ಬಸ್ ಟೈಯರ್ ಸ್ಫೋಟ: ಅತ್ತೆ, ಅಳಿಯ ಸಾವು

KannadaprabhaNewsNetwork |  
Published : Aug 29, 2025, 01:00 AM IST
ಮಾಗಡಿ ತಾಲ್ಲೂಕಿನ ಹನುಮಂತಪುರ ಗೇಟ್ ಬಳಿ ಟೈಯರ್ ಸ್ಪೋಟಗೊಂಡು ರಸ್ತೆ ಬದಿಯ ಡಿವೈಡರ್ ಗೆ ಖಾಸಗಿ ಬಸ್ ಗುದ್ದಿರುವುದು.ಶಿವಣ್ಣ, ಗಂಗಮ್ಮ | Kannada Prabha

ಸಾರಾಂಶ

ಗಣೇಶನ ಹಬ್ಬಕ್ಕೆ ಅತ್ತೆ ಗಂಗಮ್ಮರನ್ನು ಅಳಿಯ ಶಿವಣ್ಣ ಬೈಕ್‌ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮುಂದೆ ಬರುತ್ತಿದ್ದ ಖಾಸಗಿ ಬಸ್‌ನ ಟೈಯರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.

ಮಾಗಡಿ: ಬುಧವಾರ ಗಣೇಶ ಹಬ್ಬದ ದಿನದಂದೇ ಬೆಳಗಿನ ಸಮಯದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ -ಹುಲಿಯೂರು ಮುಖ್ಯರಸ್ತೆಯ ಹನುಮಂತಪುರ ಗೇಟ್ ಬಳಿ ನಡೆದಿದೆ.ತಾಲೂಕಿನ ಅರಳಕುಪ್ಪೆ ಗ್ರಾಮದ ಗಂಗಮ್ಮ (58), ಶಿವಣ್ಣ (45) ಮೃತ ಬೈಕ್ ಸವಾರರು. ಗಣೇಶನ ಹಬ್ಬಕ್ಕೆ ಅತ್ತೆ ಗಂಗಮ್ಮರನ್ನು ಅಳಿಯ ಶಿವಣ್ಣ ಬೈಕ್‌ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮುಂದೆ ಬರುತ್ತಿದ್ದ ಖಾಸಗಿ ಬಸ್‌ನ ಟೈಯರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.

ಸ್ಟೋಟದ ರಭಸಕ್ಕೆ ಬಸ್‌ನಿಂದ ಟೈಯರ್ ಬೇರ್ಪಟ್ಟು ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿವೈಡರ್‌ಗೆ ಗುದ್ದಿದ್ದು ಬಸ್‌ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಪಾಯದಿಂದ ಪರಾಗಿದ್ದಾರೆ.

ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಾಗಡಿ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಘಟನಾ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!