ಕನಕಪುರ: ಚುನಾವಣಾ ಸಮಯದಲ್ಲಿ ಈ ಭಾಗದ ಜನರು ತಂಗುದಾಣ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದರಿಂದ ಅವರ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಸಂಸದ ಡಾ. ಮಂಜುನಾಥ್ ಹೇಳಿದರು.
ತಾಲೂಕಿನ ಸಾತನೂರು ಹಾಗೂ ಚನ್ನಪಟ್ಟಣ ಅರಣ್ಯ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ದಾಳಿಗೆ ಹಲವರು ಪ್ರಾಣ ಕಳೆದುಕೊಂಡಿದ್ದಾರೆ, ರೈತರ ಜಮೀನುಗಳಿಗೆ ನುಗ್ಗಿ ಅಪಾರ ಬೆಳೆ ನಾಶವಾಗಿದೆ. ಇದನ್ನು ತಪ್ಪಿಸಲು ತಡೆಗೋಡೆ ನಿರ್ಮಾಣಕ್ಕೆ ಮಂಜೂರಾತಿ ಪಡೆದಿದ್ದು 20ರಿಂದ 30 ಕಿಲೋ ಮೀಟರ್ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿದೆ. ಅರಣ್ಯಾಧಿಕಾರಿಗಳು ಅರಣ್ಯ ಗಸ್ತು ತಿರುಗಲು ಸಂಸದರ ನಿಧಿಯಿಂದ ಹೊಸದಾಗಿ ಜೀಪ್ ನೀಡುವುದಾಗಿ ತಿಳಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕೆ. ಕುಮಾರ್, ರಾಜ್ಯ ಜೆಡಿಎಸ್ ಯುವ ಉಪಾಧ್ಯಕ್ಷ ಚಿನ್ನಸ್ವಾಮಿ, ಜೆಡಿಎಸ್ ಮುಖಂಡರಾದ ನಲ್ಲಹಳ್ಳಿ ಶಿವಕುಮಾರ್, ಸಿದ್ದಮರಿ ಗೌಡ, ಜೆಡಿಎಸ್ ಯುವ ಮುಖಂಡರಾದ ತಿಮ್ಮೇಗೌಡ, ಅರಳಾಳು ರಾಜೇಂದ್ರ, ದಿಶಾ ಸಮಿತಿ ಸದಸ್ಯರಾದ ರಾಜೇಶ್, ಶೋಭಾ, ಶ್ರೀನಿವಾಸ್, ಯುವ ಮುಖಂಡ ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಾಲಾಕ್ಷ, ನಗರಸಭಾ ಮಾಜಿ ಸದಸ್ಯ ಸ್ಟುಡಿಯೋ ಚಂದ್ರು, ಸಾತನೂರು ಮಹೇಂದ್ರ, ಮುಳ್ಳಹಳ್ಳಿ ಸುಂದರ, ಆನಂದ ಇತರರಿದ್ದರು.ಕೆ ಕೆ ಪಿ ಸುದ್ದಿ 02:
ಕನಕಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಸ್ ತಂಗುದಾಣ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯ ಡಾ. ಮಂಜುನಾಥ್ ಉದ್ಘಾಟಿಸಿದರು.