- ಬೈರಮಂಗಲ ಕೆರೆ ದಡದಲ್ಲಿ ಜಲಮಂಡಳಿಯಿಂದ ಸ್ಥಾಪನೆಕನ್ನಡಪ್ರಭ ವಾರ್ತೆ ಬೆಂಗಳೂರು
ಇದೇ ವೇಳೆ ಗೇಲ್ ಇಂಡಿಯಾ ಸಂಸ್ಥೆಯಿಂದ ಬಿಬಿಎಂಪಿಯ 300 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಉಪಯೋಗಿಸಿಕೊಂಡು ಹರಳಗುಂಟೆ ಬಳಿ ಬಯೋ ಗ್ಯಾಸ್ ಘಟಕ ಸ್ಥಾಪಿಸಲು ಜಾಗ ಒದಗಿಸಲು ತೀರ್ಮಾನಿಸಲಾಗಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ ಅವರು, ಬೆಂಗಳೂರು ಜಲಮಂಡಳಿಯಿಂದ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾಮಗಾರಿ ಹಾಗೂ 7 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ₹391.82 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿರುವುದಾಗಿ ತಿಳಿಸಿದರು.ಗೇಲ್ ಇಂಡಿಯಾ ಲಿಮಿಟೆಡ್ ಸಂಸ್ಥೆ ವತಿಯಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ ಉತ್ಪತ್ತಿಯಾಗುವ ಘನತ್ಯಾಜ್ಯದ ಪೈಕಿ 300 ಟನ್ ಹಸಿ ತ್ಯಾಜ್ಯ ಉಪಯೋಗಿಸಿಕೊಂಡು ಕಂಪ್ರೆಸ್ಡ್ ಬಯೋ ಗ್ಯಾಸ್ ಘಟಕ ಸ್ಥಾಪಿಸಲು ಹರಳಗುಂಟೆ ಗ್ರಾಮದಲ್ಲಿ 25 ವರ್ಷದ ಗುತ್ತಿಗೆ ಅವಧಿಗೆ 18 ಎಕರ ಎಜಮೀನು ನೀಡಲು ಸಂಪುಟ ಒಪ್ಪಿಗೆ ನೀಡಿದೆ ಎಂದರು.
ನಿರಾಶ್ರಿತರ ಪರಿಹಾರ ಕೇಂದ್ರ
ನಗರದ ಮಾಗಡಿ ಮುಖ್ಯರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು ಎರಡು ಎಕರೆಯಲ್ಲಿ ಮಹರ್ಷಿ ವಾಲ್ಮೀಕಿ ಸೌಧ ಸ್ಥಾಪಿಸಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ನಿರಾಶ್ರಿತರ ಪರಿಹಾರ ಕೇಂದ್ರದ ಸಜ್ಜೆಪಾಳ್ಯ ಗ್ರಾಮದಲ್ಲಿರುವ ಸರ್ವೇ ನಂಬರ್ 4ರಲ್ಲಿ ಲಭ್ಯವಿರುವ ಜಮೀನಿನಲ್ಲಿ ಎರಡು ಎಕರೆ ಜಮೀನನ್ನು ಪರಿಶಿಷ್ಟ ಪಂಗಡಗಳ ನಿರ್ದೇಶನಾಲಯ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಗಾಗಿ ಮಹರ್ಷಿ ವಾಲ್ಮೀಕಿ ಸೌಧ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.