ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ: ಕೆ.ಎಂ.ಉದಯ್

KannadaprabhaNewsNetwork |  
Published : May 17, 2025, 01:31 AM IST
16ಕೆಎಂಎನ್ ಡಿ21 | Kannada Prabha

ಸಾರಾಂಶ

ಶೈಕ್ಷಣಿಕ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದ್ದು. ಈ ನಿಟ್ಟಿನಲ್ಲಿ ಕಾಯಾ- ವಾಚಾ- ಮನಸಾ ಶ್ರಮಿಸಬೇಕು. ಸರ್ಕಾರಿ ಕಾಲೇಜುಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ವಿದ್ಯಾರ್ಥಿಗಳು ಪ್ರತಿ ತರಗತಿಗಳಿಗೂ ಹಾಜರಾಗುವ ಮೂಲಕ ತಮ್ಮ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಿಕೊಂಡು ಕಾಲೇಜಿಗೆ ಕೀರ್ತಿ ತರಬೇಕು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಮೀಪದ ಮಣಿಗೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಮತ್ತು ರೋವರ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ನಗರ ಪ್ರದೇಶದ ಖಾಸಗಿ ಕಾಲೇಜುಗಳಿಗೆ ಸಮನಾಗಿ ಕಾಲೇಜಿಗೆ ಹೈಟೆಕ್ ಸ್ಪರ್ಶ ನೀಡಲಾಗಿದೆ. ವಿದ್ಯಾರ್ಥಿಗಳಿಗಾಗಿ ಬಸ್ ಸೌಲಭ್ಯ ನೀಡಿದ್ದೇವೆ. ಸಂಸ್ಕಾರಯುತ ಶಿಕ್ಷಣ ಕಲಿಸುವ ನಿಟ್ಟಿನಲ್ಲಿ ಶಿಕ್ಷಕರು ಸಹ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯೆ ಸಾಧಕರ ಸ್ವತ್ತು. ವಿದ್ಯೆ ಕಲಿತವರು ವಿಶ್ವದಲ್ಲೆಡೆಯಾದರೂ ಬದುಕಬಹುದು. ಕಠಿಣ ಪರಿಶ್ರಮದಿಂದ ವ್ಯಾಸಂಗದಲ್ಲಿ ತೊಡಗಿ ವಿದ್ಯಾರ್ಥಿಗಳು ಸಾಧನೆ ಮಾಡಿ ಮಾದರಿಯಾಗಬೇಕು. ಎತ್ತರಕ್ಕೆ ಬೆಳದ ವಿದ್ಯಾರ್ಥಿ ಸೇವಾ ಮನೋಭಾದಿಂದ ಸಮಾಜದ ಪ್ರಗತಿಗೆ ನೆರವಾಗಬೇಕು ಎಂದು ಸಲಹೆ ನೀಡಿದರು.

ಸಾಹಿತಿ ಡಾ.ಹನಿಯೂರು ಚಂದ್ರೇಗೌಡ ಮಾತನಾಡಿ, ಶೈಕ್ಷಣಿಕ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾದುದ್ದು. ಈ ನಿಟ್ಟಿನಲ್ಲಿ ಕಾಯಾ- ವಾಚಾ- ಮನಸಾ ಶ್ರಮಿಸಬೇಕು. ಸರ್ಕಾರಿ ಕಾಲೇಜುಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ವಿದ್ಯಾರ್ಥಿಗಳು ಪ್ರತಿ ತರಗತಿಗಳಿಗೂ ಹಾಜರಾಗುವ ಮೂಲಕ ತಮ್ಮ ಶೈಕ್ಷಣಿಕ ಪ್ರಗತಿಯನ್ನು ಹೆಚ್ಚಿಸಿಕೊಂಡು ಕಾಲೇಜಿಗೆ ಕೀರ್ತಿ ತರಬೇಕು ಎಂದರು.

ಉನ್ನತ ವ್ಯಾಸಂಗಕ್ಕೆ ಮುನ್ನುಡಿ ಬರೆಯುವ ಮೂಲಕ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಇಷ್ಟವಾದ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಕ್ಕಾಗಿ ಈಗಿನಿಂದಲೇ ಪ್ರಯತ್ನಗಳನ್ನು ಆರಂಭಿಸಿ ಯಶಸ್ಸು ಸಾಧಿಸಬೇಕು ಕರೆ ನೀಡಿದರು.

ಇದೇ ವೇಳೆ ‌ಪ್ರಾಂಶುಪಾಲ ಶ್ರೀನಿವಾಸ ಮೂರ್ತಿ, ಗ್ರಾಪಂ ಅಧ್ಯಕ್ಷೆ ಸೌಭಾಗ್ಯ, ಪಿಡಿಓ ಸುಧಾ, ಸಿಡಿಸಿ ಸದಸ್ಯರಾದ ದಾಸೇಗೌಡ, ಅಭಿಷೇಕ್, ಕಬ್ಬಾಳಯ್ಯ, ಎನ್‌ಎಸ್‌ಎಸ್ ಸಂಚಾಲಕ ಪ್ರಸನ್ನ, ಪ್ರೊ.ಶೋಭಾ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುರ್ಚಿ ಕಿತ್ತಾಟ ರಾಜ್ಯದವರೇ ಬಗೆಹರಿಸಿಕೊಳ್ಳಬೇಕು: ಖರ್ಗೆ
ಸದೃಢ ಆರೋಗ್ಯಕ್ಕೆ ಹಲ್ಲು ಸದೃಢವಾಗಿರಲಿ