ಕನ್ನಡಪ್ರಭಾ ವಾರ್ತೆ ಶನಿವಾರಸಂತೆ
ಶನಿವಾರ ಸಂತೆ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾರ್ವಜನಿಕರು ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ರತನ್ ಟಾಟಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
ರತನ್ ಟಾಟಾ ಭಾರತ ದೇಶಕ್ಕೆ ಕೊಟ್ಟ ಕೊಡುಗೆ ಅಪಾರ. ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವರ ನೀತಿ ನಿಯಮಗಳನ್ನು ಅನುಸರಿಸಬೇಕಾಗಿದೆ. ಅವರು ಕೇವಲ ಉದ್ಯಮವನ್ನು ವ್ಯಾಪಾರ ದೃಷ್ಟಿಯಿಂದ ಮಾಡದೆ ದೇಶದ ಅಭಿವೃದ್ಧಿಗೂ ಸಹಕರಿಸಿದ್ದಾರೆ. ಎಷ್ಟೋ ಜನರಿಗೆ ತಮ್ಮ ಕುಟುಂಬ ನಿರ್ವಹಣೆಗೆ ಇವರು ಉದ್ಯೋಗ ನೀಡಿ ಅವಿಸ್ಮರಣೀಯರಾಗಿದ್ದಾರೆ ಎಂದರು.ಭಾರತಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಉಪನ್ಯಾಸಕ ಚಂದ್ರಕಾಂತ್ ಮಾತನಾಡಿ, ಭಾರತೀಯ ಪ್ರತಿ ಪ್ರಜೆಯೂ ರತನ್ ಟಾಟಾ ಸಾಧನೆಯನ್ನು ಸ್ಮರಿಸಿ ಅವರ ಚರಿತ್ರೆಯಂತೆ ಮತ್ತಷ್ಟು ಉದ್ಯಮಿಗಳು ಹೊರ ಹುಮ್ಮಬೇಕಾಗಿದೆ. ಇದರಿಂದ ದೇಶ ಅಭಿವೃದ್ಧಿಯಾಗುವ ಜೊತೆಯಲ್ಲಿ ಭಾರತ ದೇಶವನ್ನು ಅಭಿವೃದ್ಧಿ ಹೊಂದಿದ ದೇಶ ಎಂಬ ಹೆಗ್ಗಳಿಕೆ ತರಲು ಇಂತಹ ಉದ್ಯಮಿಗಳು ಪ್ರೇರೇಪಣಾ ಶಕ್ತಿಯಾಗಿದ್ದಾರೆ ಎಂದರು.