ತಮಿಳುನಾಡಿಗೆ ನೀರು ಬಿಟ್ಟು ರಾಜ್ಯ ಸರ್ಕಾರ ರೈತರಿಗೆ ನೇಣು ಭಾಗ್ಯ ನೀಡಿದೆ: ವಿವಿಧ ಸಂಘಟನೆಗಳ ಆಕ್ರೋಶ

KannadaprabhaNewsNetwork |  
Published : Aug 18, 2026, 02:00 AM IST
17ಕೆಎಂಎನ್ ಡಿ15 | Kannada Prabha

ಸಾರಾಂಶ

ಕಳೆದ ಒಂದು ತಿಂಗಳಿಂದ ನೀರು ಹರಿಸಿದರೂ ಮತ್ತೇ ಸುಪ್ರೀಂಕೋರ್ಟ್ ಸಹ ನೀರು ಹರಿಸಿ ಎಂದೂ ಎರಡು ಪ್ರಾಧಿಕಾರಗಳ ಆದೇಶವನ್ನು ಎತ್ತಿ ಹಿಡಿದಿರುವುದು ಕರ್ನಾಟಕಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ದೂರಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯುಸೆಕ್ ಗೂ ಹೆಚ್ಚು ನೀರು ಹರಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಆರ್‌ಎಸ್ ಜಲಾಶಯ ಬರಿದು ಮಾಡಿ ರೈತರಿಗೆ ನೇಣು ಭಾಗ್ಯ ನೀಡುತ್ತಿದೆ ಎಂದು ಆರೋಪಿಸಿ ಭೂಮಿತಾಯಿ ಹೋರಾಟ ಸಮಿತಿ ಸದಸ್ಯರು, ರೈತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲೂಕು ಕಚೇರಿ ಎದುರು ಸಮಿತಿ ಸದಸ್ಯರು ಸೇರಿ ಕಾವೇರಿ ನೀರು ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರ ರೈತರಿಗೆ ನೇಣು ಕುಣಿಕೆ ನೀಡಿದೆ ಎಂದು ಕೈಯಲ್ಲಿ ಕುಣಿಕೆ ಹಿಡಿದು ಆಕ್ರೋಶ ಹೊರ ಹಾಕಿದರು.

ಹಿರಿಯ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿದ್ದರೂ ಕಾವೇರಿ ಪ್ರಾಧಿಕಾರಗಳು ಕೆಆರ್‌ಎಸ್ ನಿಂದ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದ್ದು, ಈ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದು ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಪ್ರಾಧಿಕಾರಗಳ ಆದೇಶವನ್ನು ಪಾಲಿಸಿ ಪ್ರತಿ ದಿನ 15 ಸಾವಿರ ಕ್ಯುಸೆಕ್ ಗೂ ಹೆಚ್ಚು ನೀರನ್ನು ತಮಿಳುನಾಡಿಗೆ ಬಿಡುವ ಮೂಲಕ ಸರ್ಕಾರ ಎಲ್ಲಾ ಭಾಗ್ಯಗಳ ಜೊತೆ ರೈತರಿಗೆ ನೇಣು ಭಾಗ್ಯ ನೀಡಿದೆ. ಸರ್ಕಾರ ಈಗಾಗಲೇ ಜಲಾಶಯದಿಂದ 30 ಟಿಎಂಸಿ ನೀರನ್ನು ಹರಿಸಿದ್ದು, ಮತ್ತೆ ಸುಪ್ರೀಂ ಕೋರ್ಟ್ ಹೇಳಿರುವ ಆದೇಶದಂತೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಿ ಪಾಲಿಸಿದರೆ, ಜಲಾಶಯದ ನೀರು ತಳಮಟ್ಟ ತಲುಪಿ ಬರಿದಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಳೆದ ಬಾರಿಯು ಬೆಳೆ ಇಲ್ಲದೆ ಇರುವ ರೈತರಿಗೆ ಇದೀಗ ಮುಂಗಾರು ಹಂಗಾಮಿನ ಬೆಳೆ ಇಲ್ಲದೆ ಮಣ್ಣು ತಿನ್ನುವ ಪರಿಸ್ಥಿತಿಯಾಗಿದೆ. ಇದಕ್ಕೆಲ್ಲಾ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಹಾಗೂ ಇತರೆ ಮಂತ್ರಿಗಳು ಹೊಣೆಗಾರಿಕೆಯಾಗಲಿದ್ದಾರೆ ಎಂದು ಆರೋಪಿಸಿದರು.

ಸಮಿತಿ ಅಧ್ಯಕ್ಷ ಬಿ.ಸಿ. ಕೃಷ್ಣೇಗೌಡ ಮಾತನಾಡಿ, ಮಂತ್ರಿ ಸ್ಥಾನಗಳನ್ನು ಉಳಿಸಿಕೊಳ್ಳಲು ಕೆಆರ್‌ಎಸ್ ಜಲಾಶಯದಿಂದ ಕದ್ದು ಮುಚ್ಚಿ ನೀರು ಹರಿಸುತ್ತಿರುವ ಸರ್ಕಾರದ ಜೊತೆ ನಮ್ಮ ಜನ ಪ್ರತಿನಿಧಿಗಳು ಸಹ ತಮ್ಮ ಅಧಿಕಾರ ಉಳಿಸಿಕೊಳ್ಳಲು ರೈತರೊಂದಿಗೆ ಚೆಲ್ಲಾಟ ವಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ಒಂದು ತಿಂಗಳಿಂದ ನೀರು ಹರಿಸಿದರೂ ಮತ್ತೇ ಸುಪ್ರೀಂಕೋರ್ಟ್ ಸಹ ನೀರು ಹರಿಸಿ ಎಂದೂ ಎರಡು ಪ್ರಾಧಿಕಾರಗಳ ಆದೇಶವನ್ನು ಎತ್ತಿ ಹಿಡಿದಿರುವುದು ಕರ್ನಾಟಕಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ದೂರಿದರು.

ಕಾವೇರಿ ನದಿ ನೀರಿನ ವಿಚಾರವಾಗಿ ಪ್ರಾಧಿಕಾರಕ್ಕೆ ಮಳೆಯ ಕೊರತೆ, ಜಲಾಶಯದ ನೀರಿನ ಬಗ್ಗೆ ಸರಿಯಾದ ಮಾಹಿತಿಗಳನ್ನು ಕೊಡದೆ ತಪ್ಪು ಮಾಹಿತಿ ನೀಡಿರುವ ಸರ್ಕಾರ ಮುಂಗಾರು ಮಳೆ ಕೊರತೆ ಇದ್ದರೂ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದೆ. ಸುಳ್ಳಿನ ಮನೆ ಮಾಡಿಕೊಂಡು ನೀರು ಹರಿಸಿಲ್ಲ ಎಂದು ಆಣೆ ಪ್ರಮಾಣಗಳ ಮಾಡಿ ಕದ್ದು ಮುಚ್ಚಿ ನೀರು ಬಿಡುತ್ತಿದ್ದಾರೆ ಎಂದು ರಾಜ್ಯದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಮಹದೇವು, ಕೃಷ್ಣ, ರವಿ ಲಕ್ಷ್ಮಣ, ರಾಮಚಂದ್ರು, ಶ್ರೀನಿವಾಸು, ರಮೇಶ್, ಕಡತನಾಳು ಬಾಬು, ರಾಮಕೃಷ್ಣ, ಚಂದ್ರಶೇಖರ್ ಸೇರಿದಂತೆ ಇತರೆ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೊಲೀಸರು ಬರೆದರೆ ಬದುಕಿನ ಬಹಳ ದೊಡ್ಡ ಸತ್ಯ ಹೇಳಿದಂತೆ: ಡಾ.ಕೃಷ್ಣಮೂರ್ತಿ ಹನೂರು
ದೇಶಭಕ್ತಿ, ಹಿಂದೂ ಸಂಸ್ಕೃತಿ ರಕ್ಷಣೆ ಸಂಕಲ್ಪ ಮಾಡಿ