ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಿಂದ ಪ್ರಾರಂಭವಾದ ಪಥಸಂಚಲ ಬಿ.ಆರ್.ಅಂಬೇಡ್ಕರ್ ಸರ್ಕಲ್,ಬಿಬಿ ರಸ್ತೆ, ಸರ್.ಎಂ.ವಿ. ಸರ್ಕಲ್,ಬಜಾರ್ ರಸ್ತೆ, ಭುವನೇಶ್ವರಿ ವೃತ್ತ,ಗಂಗಮ್ಮ ಗುಡಿ ರಸ್ತೆ,ಎಂಜಿ ರಸ್ತೆ, ಎಪಿಎಂಸಿ ಯಾರ್ಡ್, ಪ್ರಶಾಂತನಗರ, ವಾಪಸಂದ್ರ ದಲ್ಲಿ ಸಂಚರಿಸಿ, ಮತ್ತೆ ವಾಪಸ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕೊನೆಗೊಂಡಿತು.
ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಗರ ಮತ್ತು ಗ್ರಾಮಾಂತರ, ಸಂಚಾರಿ ಪೋಲಿಸರು,ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬ್ಯಾಂಡ್ ಸೆಟ್ ತಂಡ, ಉಪ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.ನಿರ್ಭಯದಿಂದ ಮತ ಹಾಕಿಪೊಲೀಸ್ ಉಪಾಧೀಕ್ಷಕ ಎಸ್.ಶಿವಕುಮಾರ್ ಮಾತನಾಡಿ,2024ರ ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನದಂದು ನಿರ್ಭಯವಾಗಿ, ಧರ್ಮ, ಜನಾಂಗ, ಜಾತಿ, ಮತ, ಭಾಷೆ, ಪ್ರಾದೇಶಿಕತೆ ಸೇರಿದಂತೆ ಯಾವುದೇ ಇತರೆ ಪ್ರೇರಣೆಗಳಿಗೆ, ಆಮಿಷಗಳಿಗೆ ಪ್ರಭಾವಿತರಾಗದೆ ಮತ ಚಲಾಯಿಸಬೇಕು ಎಂದರು.
ಮತದಾನ ಮಾಡುವುದು ನಮ್ಮ ನಿಮ್ಮೆಲ್ಲರ ಹಕ್ಕು. ಯಾರೂ ಸಹ ಮತದಾನದಿಂದ ವಂಚಿತರಾಗಬಾರದು. ತಪ್ಪದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ವರ್ಗದವರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಆ ಹಿನ್ನೆಲೆಯಲ್ಲಿ ಮತದಾನದ ಮಹತ್ವದ ಕುರಿತು ಜನರಿಗೆ ಅರಿವು ಮೂಡಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಪೋಲಿಸ್ ಇಲಾಖೆಯೂ ಕಾರ್ಯ ಪ್ರವೃತ್ತವಾಗಿದೆ ಎಂದು ಹೇಳಿದರು. ಪಥ ಸಂಚಲನದಲ್ಲಿ ಡಿಎಆರ್ ಡಿವೈಎಸ್ಪಿ ಪರಮೇಶ್,ಇನ್ಸ್ ಪೆಕ್ಟರ್ ಮಹದೇವ್, ಇನ್ಸ್ ಪೆಕ್ಟರ್ ಗಳಾದ ಮಂಜುನಾಥ್, ನಿರ್ಮಲ, ಸಬ್ ಇನ್ಸ್ ಪೆಕ್ಟರ್ ಗಳಾದ ಶರಣಪ್ಪ ,ನಾರಾಯಣಸ್ವಾಮಿ,ಮಂಜುಳ, ಎಂ.ಎನ್ .ಮಂಜುಳ, ನಾಗೇಂದ್ರ ಪ್ರಸಾದ್, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಗರ ಮತ್ತು ಗ್ರಾಮಾಂತರ, ಸಂಚಾರಿ ಪೋಲಿಸರು,ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬ್ಯಾಂಡ್ ಸೆಟ್ ತಂಡದವರು ಇದ್ದರು.