ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಸಿ.ಎಸ್.ಷಡಾಕ್ಷರಿ ಅಭಿಮಾನಿ ಬಳಗದ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಸೇವಾ ವಿಕಾಸ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ 47ನೇ ಹುಟ್ಟುಹಬ್ಬದ ಅಂಗವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಸರ್ಕಾರದ ಇಲಾಖೆಯಲ್ಲಿ ಸಾಮಾನ್ಯ ಹುದ್ದೆಗೆ ನೇಮಕಗೊಂಡು, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ, ಬಳಿಕ ರಾಜ್ಯಾಧ್ಯಕ್ಷ ಸ್ಥಾನದವರೆಗಿನ ಸಾಧನೆ ಸಾಮಾನ್ಯವೇನಲ್ಲ. ಯಾವ ವ್ಯಕ್ತಿಯಲ್ಲಿ ಸಾಮಾಜಿಕ ಕಳಕಳಿಯ ಗುಣಗಳಿರುತ್ತವೆಯೋ ಅಂತವರಿಗೆ ಎಲ್ಲಾ ಸ್ಥಾನಮಾನಗಳು ಸಹಜವಾಗಿ ಹುಡುಕಿಕೊಂಡು ಬರುತ್ತವೆ ಎಂದರು.ಅವರು ಷಡಾಕ್ಷರಿ ಅವರು ಕೇವಲ ಸರ್ಕಾರಿ ನೌಕರರಿಗೆ ನಾಯಕರಾಗದೇ ರಾಜ್ಯದ ಎಲ್ಲಾ ವರ್ಗದ ಜನರ ನಾಯಕರಾಗುವಂತಹ ಅವಕಾಶ ದೊರೆಯುವಂತಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಸತೀಶ್ ಕುಮಾರ್ ಶೆಟ್ಟಿ, ಡಿಎಸ್ಎಸ್ ಗುರುಮೂರ್ತಿ, ಡಾ| ವಾಣಿಕೋರಿ, ಮ.ಸ.ನಂಜುಂಡಸ್ವಾಮಿ, ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಗೋವಿಂದಪ್ಪ, ಪತ್ರಕರ್ತ ವೈ.ಕೆ. ಸೂರ್ಯ ನಾರಾಯಣ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಮೋಹನ್ಕುಮಾರ್, ಬಳ್ಳೆಕೆರೆ ಸಂತೋಷ್, ಆರ್.ಪಾಪಣ್ಣ ಮಹೇಶ್ವರಪ್ಪ, ಷಡಾಕ್ಷರಿ ಅವರ ತಾಯಿ ಬೋರಾಂಬಿಕಾ, ಪತ್ನಿ ಬೇಬಿ, ಮಕ್ಕಳು ಸೇರಿದಂತೆ ಅಪಾರ ಅಭಿಮಾನಿಗಳು ಇತರರು ಉಪಸ್ಥಿತರಿದ್ದರು.
ಹುಟ್ಟು ಹಬ್ಬದ ಅಂಗವಾಗಿ ಇಡೀ ದಿನ ವಿವಿಧೆಡೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘದ ವತಿಯಿಂದ ಶಾರದಾ ದೇವಿ ಅಂದರ ವಿಕಾಸ ಕೇಂದ್ರದಲ್ಲಿ ಮಕ್ಕಳಿಗೆ ಸಿಹಿತಿನಿಸು ಹಾಗೂ ಹಣ್ಣುಗಳನ್ನು ವಿತರಿಸಲಾಯಿತು. ------------------
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿಯವರ 47 ನೇ ಹುಟ್ಟು ಹಬ್ಬದ ಸಂಬಂಧ ನಡೆದ ಕಾರ್ಯಕ್ರಮವನ್ನು ಅವರ ತಾಯಿ ಬೋರಾಂಬಿಕಾ ಮತ್ತು ವಿವಿಧ ಗಣ್ಯರು ಜಂಟಿಯಾಗಿ ಉದ್ಘಾಟಿಸಿದರು.