ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಎತ್ತಿನ ಬಂಡಿಯನ್ನೇರಿದ ಬಿ.ವೈ.ವಿಜಯೇಂದ್ರ, ವಿಪ ಸದಸ್ಯ ಸಿ.ಟಿ.ರವಿ, ಮಾ
ಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಇತರರು ಕೈಯಲ್ಲಿ ಬಾರುಕೋಲು ಹಿಡಿದು, ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವ ಜತೆಗೆ ರೈತರ ಸಮಸ್ಯೆ ಪರಿಹರಿಸುವಂತೆ ರಾಜ್ಯ ಸರ್ಕಾರಕ್ಕೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಎತ್ತಿನ ಬಂಡಿಯಲ್ಲೇ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು.ನಂತರ ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನಾನಿರತ ಮುಖಂಡರು, ಕಾರ್ಯಕರ್ತರು, ರೈತರನ್ನುದ್ದೇಶಿಸಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯವ್ಯಾಪಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ನಿರ್ಧಾರ. ಕಳೆದ ಕೆಲ ತಿಂಗಳಿನಿಂದ ರಾಜ್ಯದ ರೈತರ ಪರಿಸ್ಥಿತಿ ಏನಾಗಿದೆಯೆಂಬುದನ್ನು ಎಲ್ಲರೂ ಗಮನಿಸಿದ್ದಾರೆ. ಕಾಂಗ್ರೆಸ್ ಸರ್ಕಾರವು ಬಂದಾಗಿನಿಂದ ಸಿಎಂ ಸಿದ್ದರಾಮಯ್ಯಗೆ ಒಂದು ರೀತಿ ವಕ್ರದೃಷ್ಟಿ, ರೈತರನ್ನು ಕಂಡರೆ ಅಸಹನೆಯೆಂಬಂತೆ ಕಾಣುತ್ತದೆ ಎಂದರು.
ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸದೇ, ಇಡೀ ಸಚಿವ ಸಂಪುಟ ದೆಹಲಿಯಲ್ಲಿ ಕುಳಿತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಕ್ಕೆಜೋಳ ಖರೀದಿ ಕೇಂದ್ರದ ಕುರಿತಂತೆ ಚರ್ಚಿಸಲು ಸಭೆ ಕರೆ
ಎಂಎಲ್ಸಿ ಸಿ.ಟಿ.ರವಿ, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಶಾಸಕರಾದ ಮಾಡಾಳ ವಿರುಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಎಂ.ಬಸವರಾಜ ನಾಯ್ಕ, ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಮಾಡಾಳ ಮಲ್ಲಿಕಾರ್ಜುನ, ಲೋಕಿಕೆರೆ ನಾಗರಾಜ, ಬಿ.ಜಿ.ಅಜಯಕುಮಾರ, ಚಂದ್ರಶೇಖರ ಪೂಜಾರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಪಿ.ಸಿ.ಶ್ರೀನಿವಾಸ ಭಟ್, ಧನಂಜಯ ಕಡ್ಲೇಬಾಳ್, ಅನಿಲಕುಮಾರ ನಾಯ್ಕ, ಅಣ್ಣೇಶ, ಮಹೇಶ ಪಲ್ಲಾಗಟ್ಟಿ, ಜಿಪಂ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ ಮಹೇಶ, ಎಚ್.ಸಿ.ಜಯಮ್ಮ, ನೀತು, ದಾಕ್ಷಾಯಣಮ್ಮ, ಅಶ್ವಿನಿ, ಗೌತಮ್ ಜೈನ್ ಅನೇಕರು ಇದ್ದರು.
ಬಿಜೆಪಿಯಲ್ಲಿ ಇರುವವರು ರೈತರ ಮಕ್ಕಳಾಗಿದ್ದು, ಕಾಂಗ್ರೆಸ್ನಲ್ಲಿರುವವರು ಕಾರ್ಪೋರೇಟ್ ಸಂಸ್ಕೃತಿಯವರಾಗಿದ್ದು, ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದವರಿಗೆ ರೈತರ ಬಗ್ಗೆ ಕನಿಷ್ಟ ಕಾಳಜಿ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಏಟು ಬೀಸಲು ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ಶುರು ಮಾಡಿದ್ದೇವೆ. ಹಿಂದೆ ಯಡಿಯೂರಪ್ಪ ರೈತರಿಗೆ ಎಲ್ಲಾ ರೀತಿ ಸ್ಪಂದಿಸಿದ್ದರು. ಇದು ನಿಜ