ಹುಬ್ಬಳ್ಳಿ:
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಎಕ್ಸಿಟ್ ಪೋಲ್ ನಂಬಿ ನಾನು ಮಾತನಾಡುತ್ತಿಲ್ಲ. ಅಲ್ಲಿನ ಜನರ ಮನದಾಳ ಅರಿತು ಹೇಳುತ್ತಿದ್ದೇನೆ ಎಂದರು.
ಕಾಂಗ್ರೆಸ್ನವರು ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ. ಮೂರು ಕ್ಷೇತ್ರಗಳಲ್ಲೂ ಅವರೇ ಗೆಲ್ಲುತ್ತಾರೆ ಎಂದು ಹೇಳುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ, ಫಲಿತಾಂಶ ಬರುವವರೆಗೂ ಅವರು ಹಾಗೆ ಹೇಳಲೇಬೇಕಲ್ಲ? ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದ ಅವರು, ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಲ್ಲೂ ಎನ್ಡಿಎ ಪಕ್ಷಗಳೇ ಅಧಿಕಾರಕ್ಕೆ ಬರಲಿವೆ ಎಂದರು.ಯೂ ಟರ್ನ್ ಸರ್ಕಾರ:
ಇದೀಗ ಆಸ್ಪತ್ರೆಗಳ ಸೇವೆಗಳ ಶುಲ್ಕ ಹೆಚ್ಚಳ ಮಾಡಿದ್ದಾರೆ. ಇವರಿಗೆ ಆಸ್ಪತ್ರೆ ನಡೆಸಲು ಆಗುತ್ತಿಲ್ಲ.. ಸರ್ಕಾರದ ಬಳಿ ದುಡ್ಡೇ ಇಲ್ಲ. ಸರ್ಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ದುಡ್ಡು ಹೊಂದಿಸಲು ಆಗುತ್ತಿಲ್ಲ. ಹೀಗಾಗಿಯೇ ಸೇವೆಗಳ ಶುಲ್ಕ ಹೆಚ್ಚಿಸಿದ್ದಾರೆ. ತೆರಿಗೆ ಹೊರೆ ಭ್ರಷ್ಟಚಾರದ ಹೊರೆ ಆಗಿದೆ. ಬಡವರು, ಎಸ್ಸಿಎಸ್ಟಿ ಜನರು ಈ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದರು.