ಯೋಧರ ಶಿಸ್ತು, ಪರಿಶ್ರಮವನ್ನು ಕೆಡೆಟ್‌ಗಳು ಅಳವಡಿಸಿಕೊಳ್ಳಿ: ಡಾ. ಕುಮಾರ ಹೆಗ್ಡೆ

KannadaprabhaNewsNetwork |  
Published : Jan 16, 2025, 12:47 AM IST
ಸೇನೆ | Kannada Prabha

ಸಾರಾಂಶ

ವಸ್ತುಪ್ರದರ್ಶನದಲ್ಲಿ ಯುದ್ಧದಲ್ಲಿ ಬಳಸಲಾಗುವ ಬಂದೂಕು, ಯುದ್ಧ ಟ್ಯಾಂಕ್‌ಗಳ ಮಾದರಿ, ಸೇನಾ ಮೆಡಲ್‌ಗಳ ಮಾದರಿ ಹಾಗೂ ಎನ್‌ಸಿಸಿ ಸಮವಸ್ತ್ರ ಮತ್ತು ಬ್ಯಾಡ್ಜ್‌ ಪ್ರದರ್ಶಿಲಾಯಿತು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನ್ಯಾಷನಲ್ ಕೆಡೆಟ್ ಕೋರ್ (ಎನ್.ಸಿ.ಸಿ.) ವತಿಯಿಂದ 77ನೇ ಭಾರತೀಯ ಸೇನಾ ದಿನಾಚರಣೆ ಬುಧವಾರ ನಡೆಯಿತು.

ಸ್ವಾತಂತ್ರ್ಯದ ಬಳಿಕ ಭಾರತೀಯ ಸೇನೆಯ ಆಡಳಿತವು ಬ್ರಿಟಿಷರಿಂದ ಮುಕ್ತಗೊಂಡು (1949ರ ಜ. 15) ಸೇನೆಯ ಪ್ರಧಾನ ದಂಡನಾಯಕನಾಗಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರು ನೇಮಕಗೊಂಡ ಸವಿನೆನಪಿಗಾಗಿ ಸೇನಾ ದಿನವಾಗಿ ಆಚರಿಸಲಾಗುತ್ತದೆ.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲ ಡಾ.ಬಿ.ಎ. ಕುಮಾರ ಹೆಗ್ಡೆ, ಭಾರತೀಯ ಸೇನೆಯು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ನಮ್ಮ ಕಾಲೇಜಿನ ಎನ್.ಸಿ.ಸಿ. ವಿಭಾಗವು ಬಹಳ ಅತ್ಯುನ್ನತ ದಾಖಲೆಗಳನ್ನು ಹೊಂದಿದೆ. ಸೈನಿಕರಲ್ಲಿರುವ ಶಿಸ್ತು, ಪರಿಶ್ರಮ ಇತ್ಯಾದಿ ಗುಣಗಳನ್ನು ಭವಿಷ್ಯದ ಸೈನಿಕರು (ಕೆಡೆಟ್‌ಗಳು) ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಪ್ರಯುಕ್ತ ರಚಿಸಲಾದ ಭಿತ್ತಿಪತ್ರಿಕೆಯನ್ನು ಇದೇ ಸಂದರ್ಭದಲ್ಲಿ ಅವರು ಅನಾವರಣಗೊಳಿಸಿದರು. ವಸ್ತು ಪ್ರದರ್ಶನ ಉದ್ಘಾಟಿಸಿದರು. ಉಪ ಪ್ರಾಂಶುಪಾಲ ಡಾ. ಶಲೀಪ್ ಎ.ಪಿ., ಕಲಾ ನಿಕಾಯದ ಡೀನ್ ಡಾ. ಶ್ರೀಧರ್ ಭಟ್, ಎನ್.ಸಿ.ಸಿ. ಭೂದಳದ ಮುಖ್ಯಸ್ಥ ಲೆಫ್ಟಿನೆಂಟ್ ಭಾನುಪ್ರಕಾಶ್ ಬಿ.ಇ., ಆಫೀಸರ್ ಇನ್ ಚಾರ್ಜ್ ಶೋಭಾ, ಮಾಜಿ ಆಫೀಸರ್ ಇನ್ ಚಾರ್ಜ್ ಶುಭಾರಾಣಿ ಉಪಸ್ಥಿತರಿದ್ದರು. ಕೆಡೆಟ್ ಶೆಟ್ಟಿ ಯೋನ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.ಸೈನಿಕರ ಕಾರ್ಯಾಚರಣೆಯ ಪ್ರಾತ್ಯಕ್ಷಿಕೆ: ಕಾರ್ಯಕ್ರಮದ ಪ್ರಯುಕ್ತ, ದೇಶದ ಸೈನ್ಯದ ಇತಿಹಾಸ, ಪರಂಪರೆ ಮತ್ತು ಸೈನಿಕರ ಶ್ರಮವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ವಸ್ತುಪ್ರದರ್ಶನ ಹಾಗೂ ಕಾಲೇಜಿನ ಒಳಾಂಗಣದಲ್ಲಿ ಸೈನಿಕ ಕಾರ್ಯಾಚರಣೆಯ ಪ್ರಾತ್ಯಕ್ಷಿಕೆ ಏರ್ಪಡಿಸಲಾಯಿತು. ಕಾರ್ಯಾಚರಣೆ ವೇಳೆ ಬಳಸುವ ಫೈಲ್ ಫಾರ್ಮೇಶನ್, ಆ್ಯರೋ ಹೆಡ್ ಫಾರ್ಮೇಶನ್, ಡೈಮಂಡ್ ಹೆಡ್ ಫಾರ್ಮೇಶನ್, ಸ್ಪಿಯರ್ ಹೆಡ್ ಫಾರ್ಮೇಶನ್, ಇತ್ಯಾದಿ ವಿವಿಧ ವ್ಯೂಹಗಳನ್ನು ಪ್ರದರ್ಶಿಸಿದರು. ಸೀನಿಯರ್ ಅಂಡರ್ ಆಫೀಸರ್ ಸೀಮಾ ಜಹಾಂಗೀರ್ ಪ್ರಾತ್ಯಕ್ಷಿಕೆಯ ವೀಕ್ಷಕ ವಿವರಣೆ ನೀಡಿದರು.

ಜೂನಿಯರ್ ಅಂಡರ್ ಆಫೀಸರ್ (ಜೆಯುಒ) ಶಶಿಕುಮಾರ್ ಮತ್ತು ಕಂಪನಿ ಕ್ವಾರ್ಟರ್ ಮಾಸ್ಟರ್ ಸರ್ಜೆಂಟ್ (ಸಿಕ್ಯುಎಂಎಸ್) ಅರ್ಪಣ್ ಆಳ್ವ ಕಾರ್ಯಾಚರಣೆ ತಂಡಗಳ ನಾಯಕರ ಪಾತ್ರ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಹಿರಿಯ ಕೆಡೆಟ್ ಶ್ರೀಮಂತ್ ಜಿ.ಎಂ. ತರಬೇತಿ ನೀಡಿದ್ದರು.

ಪ್ರವೇಶ ದ್ವಾರದಲ್ಲಿ ರಂಗೋಲಿ ಮೂಲಕ ರಚಿಸಿದ ಸೇನಾ ದಿನಾಚರಣೆ ಕುರಿತ ಚಿತ್ರವನ್ನು ಕಾರ್ಪೊರಲ್ ದೀಪ್ತಿ ಆಚಾರ್ಯ ಪಿ. ಪ್ರಾಂಶುಪಾಲರಿಗೆ ವಿವರಿಸಿದರು. ವಸ್ತುಪ್ರದರ್ಶನದಲ್ಲಿ ಯುದ್ಧದಲ್ಲಿ ಬಳಸಲಾಗುವ ಬಂದೂಕು, ಯುದ್ಧ ಟ್ಯಾಂಕ್‌ಗಳ ಮಾದರಿ, ಸೇನಾ ಮೆಡಲ್‌ಗಳ ಮಾದರಿ ಹಾಗೂ ಎನ್‌ಸಿಸಿ ಸಮವಸ್ತ್ರ ಮತ್ತು ಬ್ಯಾಡ್ಜ್‌ ಪ್ರದರ್ಶಿಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ