ಕನ್ನಡಪ್ರಭ ವಾರ್ತೆ ಹಿರಿಯೂರು
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಇಷ್ಟವಾಗಿದೆ ಎಂಬುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಗ್ಯಾರಂಟಿ ಯೋಜನೆಗಳು ಜನರ ಮನದಲ್ಲಿ ಗೆಲುವು ಪಡೆದಿವೆ. ಮತ್ತೆರಡು ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬಂದದ್ದು ಆಡಳಿತ ಪಕ್ಷದ ಕಾರ್ಯವೈಖರಿ ಸರಿದಾರಿಯಲ್ಲಿದೆ ಎಂಬುದರ ಸಂಕೇತವಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಾoತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ, ನಗರಸಭೆ ಅಧ್ಯಕ್ಷ ಅಜ್ಜಪ್ಪ, ಉಪಾದ್ಯಕ್ಷೆ ಅಂಬಿಕಾ ಆರಾಧ್ಯ, ಕೆಪಿಸಿಸಿ ಸದಸ್ಯ ಕಂದಿಕೆರೆ ಸುರೇಶಬಾಬು, ಅಂಜಿನಪ್ಪ, ಗಿಡ್ಡೋಬನಹಳ್ಳಿ ಅಶೋಕ್, ಅಯೂಬ್, ವಿ. ಶಿವಕುಮಾರ್ ಮುಂತಾದ ಮುಖಂಡರು ಉಪಸ್ಥಿತರಿದ್ದರು.ಚಿತ್ರ 1 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಇಒ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.