ಮೂಲ್ಕಿ, ಹಳೆಯಂಗಡಿ ಕಾಂಗ್ರೆಸ್‌ ವಿಜಯೋತ್ಸವ

KannadaprabhaNewsNetwork |  
Published : Nov 24, 2024, 01:47 AM IST
ಮೂಲ್ಕಿ ಹಳೆಯಂಗಡಿ ಕಾಂಗ್ರೆಸ್‌ ವಿಜಯೋತ್ಸವ | Kannada Prabha

ಸಾರಾಂಶ

ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದರಿಂದ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಮೂಲ್ಕಿ ಬಸ್ ನಿಲ್ದಾಣದ ಬಳಿ ನಡೆಯಿತು.ಈ ಸಂದರ್ಭ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಮಾತನಾಡಿ, ಬಿಜೆಪಿ ಪಕ್ಷದ ಅಪಪ್ರಚಾರಗಳಿಗೆ ಕಿವಿಗೊಡದೆ ಮತದಾರರು ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವರ ಗ್ಯಾರಂಟಿ ಯೋಜನೆಗಳನ್ನು ಕೈ ಹಿಡಿದಿದ್ದು ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಕ್ಷಿಯಾಗಿದೆ ಎಂದರು. ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಕಾಂಗ್ರೆಸ್ ನಾಯಕರಾದ ಆಲ್ವಿನ್ ಪಕ್ಷಿಕೆರೆ, ಗೋಪಿನಾಥ ಬಡಂಗ, ಯೋಗೀಶ್ ಕೋಟ್ಯಾನ್, ಪುತ್ತುಬಾವು, ಬಾಲಚಂದ್ರ ಕಾಮತ್, ಅನಿಲ್ ಪೂಜಾರಿ ಸಸಿಹಿತ್ಲು, ಅಬ್ದುಲ್ ಅಜೀಜ್, ಬಶೀರ್ ಕುಳಾಯಿ, ರಕ್ಷಿತ್ ಕೊಳಚಿಕಂಬಳ, ಜಲಜ, ನೀತು ನಿರಂಜಲ, ಭೀಮಶಂಕರ್ ಆರ್ ಕೆ, ಸುಭಾಷ್ ಚಂದ್ರ ಕೆ ಎಸ್ ರಾವ್ ನಗರ, ಸುಚಿತ್ರ ಪ್ರಸನ್ನ ಕುಮಾರ್, ಸಂತೋಷ್ ಕೊಪ್ಪಳ, ಎಚ್ ಹಮೀದ್, ಧರ್ಮಾನಂದ ಶೆಟ್ಟಿಗಾರ, ಸೋನಿ ಹಳೆಯಂಗಡಿ, ಪ್ರಮೋದ್ ಸಸಿ ಹಿತ್ಲು, ವಾಹಿದ್ ತೋಕೂರು, ವಾಮನ ಹಳೆಯಂಗಡಿ ಮತ್ತಿತರರು ಉಪಸ್ಥಿತರಿದ್ದರು.

ಹಳೆಯಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು.

ಈ ಸಂದರ್ಭ ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ , ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಬ್ಲಾಕ್ ಮಹಿಳಾ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ, ಕಾಂಗ್ರೆಸ್ ನಾಯಕರಾದ ಆಲ್ವಿನ್ ಪಕ್ಷಿಕೆರೆ, ಗೋಪಿನಾಥ ಬಡಂಗ, ಯೋಗೀಶ್ ಕೋಟ್ಯಾನ್, ಪುತ್ತುಭಾವ, ಬಾಲಚಂದ್ರ ಕಾಮತ್, ಅನಿಲ್ ಪೂಜಾರಿ ಸಸಿಹಿತ್ಲು, ಅಬ್ದುಲ್ ಅಜೀಜ್, ಬಶೀರ್ ಕುಳಾಯಿ, ರಕ್ಷಿತ್ ಕೊಳಚಿಕಂಬಳ, ಜಲಜ, ನೀತು ನಿರಂಜಲ, ಭೀಮಶಂಕರ್ ಆರ್ ಕೆ, ಸುಭಾಷ್ ಚಂದ್ರ ಕೆ ಎಸ್ ರಾವ್ ನಗರ, ಸುಚಿತ್ರ ಪ್ರಸನ್ನ ಕುಮಾರ್, ಸಂತೋಷ್ ಕೊಪ್ಪಳ, ಎಚ್ ಹಮೀದ್, ಧರ್ಮಾನಂದ ಶೆಟ್ಟಿಗಾರ, ಸೋನಿ ಹಳೆಯಂಗಡಿ, ಪ್ರಮೋದ್ ಸಸಿ ಹಿತ್ಲು, ವಾಹಿದ್ ತೋಕೂರು, ವಾಮನ ಹಳೆಯಂಗಡಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ಸರ್ಕಾರದಿಂದ ಸಿಕ್ತು ಬಂಪರ್ ಗಿಫ್ಟ್
ಕಾಂಗ್ರೆಸ್‌ನಿಂದ ಗೆದ್ದಿದ್ದ ಸುಬ್ಬಾರೆಡ್ಡಿ ಶಾಸಕತ್ವಕ್ಕೆ ‘ಸುಪ್ರೀಂ’ ರಕ್ಷಣೆ