ಕಾರ್ಕಳ: ಮಾಜಿ ಸಚಿವ ಸಿ.ಟಿ. ರವಿ ಅವರಿಗೆ ನೋಟಿಸ್ ನೀಡಲು ರಾಜ್ಯ ಪೊಲೀಸ್ ಇಲಾಖೆ ಕೈಗೊಂಡ ಕ್ರಮವನ್ನು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಹೈಕೋರ್ಟ್ ಪೊಲೀಸರ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಬಳಿಕವೂ ಖಾಕಿ ಪಡೆ ಆಳುವ ಸರ್ಕಾರದ ಒತ್ತಡಕ್ಕೆ ಮಣಿದು ವಿರೋಧಿ ಧ್ವನಿಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ, ಸಿ.ಟಿ. ರವಿ ವಿರುದ್ಧ ಯಾವುದೇ ದುರುದ್ದೇಶಪೂರಿತ ಕ್ರಮವನ್ನು ಸಹಿಸುವುದಿಲ್ಲ ಎಂದಿದ್ದಾರೆ.ಉಪಮುಖ್ಯಮಂತ್ರಿ ಪ್ರಿಯಾಂಕ್ ಖರ್ಗೆ ಅವರನ್ನು ಉದ್ದೇಶಿಸಿ ಮಾತನಾಡಿರುವ ಸುನಿಲ್ ಕುಮಾರ್, ನಿಮಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಸಿ.ಟಿ. ರವಿಯವರಿಗೂ ಇದೆ ಎಂದು ಹೇಳಿದ್ದಾರೆ.