ಕನ್ನಡಪ್ರಭ ವರದಿಗೆ ಸ್ಪಂದಿಸಿದ ಸಾರಿಗೆ ಸಂಸ್ಥೆ
ಕನ್ನಡಪ್ರಭ ವಾರ್ತೆ ಅಂಕೋಲಾ
ಅಂಕೋಲಾ-ಯಲ್ಲಾಪುರ ಮಾರ್ಗದ ಮಾಸ್ತಿಕಟ್ಟಾ, ಹೆಬ್ಬುಳ, ಮೂಲೆಮನೆ, ಸಬಗುಳಿ, ಆಲದಕೋಣ, ವಜ್ರಳ್ಳಿ ಸೇರಿದಂತೆ ಹಲವು ಗ್ರಾಮಗಳ ವಿದ್ಯಾರ್ಥಿಗಳು ಲೋಕಲ್ ಬಸ್ ಸೌಲಭ್ಯವಿಲ್ಲದೆ ಪ್ರತಿದಿನ ಹೆದ್ದಾರಿಯಲ್ಲಿ ವಾಹನಗಳಿಗೆ ಕೈ ಮಾಡಿ ಶಾಲೆ-ಕಾಲೇಜುಗಳಿಗೆ ತೆರಳುತ್ತಿರುವ ದುಸ್ಥಿತಿಯನ್ನು ಕನ್ನಡಪ್ರಭ ಸಮಗ್ರವಾಗಿ ವರದಿ ಪ್ರಕಟಿಸಿ, ಸಮಸ್ಯೆ ಬೆಳಕಿಗೆ ತಂದಿತ್ತು. ವಿದ್ಯಾರ್ಥಿಗಳ ಸುರಕ್ಷತೆ, ಶಿಕ್ಷಣದ ಮೇಲೆ ಉಂಟಾಗುತ್ತಿದ್ದ ದುಷ್ಪರಿಣಾಮ ಹಾಗೂ ಸಾರ್ವಜನಿಕರ ಸಂಕಷ್ಟವನ್ನು ವರದಿ ಪ್ರಮುಖವಾಗಿ ಬಿಂಬಿಸಿತ್ತು.
ಈ ನಿರ್ಧಾರದಿಂದ ಹಲವು ವರ್ಷಗಳಿಂದ ಬಸ್ಗಾಗಿ ಬೇಡಿಕೆ ಇಟ್ಟಿದ್ದ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಂತಸ ವ್ಯಕ್ತವಾಗಿದೆ. ಶಾಲೆ–ಕಾಲೇಜುಗಳಿಗೆ ತೆರಳಲು ಅಪಾಯಕಾರಿ ರೀತಿಯಲ್ಲಿ ಲಾರಿಗಳು ಹಾಗೂ ಇತರೆ ವಾಹನಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿಗೆ ಈಗ ತೆರೆ ಬಿದ್ದಿದೆ.ನಮಗೆ ಬಸ್ ಇಲ್ಲದೆ ಇರುವುದರಿಂದ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದೆವು. ಕನ್ನಡಪ್ರಭ ವರದಿಯಿಂದ ನಮಗೆ ಬಸ್ ಸೇವೆ ದೊರಕುವಂತಾಗಿದೆ ಎನ್ನುತ್ತಾರೆ ವಿದ್ಯಾರ್ಥಿನಿ ಶ್ವೇತಾ ಮಂಜುನಾಥ ನಾಯ್ಕ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕನ್ನಡಪ್ರಭ ವಾಸ್ತವಿಕವಾಗಿ ಬೆಳಕಿಗೆ ತಂದ ಪರಿಣಾಮ ಅಧಿಕಾರಿಗಳು ತಕ್ಷಣ ಸ್ಪಂದಿಸಿದ್ದಾರೆ. ಬಸ್ ವ್ಯವಸ್ಥೆ ಕಲ್ಪಿಸುವ ನಿರ್ಧಾರದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ಸಮಸ್ಯೆಗೆ ಸ್ಪಂದಿಸಿದ ಸಾರಿಗೆ ಅಧಿಕಾರಿಗಳಿಗೆ ಹಾಗೂ ಕನ್ನಡಪ್ರಭಕ್ಕೆ ಗ್ರಾಮಸ್ಥರ ಪರವಾಗಿ ಅಭಿನಂದನೆಗಳು ಎಂದು ಸಾಮಾಜಿಕ ಕಾರ್ಯಕರ್ತ ಸಂದೀಪ ನಾಯ್ಕ ತಿಳಿಸಿದ್ದಾರೆ.ವೇಳಾಪಟ್ಟಿ