ದಾವೂದ್ ಇಬ್ರಾಹಿಂ ಫೊಟೊ ಅಳವಡಿಸಿದ್ದ ಬಸ್‌ ವಶಕ್ಕೆ

KannadaprabhaNewsNetwork |  
Published : Mar 27, 2026, 01:15 AM IST
ಸಸ | Kannada Prabha

ಸಾರಾಂಶ

ಚಿಕ್ಕಮಗಳೂರುಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಂಡರ್‌ ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂನನ್ನು ಹೀರೋ ರೀತಿ ಬಿಂಬಿಸಿದ್ದ ತಮಿಳುನಾಡು ಮೂಲದ ಖಾಸಗಿ ಬಸ್ಸೊಂದನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಗುರುವಾರ ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.​

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅಂಡರ್‌ ವರ್ಲ್ಡ್ ಡಾನ್ ದಾವೂದ್ ಇಬ್ರಾಹಿಂನನ್ನು ಹೀರೋ ರೀತಿ ಬಿಂಬಿಸಿದ್ದ ತಮಿಳುನಾಡು ಮೂಲದ ಖಾಸಗಿ ಬಸ್ಸೊಂದನ್ನು ಹಿಂದೂ ಸಂಘಟನೆಗಳ ಕಾರ್ಯಕರ್ತರು ಗುರುವಾರ ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.​

ತಮಿಳುನಾಡು ನೋಂದಣಿ ಹೊಂದಿದ ಖಾಸಗಿ ಬಸ್ಸೊಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿತ್ತು. ಈ ಬಸ್ಸಿನ ಮೇಲೆ ಮುಂಬೈ ಸರಣಿ ಸ್ಫೋಟದ ಸಂಚುಕೋರ, ಭೂಗತ ಲೋಕದ ಕುಖ್ಯಾತ ಅಪರಾಧಿ ದಾವೂದ್ ಇಬ್ರಾಹಿಂನ ಫೋಟೋ ಹಾಗೂ ಆತನನ್ನು ಹೊಗಳುವಂತಹ ಬರಹ ಇದ್ದವು. ಇದನ್ನು ಗಮನಿಸಿದ ಸ್ಥಳೀಯ ಹಿಂದೂ ಸಂಘಟನೆ ಕಾರ್ಯಕರ್ತರು ನಗರದ ಎನ್.ಎಂ.ಸಿ ಸರ್ಕಲ್ ಬಳಿ ಬಸ್ಸನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಬಸ್ಸಿನ ಸುತ್ತಲೂ ಕಾನೂನು ಬಾಹಿರ ಚಟುವಟಿಕೆ ಪ್ರೇರೇಪಿಸುವಂತಹ ಮತ್ತು ಅಪರಾಧ ಲೋಕವನ್ನು ವೈಭವೀಕರಿಸು ವಂತಹ ಸ್ಟಿಕ್ಕರ್‌ಗಳನ್ನು ಅಂಟಿಸಲಾಗಿತ್ತು. ‘ಲೈವ್ ಬೈ ಎ ಗನ್, ಡೈ ಬೈ ಎ ಗನ್” ಎಂಬ ಪ್ರಚೋದನಾಕಾರಿ ಬರಹ ಪ್ರದರ್ಶಿಸಲಾಗಿದೆ.

​ಬಸ್ಸಿನ ಮೇಲೆ ‘ಕ್ರೈಮ್ ಲಾರ್ಡ್ ಕ್ರಾನಿಕಲ್ಸ್’ ಮತ್ತು ‘ದಾವೂದ್ ದಿ ರಿಯಲ್ ಡಾನ್‌, ‘ಡಿ ಗ್ಯಾಂಗ್ ಆಫ್ ಮುಂಬೈ’ ಎಂದು ಬರೆಸಲಾಗಿತ್ತು. ಅಲ್ಲದೆ, ದಾವೂದ್ ಇಬ್ರಾಹಿಂನ ಫೋಟೋಗಳನ್ನು ಹಾಕಿ ಆತನನ್ನು ಒಬ್ಬ ಹೀರೋನಂತೆ ಬರೆಯಲಾಗಿತ್ತು .

​ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ವಿವಾದಾತ್ಮಕ ಬಸ್ಸನ್ನು ವಶಕ್ಕೆ ಪಡೆದಿದ್ದಾರೆ.

ಪ್ರಸ್ತುತ ಬಸ್ಸನ್ನು ನಗರದ ಬಸವನಹಳ್ಳಿ ಪೊಲೀಸ್ ಠಾಣೆ ಆವರಣಕ್ಕೆ ಕೊಂಡೊಯ್ಯಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳ ಲಾಗಿದೆ. ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾದ ವ್ಯಕ್ತಿಯನ್ನು ವೈಭವೀಕರಿಸುವುದರ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಪೊಲೀಸರು ಚಾಲಕ ಮತ್ತು ಮಾಲೀಕರಿಂದ ಮಾಹಿತಿ ಪಡೆಯುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರು ಮೊಬೈಲ್‌ ಬಿಟ್ಟು ಕುಸ್ತಿ, ಕಬ್ಬಡ್ಡಿ ಆಟವಾಡಿ
ಕೆಜಿಐಎಸ್ 2.0 ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯ ಅವಶ್ಯಕ: ರಾಜೇಶ ಎನ್.ಎಲ್.