ಕನ್ನಡಪ್ರಭ ವಾರ್ತೆ ಮಂಗಳೂರು
ಸ್ಮಾರ್ಟ್ಸಿಟಿ ಶಿಫಾರಸು ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಪ್ರಾಯೋಗಿಕವಾಗಿ ಬದಲಾವಣೆ ತರಲಾಗಿತ್ತು. ಸಮೀಪದಲ್ಲೇ ಬಸ್ ನಿಲ್ದಾಣ ಇರುವುದರಿಂದ ಅಲ್ಲಿಂದಲೇ ಪ್ರಯಾಣಿಕರು ಬಸ್ ಹತ್ತಿಕೊಳ್ಳಬೇಕು. ನಿಲ್ದಾಣದ ಎದುರು ಮತ್ತೆ ಹತ್ತಿಸಿಕೊಳ್ಳುವುದು ಸರಿಯಲ್ಲ. ಹಾಗಾಗಿ ಲೇಡಿಗೋಷನ್ ಬಸ್ ಸ್ಟಾಪ್ನ್ನು ರದ್ದುಗೊಳಿಸುವಂತೆ ಸ್ಮಾರ್ಟ್ಸಿಟಿ ಅಧಿಕಾರಿಗಳು ಪತ್ರ ಬರೆದು ವಿನಂತಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಮಾರ್ಪಾಟುಗೊಳಿಸಲಾಗಿತ್ತು. ಆದರೆ ಇದರಿಂದ ತೊಂದರೆಯಾಗುತ್ತಿದೆ ಎಂಬ ಜನತೆಯ ದೂರಿನ ಮೇರೆಗೆ ಮತ್ತೆ ಹಿಂದಿನಂತೆಯೇ ಲೇಡಿಗೋಷನ್ನಿಂದ ಪ್ರಯಾಣಿಕರಿಗೆ ಬಸ್ ಹತ್ತಲು ಅವಕಾಶ ಕಲ್ಪಿಸಲಾಗಿದೆ ಎಂದರು.
ದ್ವಿಮುಖ ಸಂಚಾರಕ್ಕೆ ಕ್ರಮ:ನಗರದ ಕ್ಲಾಕ್ ಟವರ್ನಿಂದ ಹ್ಯಾಮಿಲ್ಟನ್ ವೃತ್ತ ವರೆಗೆ ಈಗ ಇರುವ ಏಕಮುಖ ಸಂಚಾರವನ್ನು ತೆಗೆದು ದ್ವಿಮುಖ ಸಂಚಾರ ಏರ್ಪಡಿಸುವಂತೆ ಹಲವು ಮನವಿಗಳು ಬಂದಿದೆ. ಸುಗಮ ಸಂಚಾರ ದೃಷ್ಟಿಯಿಂದ ಈ ಬದಲಾವಣೆ ಮಾಡಲಾಗಿತ್ತು. ಆದರೆ ಮತ್ತೆ ಹಿಂದಿನಂತೆಯೇ ದ್ವಿಮುಖ ಸಂಚಾರಕ್ಕೆ ಬೇಡಿಕೆ ವ್ಯಕ್ತಗೊಳ್ಳುತ್ತಿರುವುದಿಂದ ಕ್ಲಾಕ್ಟವರ್ ವೃತ್ತದಲ್ಲಿ ಬಂದ್ ಮಾಡಿರುವುದನ್ನು ತೆರವುಗೊಳಿಸಿಕೊಡುವಂತೆ ಸ್ಮಾರ್ಟ್ಸಿಟಿ ಅಧಿಕಾರಿಗಳನ್ನು ಕೋರಲಾಗಿದೆ ಎಂದರು.
ನಗರ ಶಾಲೆಗಳ ಹೊರ ಆವರಣದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಉಂಟಾಗುವಂತೆ ಪೋಷಕರು ಹಾಗೂ ಶಾಲಾ ವಾಹನಗಳು ಮಕ್ಕಳನ್ನು ಇಳಿಸುತ್ತಿವೆ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಗಳ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಶಾಲಾ ಆವರಣದ ಒಳಗೆ ಹೋಗದೆ, ಆವರಣದಲ್ಲೇ ಮಕ್ಕಳನ್ನು ಇಳಿಸುವ ವಾಹನಗಳ ವಿಡಿಯೋ ಚಿತ್ರೀಕರಣ ನಡೆಸಿ ಕೇಸು ದಾಖಲಿಸುವಂತೆ ಸಂಚಾರಿ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಡಿಸಿಪಿ ದಿನೇಶ್ ಕುಮಾರ್ ಹೇಳಿದರು.
ರಾತ್ರಿ ಪ್ಯಾಟ್ರೋಲಿಂಗ್ಗೆ ಸೂಚನೆ:
ಮುಂಗಳಮುಖಿಯರ ಸಹಿತ ಯಾರಾದರೂ ವಾಹನ ಸಂಚಾರಕ್ಕೆ ರಾತ್ರಿ ಅಡ್ಡಿಪಡಿಸಿದರೆ ಅಂತಹವರ ವಿರುದ್ಧ ಪ್ರ್ಯಾಟ್ರೋಲಿಂಗ್ ನಡೆಸಬೇಕು. ಸುಲಿಗೆಯಂತಹ ಪ್ರಕರಣ ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಡಿಸಿಪಿ ದಿನೇಶ್ ಕುಮಾರ್ ಸೂಚಿಸಿದರು.