ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್
ಸಮಾಜ ಕಲ್ಯಾಣ ಇಲಾಖೆ ಹಾಸ್ಟಲ್ಗಳಲ್ಲಿ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದ್ದವು ಎಂದಿರುವ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ಅವರನ್ನು ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಆಗ್ರಹಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತ್ತಿಚೇಗೆ ಜಿಲ್ಲಾ ಪಂಚಾಯ್ತಿಯಲ್ಲಿ ನಡೆದ ಚಿಕ್ಕಮಗಳೂರು ತಾಲೂಕು ಕೆಡಿಪಿ ಸಭೆಯಲ್ಲಿ ಸಿ.ಟಿ. ರವಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.ಸಮಾಜ ಕಲ್ಯಾಣ ಇಲಾಖೆ ಹಾಸ್ಟಲ್ಗಳನ್ನು ನಕ್ಸಲೀಯರು ತಮ್ಮ ಚಟುವಟಿಕೆ ವಿಸ್ತರಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದರು. ಅಲ್ಲಿ ತಮ್ಮ ವಿಚಾರ ವಿನಿಮಯ ಮಾಡಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. ಇದು, ಹಾಸ್ಟಲ್ಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಮಾಡಿರುವ ಅವಮಾನ ಎಂದರು.
ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ವಸಂತಕುಮಾರ್, ಸಂತೋಷ್, ನಟರಾಜ್, ಪುಟ್ಟಸ್ವಾಮಿ ಹಾಗೂ ಅಣ್ಣಯ್ಯ ಇದ್ದರು.ಪೋಟೋ ಫೈಲ್ ನೇಮ್ 22 ಕೆಸಿಕೆಎಂ 2