ಸಮಯಕ್ಕೆ ಬಾರದ ಬಸ್‌: ವಿದ್ಯಾರ್ಥಿಗಳಿಂದ ಪ್ರತಿಭಟನೆ

KannadaprabhaNewsNetwork |  
Published : Sep 12, 2026, 02:45 AM IST
ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮಸ್ಥರು, ವಿದ್ಯಾರ್ಥಿಗಳಿಗೆ ಪ್ರತಿಭಟನೆ ನಡೆಸಿ ಸಾರಿಗೆ ನಿಯಂತ್ರಕ ಎಂ.ಎಸ್. ಶಾಲದಾರಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಗುಡಿಸಾಗರ, ನಾಗನೂರ, ಸೊಟಕನಾಳ ಗ್ರಾಮಗಳಿಗೆ ಪ್ರತಿದಿನ ಸಮಯಕ್ಕೆ ಸರಿಯಾಗಿ ಬಸ್ ಬರುವುದಿಲ್ಲ. ಕೆಲವೊಮ್ಮೆ ಬಸ್ ಬಂದರೆ ಅದರಲ್ಲಿ ಹತ್ತಲೂ ಜಾಗವಿರುವುದಿಲ್ಲ. ಪ್ರತಿ ದಿನವೂ ತಡವಾಗಿ ಬರುವ ಕಾರಣ ಎರಡು ಬಸ್‌ನ ಜನರು ಒಂದೇ ಬಸ್‌ನಲ್ಲಿ ಪ್ರಯಾಣಸುವಂತಾಗಿದೆ.

ನವಲಗುಂದ:

ಸಮಯಕ್ಕೆ ಬಸ್‌ ಬಾರದ ಕಾರಣ ಆಕ್ರೋಶಗೊಂಡ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು ನವಲಗುಂದ ಕೊಂಗವಾಡ ಬಸ್ ತಡೆದು ಎರಡು ಗಂಟೆಗೂ ಹೆಚ್ಚು ಕಾಲ ದಿಢೀರ್‌ ಪ್ರತಿಭಟನೆ ನಡೆಸಿದರು.

ತಾಲೂಕಿನ ಗುಡಿಸಾಗರ, ನಾಗನೂರ, ಸೊಟಕನಾಳ ಗ್ರಾಮಗಳಿಗೆ ಪ್ರತಿದಿನ ಸಮಯಕ್ಕೆ ಸರಿಯಾಗಿ ಬಸ್ ಬರುವುದಿಲ್ಲ. ಕೆಲವೊಮ್ಮೆ ಬಸ್ ಬಂದರೆ ಅದರಲ್ಲಿ ಹತ್ತಲೂ ಜಾಗವಿರುವುದಿಲ್ಲ. ಪ್ರತಿ ದಿನವೂ ತಡವಾಗಿ ಬರುವ ಕಾರಣ ಎರಡು ಬಸ್‌ನ ಜನರು ಒಂದೇ ಬಸ್‌ನಲ್ಲಿ ಪ್ರಯಾಣಸುವಂತಾಗಿದೆ. ಏಳು ಗ್ರಾಮಗಳ ಶಾಲಾ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿಗಳಿಗೆ ತೆರಳುವ ನೌಕರರು ಒಂದೇ ಬಸ್‌ನಲ್ಲಿ ಹೇಗೆ ಪ್ರಯಾಣಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್‌ನಲ್ಲಿ ಹೆಚ್ಚಿನ ಜನರನ್ನು ತುಂಬಿಕೊಂಡು ಹೋಗುವ ಕಾರಣ ವಿದ್ಯಾರ್ಥಿಗಳಿಗೆ ಮತ್ತು ತುರ್ತಾಗಿ ತೆರಳಬೇಕಿರುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಬೆಳಗ್ಗೆ 8.30, 9.30 ಮಧ್ಯಾಹ್ನ 1.30 ಹಾಗೂ ಸಂಜೆ 5.30ಕ್ಕೆ ಬಸ್‌ಗಳ ಸೌಲಭ್ಯ ಕಲ್ಪಿಸಬೇಕು. ಕೂಡಲೇ ಕ್ರಮ ವಹಿಸದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನಂತರ ಸ್ಥಳಕ್ಕೆ ಆಗಮಿಸಿದ ಸಾರಿಗೆ ನಿಯಂತ್ರಕ ಎಂ.ಎಸ್. ಶಾಲದಾರ ಮೂಲಕ ನವಲಗುಂದ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಶಿವಾನಂದ ಗುಡಸಲಮನಿ, ಶಿವನಗೌಡ ಕುಲಕರ್ಣಿ, ಮಲ್ಲಿಕಾರ್ಜುನ ಅಳಗವಾಡಿ, ಕಲ್ಲಪ್ಪ ಹುಬ್ಬಳ್ಳಿ, ಕಲ್ಲನಗೌಡ ಕುಲಕರ್ಣಿ, ಪಂಚಪ್ಪ ಹೂಗಾರ, ಕಲ್ಲಪ್ಪ ಬೆಳವಟಗಿ, ಈರಣ್ಣ ಗುಳೇದ, ವಿರೂಪಾಕ್ಷಪ್ಪ ಬರದ್ವಾಡ, ಶಿವಪ್ಪ ಲಿಂಗದಾಳ, ಮಹಾಂತೇಶ ನಿಂಗಪ್ಪನವರ ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಜನಜೀವನ ಅಭಿವೃದ್ಧಿ: ರಾಬಿನ್ ದೇವಯ್ಯ
ರಾಮಕೃಷ್ಣರ ಸಾಹಿತ್ಯ ಕ್ಷೇತ್ರ ಕೊಡುಗೆ ಪರಿಚಯ ಅಗತ್ಯ: ನಾಗೇಂದ್ರಬಾಬು