ಕನ್ನಡಪ್ರಭ ವಾರ್ತೆ ಉಡುಪಿ
ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಿನ್ಸಿಪಾಲ್ ಡಾ. ಸುಕನ್ಯಾ ಮೇರಿ ಜೆ., ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ಉಡುಪಿ ಶಾಖೆ ಮಾಜಿ ಅಧ್ಯಕ್ಷ ನರಸಿಂಹ ನಾಯಕ್ ಇದ್ದರು. ಶ್ರಾವ್ಯಾ ಪೂಜಾರಿ ಸ್ವಾಗತಿಸಿದರು. ಶಮಾ ಕುಂದರ್ ನಿರೂಪಿಸಿ, ಸುಪ್ರೀತಾ ವಂದಿಸಿದರು.
ಕಲ್ಸಂಕದ ಟಿ.ವಸಂತ ಕಿಣಿ, ವನಿತಾ ಕಿಣಿ ದಂಪತಿ ಪುತ್ರಿಯಾದ ಮಹಾಲಕ್ಷ್ಮಿ ಕಿಣಿ ಮದುವೆ ಬಳಿಕ, ಪದವಿ ಓದಿನ ಜೊತೆ, ಮೂಡುಬಿದಿರೆಯ ಸಿಎ ಆಕಾಶ್ದೀಪ್ ಪೈ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡಿ ಸಿಎ ಅಂತಿಮ ಪರೀಕ್ಷೆ ಬರೆದಿದ್ದರು.10ರಂದು ಸಂತ ಸಮಾಗಮ:ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ ಸಚ್ಚೇರಿಪೇಟೆ ಹಾಗೂ ಹಿಂದು ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರಂದು ಸಂಜೆ 4 ಗಂಟೆಯಿಂದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ನಡೆಯಲಿದೆ.
ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಪಶ್ರೀ ಈಶ ವಿಠಲದಾಸ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ವಿಶ್ವ ಹಿಂದು ಪರಿಷತ್ನ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಧಾರ್ಮಿಕ ಭಾಷಣ ಮಾಡಲಿದ್ದು, ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ.ರಾತ್ರಿ 10 ಗಂಟೆಯಿಂದ ಅಮ್ಮ ಕಲಾವಿದೆರ್ ಕುಡ್ಲ ಇವರಿಂದ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಮತ್ತು ರಂಗ್ದ ರಾಜೆ ಸುಂದರ್ ರೈ ಅಭಿನಯದ ‘ಅಮ್ಮೆರ್’ ತುಳು ಹಾಸ್ಯಮಯ ನಾಟಕ ಜರುಗಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಹರೀಶ್ ಸಚ್ಚೇರಿಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.