ಕನ್ನಡಪ್ರಭ ವಾರ್ತೆ ಮಂಗಳೂರು
ಸ್ವಯಂಘೋಷಿತ ಆಸ್ತಿ ತೆರಿಗೆ ವಸೂಲಾತಿ ಆಂದೋಲನ ವಾಹನಕ್ಕೆ ಬುಧವಾರ ಪಾಲಿಕೆ ಮುಂಭಾಗ ಹಸಿರು ನಿಶಾನೆ ತೋರಿಸಿದ ಬಳಿಕ ಅವರು ಸುದ್ದಿಗಾರರಲ್ಲಿ ಮಾತನಾಡಿದರು.
ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಗಾಗಿ ಎರಡು ಸಂಚಾರಿ ವಾಹನಗಳು ಜನತೆಯಲ್ಲಿ ಜಾಗೃತಿ, ಅರಿವು ಮೂಡಿಸುವ ಕೆಲಸ ನಡೆಸಲಿವೆ. ಪಾಲಿಕೆಯ ಎಲ್ಲ 60 ವಾರ್ಡ್ಗಳಲ್ಲಿ ಮಾರ್ಚ್ ಅಂತ್ಯದ ವರೆಗೆ ಈ ವಾಹನಗಳು ಸಂಚರಿಸಿ, ಧ್ವನಿವರ್ಧಕ ಮೂಲಕ ತೆರಿಗೆ ಪಾವತಿಸುವಂತೆ ಬಾಕಿ ತೆರಿಗೆದಾರರಿಗೆ ವಿನಂತಿಸಲಿದೆ ಎಂದರು.ನೇರ ಪಾವತಿ ಅವಕಾಶ:
ಉದ್ಯಮಿಗಳಿಗೆ ನೋಟಿಸ್:
ಡೋರ್ ನಂಬರ್ ಇಲ್ಲದ ಆಸ್ತಿಗಳಿಗೆ ದುಪ್ಪಟ್ಟು ತೆರಿಗೆ ವಿಧಿಸಲಾಗುವುದು. ಪ್ರತಿ ವರ್ಷ ಶೇ.3ರಿಂದ ಶೇ.5ರ ವರೆಗೆ ತೆರಿಗೆ ಪರಿಷ್ಕರಣೆ ಮಾಡಲಾಗುತ್ತದೆ. ಈ ಬಾರಿಯೂ ಶೇ.3ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ ಎಂದರು.
ಪಾಲಿಕೆಯ ಪ್ರತಿ ವಾರ್ಡ್ ಸದಸ್ಯರಿಗೆ ತಲಾ 25 ಲಕ್ಷ ರು. ಅನುದಾನ ಮಂಜೂರು ಮಾಡಲಾಗಿದೆ. ಮೇಯರ್ಗೆ ಮಾತ್ರ 1.30 ಕೋಟಿ ರು. ಅನುದಾನ ಮಂಜೂರುಗೊಂಡಿದ್ದು, ಆದ್ಯತೆ ಮೇರೆಗೆ ಕಾಮಗಾರಿ ನಡೆಸಲಾಗುತ್ತಿದೆ ಎಂದರು.
ಮುಂಗಡ ಪಾವತಿಗೆ ಶೇ.5 ರಿಯಾಯ್ತಿ 2022-23ನೇ ಸಾಲಿನಲ್ಲಿ ಶೇ.90 ತೆರಿಗೆ ಪಾವತಿಯಾಗಿದೆ. 99 ಕೋಟಿ ರು. ಗುರಿಯಲ್ಲಿ 117 ಕೋಟಿ ರು. (ಮುಂಗಡ ತೆರಿಗೆ ಸೇರಿ) ಗುರಿ ಮೀರಿದ ಸಾಧನೆ ಮಾಡಲಾಗಿದೆ. 18 ಕೋಟಿ ರು. ಹೆಚ್ಚು ತೆರಿಗೆ ಸಂಗ್ರಹಿಸಲಾಗಿದೆ. 2025-26ನೇ ಸಾಲಿನ ಮುಂಗಡ ತೆರಿಗೆ ಪಾವತಿ ಮೇಲೆ ಶೇ.5ರ ವಿಶೇಷ ರಿಯಾಯ್ತಿ ನೀಡಲಾಗುವುದು. ತೆರಿಗೆ ಪಾವತಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ. ತೆರಿಗೆ ಬಾಕಿ ಇರಿಸಿದವರಿಗೆ ಭಾನುವಾರ ಸಹಿತ ಪ್ರತಿ ದಿನ ಪಾಲಿಕೆಯಿಂದ ಕರೆ ಮಾಡಿ ತಿಳಿಸಲಾಗುತ್ತಿದೆ. ತೆರಿಗೆ ಪಾವತಿದಾರರು ವಾರ್ಡ್ ನಂಬರು ಹಾಗೂ ಡೋರ್ ನಂಬರು ನಮೂದಿಸಿದರೆ, ಆನ್ಲೈನ್ನಲ್ಲಿ ಸ್ವಯಂ ಆಗಿ ಅವರ ತೆರಿಗೆ ಎಷ್ಟು ಎಂಬುದು ಡಿಸ್ಪ್ಲೇ ಆಗುತ್ತದೆ. ಅದೇ ಮೊತ್ತವನ್ನು ನೇರವಾಗಿ ಪಾವತಿಸಿದರೆ ಆಯಿತು. ಈ ಬಗ್ಗೆ ಮಾಹಿತಿಗೆ 0824-2220313 ಅಥವಾ 306 ಸಂಖ್ಯೆಗೆ ಕರೆ ಮಾಡಬಹುದು. ಇಲ್ಲವೇ ವೆಬ್ಸೈಟ್-mccpropertytax.in ಮೂಲಕವೂ ತೆರಿಗೆ ಪಾವತಿಸಬಹುದು ಎಂದು ಆಯುಕ್ತ ರವಿಚಂದ್ರ ನಾಯಕ್ ಹೇಳಿದರು.ತುಂಬೆ ಡ್ಯಾಂ: 70 ದಿನಕ್ಕೆ ನೀರು ಸಾಕು
ತುಂಬೆ ಡ್ಯಾಂನಿಂದ ಪ್ರತಿದಿನ ಮಂಗಳೂರಿಗೆ 160 ಎಂಎಲ್ಡಿ ನೀರು ಪಂಪಿಂಗ್ ಮಾಡಲಾಗುತ್ತಿದೆ. 96 ಸಾವಿರ ನೀರಿನ ಸಂಪರ್ಕ ಇದ್ದು, 86 ಸಾವಿರ ಲೈವ್ ಸಂಪರ್ಕ ಇದೆ. ಇದಲ್ಲದೆ ಎಂಸಿಎಫ್, ಎಸ್ಇಝಡ್ ಹಾಗೂ ಉಳ್ಳಾಲ, ಮೂಲ್ಕಿ ಪಂಚಾಯ್ತಿಗಳಿಗೆ ನೀರು ಪೂರೈಸಲಾಗುತ್ತಿದೆ ಎಂದರು.
ಉಳ್ಳಾಲಕ್ಕೆ ತುಂಬೆಯಲ್ಲಿ ಪ್ರತ್ಯೇಕ ಜಾಕ್ವೆಲ್ ನಿರ್ಮಿಸಿ ಪ್ರಾಯೋಗಿಕವಾಗಿ ನೀರು ಪೂರೈಕೆಯಾಗುತ್ತಿದೆ. ಪರಿಪೂರ್ಣವಾಗಿ ನೀರು ಪೂರೈಕೆ ಆರಂಭವಾದಾಗ ಪಾಲಿಕೆ ವತಿಯಿಂದ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗುವುದು. ಉಳ್ಳಾಲ ನಗರ ಸಭೆಯಿಂದ 2.7 ಕೋಟಿ ರು. ಹಾಗೂ ಮೂಲ್ಕಿ ಪಟ್ಟಣ ಪಂಚಾಯ್ತಿಯಿಂದ 1.2 ಕೋಟಿ ರು. ಪಾಲಿಕೆಗೆ ನೀರಿನ ಬಿಲ್ಲು ಪಾವತಿಗೆ ಬಾಕಿ ಇದೆ ಎಂದರು.