ಅಧಿಕೃತ ರಸೀದಿ ಪಡೆದ ಬಳಿಕವಷ್ಟೇ ವಸ್ತು ಖರೀದಿಸಿ: ಬಿ.ಎಸ್. ಈಶ್ವರಪ್ಪ

KannadaprabhaNewsNetwork |  
Published : Feb 07, 2024, 01:47 AM IST
ಮಮ | Kannada Prabha

ಸಾರಾಂಶ

ಅಂಗಡಿಗಳಲ್ಲಿ ಯಾವುದೇ ವಸ್ತು ಖರೀದಿಸುವಾಗಲೂ ಬಿಳಿ ಚೀಟಿ ಪಡೆದು ಹಣ ನೀಡಬೇಡಿ.

ಗ್ರಾಹಕರ ಹಕ್ಕು ಮತ್ತು ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ ಉದ್ಘಾಟನೆ

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ

ಕನ್ನಡಪ್ರಭ ವಾರ್ತೆ ಬ್ಯಾಡಗಿ

ಅಂಗಡಿಗಳಲ್ಲಿ ಯಾವುದೇ ವಸ್ತು ಖರೀದಿಸುವಾಗಲೂ ಬಿಳಿ ಚೀಟಿ ಪಡೆದು ಹಣ ನೀಡಬೇಡಿ. ವಸ್ತುವಿನ ಗುಣಮಟ್ಟ, ದರದಲ್ಲಿನ ವ್ಯತ್ಯಾಸ ಸೇರಿದಂತೆ ಯಾವುದೇ ಲೋಪದೋಷ ಕಂಡು ಬಂದಲ್ಲಿ, ತಮಗಾದ ಅನ್ಯಾಯ ಸರಿಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಮಾರಾಟಗಾರರಿಂದ ಅಧಿಕೃತ ರಸೀದಿ ಪಡೆದ ಬಳಿಕವಷ್ಟೇ ವಸ್ತುಗಳನ್ನು ಖರೀದಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಬಿ.ಎಸ್. ಈಶ್ವರಪ್ಪ ಕರೆ ನೀಡಿದರು.

ಪಟ್ಟಣದ ಸ್ನೇಹಸದನ ಟ್ರಸ್ಟ್ ಸಮಗ್ರ ಸಮಾಜ ಕಾರ್ಯ ನಿರ್ವಹಣಾ ಕೇಂದ್ರ, ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಹಾಗೂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ‘ಗ್ರಾಹಕರ ಹಕ್ಕು ಮತ್ತು ಕಾಯ್ದೆ’ ಕುರಿತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

1986ರಲ್ಲಿ ಗ್ರಾಹಕ ಹಕ್ಕುಗಳ ಕಾಯ್ದೆ ಅನುಷ್ಠಾನಗೊಂಡಿದೆ. ಆದರೆ ಕೇವಲ ಶೇ.5ರಷ್ಟು ಜನರು ಮಾತ್ರ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಗ್ರಾಹಕರ ಸಂರಕ್ಷಣಾ ಕಾಯ್ದೆ ಗ್ರಾಹಕರ ಕುಂದುಕೊರತೆಗಳಿಗೆ ಸುಲಭ ಮತ್ತು ತ್ವರಿತ ಪರಿಹಾರ ಮಾರ್ಗವನ್ನು ನೀಡಲಿದೆ. ಸರಕು ಮತ್ತು ಸೇವೆಗಳಲ್ಲಿನ ಕೊರತೆ ಮತ್ತು ನ್ಯೂನತೆಗಳ ವಿರುದ್ಧ ಮಾತನಾಡಲು ಗ್ರಾಹಕರಿಗೆ ಶಕ್ತಿ ನೀಡಲಿದೆ ಎಂದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಎಚ್. ಮಜೀದ್ ಮಾತನಾಡಿ, ಯಾವುದೇ ವ್ಯಕ್ತಿ ಖರೀದಿಸುವ ಮೊದಲು ಅದರ ಸುರಕ್ಷತೆಯ ಬಗ್ಗೆ ತಿಳಿದುಕೊಳ್ಳಲು ಇಚ್ಛಿಸಿದಲ್ಲಿ ಗ್ರಾಹಕರ ಹಕ್ಕುಗಳು ಸಂರಕ್ಷಣಾ ಕಾಯಿದೆಯಡಿ ಅವಕಾಶವಿದೆ. ಗ್ರಾಹಕರು ಸರಕುಗಳ ಗುಣಮಟ್ಟ ಮತ್ತು ಅವುಗಳ ಖಾತರಿ ಸೇರಿದಂತೆ ಅಗ್‌ಮಾರ್ಕ ಐಎಸ್‌ಐನಂತಹ ಪ್ರಮಾಣೀಕೃತ ಉತ್ಪನ್ನ ಪರೀಕ್ಷಿಸಿಕೊಂಡ ಬಳಿಕ ಖರೀದಿಸಲು ಮತ್ತು ಸ್ಪರ್ಧಾತ್ಮಕ ಬೆಲೆಯಲ್ಲಿ ಆಯ್ಕೆ ಮಾಡುವ ಹಕ್ಕನ್ನು ಒದಗಿಸಲಿದೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ನ್ಯಾಯವಾದಿ ಮಹಾಂತೇಶ್ ಬಸವನಾಯ್ಕರ್ ಮಾತನಾಡಿ, ಪ್ರತಿಯೊಬ್ಬರು ಮಾಡುವ ವ್ಯವಹಾರದಲ್ಲಿ ಸಾಕಷ್ಟು ತೊಂದರೆಗಳಾಗುತ್ತಿವೆ. ಬಣ್ಣ, ಬಾಳಿಕೆ, ಗುಣಮಟ್ಟ ಯಾವುದೇ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಕೊಟ್ಟಹಣಕ್ಕೆ ಸರಿಯಾದ ಗುಣಮಟ್ಟದ ವಸ್ತು ಕೊಂಡುಕೊಳ್ಳಬೇಕು ಎಂದು ಅವರು, ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಮೋಸದ ಜಾಲಗಳು ಅಲ್ಲಲ್ಲಿ ಕಂಡು ಬರುತ್ತಿದ್ದು, ಅವುಗಳ ಬಗ್ಗೆಯೂ ಗ್ರಾಹಕರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಿರ್ದೇಶಕಿ ಗ್ಲೋರಿಯಾ ತೆರೆಸಿಟಾ, ಆರೋಗ್ಯ ವಿಭಾಗದ ಸಂಯೋಜಕಿ ಅಚಲಾ, ಸಿಬ್ಬಂದಿ ಗಂಗಾ, ಸರಸ್ವತಿ, ರಹಿಮಾ, ಫಾತಿಮಾ, ಮಧುಮತಿ ಉಪಸ್ಥಿತರಿದ್ದರು. ಸಂಸ್ಥೆಯ ವ್ಯವಸ್ಥಾಪಕಿ ರೂಪಾ ಸ್ವಾಗತಿಸಿದರು, ಸುವರ್ಣಾ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ