ಚಿರತೆ ದಾಳಿಗೆ ಕರು ಬಲಿ

KannadaprabhaNewsNetwork |  
Published : Dec 13, 2024, 12:47 AM IST
ಚಿರತೆ ದಾಳಿಗೆ ಕರು ಬಲಿ | Kannada Prabha

ಸಾರಾಂಶ

ತಿಪಟೂರು : ತಾಲೂಕಿನ ಹೊನ್ನವಳ್ಳಿ ಹೋಬಳಿ ಗ್ಯಾರಘಟ್ಟ ಗ್ರಾಮದಲ್ಲಿ ಚಿರತೆ ಕರುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ನಡೆದಿದೆ.

ತಿಪಟೂರು : ತಾಲೂಕಿನ ಹೊನ್ನವಳ್ಳಿ ಹೋಬಳಿ ಗ್ಯಾರಘಟ್ಟ ಗ್ರಾಮದಲ್ಲಿ ಚಿರತೆ ಕರುವಿನ ಮೇಲೆ ದಾಳಿ ಮಾಡಿ ಕೊಂದಿರುವ ಘಟನೆ ನಡೆದಿದೆ.

ಗ್ರಾಮದ ಸಿದ್ದೇಶ್ ಎಂಬುವವರ ಹಸುವಿನ ಕರುವನ್ನು ಮನೆಯ ಮುಂದೆ ಕಟ್ಟಿಹಾಕಲಾಗಿತ್ತು. ಸಂಜೆ ಸಮಯದಲ್ಲಿ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಬಲಿ ತೆಗೆದುಕೊಂಡಿದೆ. ಈ ಭಾಗದಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಾಗಿದೆ. ಚಿರತೆಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮಕೈಗೊಳ್ಳದ ಕಾರಣ ಚಿರತೆಗಳು ಹಸು, ಎಮ್ಮೆ, ಮೇಕೆಗಳ ಮೇಲೆ ದಾಳಿ ಮಾಡುತ್ತಿವೆ. ಮನುಷ್ಯರ ಮೇಲೆ ದಾಳಿ ಮಾಡುವ ಮುನ್ನ ಅರಣ್ಯ ಇಲಾಖೆ ಬೋನ್ ಇಟ್ಟು ಚಿರತೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜೃಂಭಣೆಯ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವ
ಸನಾತನ ಪರೀಕ್ಷೆಗೊಳಗಾದ್ರೂ ಅಳಿಸಲಸಾಧ್ಯ: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್