ಸಿಎ ಕಾರ್ತಿಕೇಯ ಶೆಣೈ ಸಿಎ ಆರಂಭಿಕ ಹಂತದಿಂದ ಹಿಡಿದು ಕೊನೆಯ ತನಕ ಎಲ್ಲ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು.
ಮೂಡುಬಿದಿರೆ: ಆಳ್ವಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಐ.ಸಿ.ಎ.ಐ ಮಂಗಳೂರು ಚಾಪ್ಟರ್ ವತಿಯಿಂದ ಅಳ್ವಾಸ್ ಪ್ರೌಢಶಾಲೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಎ ವೃತ್ತಿಯ ಕುರಿತು ಮಾಹಿತಿ ಕಾರ್ಯಕ್ರಮ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಇಂದು ವಿದ್ಯಾರ್ಥಿಗಳು ವೈದ್ಯಕೀಯ ಇಲ್ಲವೇ ತಾಂತ್ರಿಕ ಪದವಿಗಳನ್ನು ಆರಿಸಿಕೊಳ್ಳುವ ಪ್ರವೃತ್ತಿ ಕಾಣಿಸುತ್ತಿದೆ. ಆದರೆ ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನೂರಾರು ದಾರಿಗಳಿವೆ ಎಂಬುದನ್ನು ಅರಿತುಕೊಳ್ಳಬೇಕಾಗಿದೆ ಎಂದರು. ಸಿಎಯನ್ನು ಆಯ್ಕೆ ಮಾಡಿಕೊಂಡು ಅದಕ್ಕೆ ಬೇಕಾದ ಪೂರ್ವ ತಯಾರಿಯನ್ನು ಆರಂಭಿಕ ಹಂತದಲ್ಲೇ ಮಾಡಿಕೊಳ್ಳಬೇಕು. ಇದಕ್ಕೆ ಬೇಕಾದ ಎಲ್ಲ ಅವಕಾಶಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪದವಿ ಪೂರ್ವ ಹಂತದಲ್ಲಿ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಿಎ ಕಾರ್ತಿಕೇಯ ಶೆಣೈ ಸಿಎ ಆರಂಭಿಕ ಹಂತದಿಂದ ಹಿಡಿದು ಕೊನೆಯ ತನಕ ಎಲ್ಲ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. ಸಿಎ ಗೌತಮ್ ನಾಯಕ್, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್ ಮಾತನಾಡಿದರು. ಸಿಎ ಡೇನಿಯಲ್ ಪಿರೇರಾ ಹಾಗೂ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ ಎಂ.ಡಿ ಉಪಸ್ಥಿತರಿದ್ದರು. ವಾಣಿಜ್ಯ ಸಂಘದ ಸಂಯೋಜಕಿ ರಶ್ಮಿನ್ ತನ್ನೀರ್ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.