆಲ್ಲೆಡೆ ರೆಡ್ ಕ್ರಾಸ್ ಸೇವೆ ಅನನ್ಯ: ಡಾ. ಅಶೋಕ್
ಮಾಹೆ ಎಂಐಟಿಗೆ ಸಿಎಫ್‌ಎ ಇನ್‌ಸ್ಟಿಟ್ಯೂಟ್ ಮಾನ್ಯತೆ