ಸಂಸದೆ ಮತ್ತು ಸುಪ್ರಸಿದ್ಧ ಸುಪ್ರೀಂ ಕೋರ್ಟ್ ವಕೀಲರಾದ ಬಾನ್ಸುರಿ ಸ್ವರಾಜ್ ‘ವಿಕಸಿತ ಭಾರತ’ ಕುರಿತು ಪ್ರೇರಣಾತ್ಮಕ ಭಾಷಣ ಮಾಡಲು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಶನಿವಾರ ಭೇಟಿ ನೀಡಿದರು.
ಪುತ್ತೂರು: ಸಂಸದೆ ಮತ್ತು ಸುಪ್ರಸಿದ್ಧ ಸುಪ್ರೀಂ ಕೋರ್ಟ್ ವಕೀಲರಾದ ಬಾನ್ಸುರಿ ಸ್ವರಾಜ್ ‘ವಿಕಸಿತ ಭಾರತ’ ಕುರಿತು ಪ್ರೇರಣಾತ್ಮಕ ಭಾಷಣ ಮಾಡಲು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಶನಿವಾರ ಭೇಟಿ ನೀಡಿದರು.ಅವರ ಭೇಟಿಯ ವೇಳೆ, ಕ್ಯಾಂಪ್ಕೋ ನಿರ್ದೇಶಕ, ನ್ಯಾಯವಾದಿ ಮುರಳಿ ಕೃಷ್ಣ ಕೆ.ಎನ್. ಅವರು ಬಾನ್ಸುರಿ ಸ್ವರಾಜ್ ಅವರಿಗೆ ಕ್ಯಾಂಪ್ಕೋ ಚಾಕೊಲೇಟ್ ನೀಡಿ ಶುಭಾಶಯ ಕೋರಿದರು. ನಂತರ ಅವರು ಕ್ಯಾಂಪ್ಕೋ ಮತ್ತು ಅದರ ಚಟುವಟಿಕೆಗಳ ಕುರಿತು ವಿವರಿಸಿದರು. ಜೊತೆಗೆ ಅಂತರರಾಷ್ಟ್ರೀಯ ಆರೋಗ್ಯ ಸಂಸ್ಥೆ ವತಿಯಿಂದ ಪ್ರಸ್ತಾಪಿಸಲಾದ ಅಡಕೆ ಸೇವನೆಯ ನಿಯಂತ್ರಣ ಮಾರ್ಗಸೂಚಿಗಳಿಂದ ಅಡಿಕೆ ರೈತರು ಎದುರಿಸುತ್ತಿರುವ ವಿವಿಧ ಸವಾಲುಗಳ ಕುರಿತು ವಿವರಿಸಿದರು.
ಕ್ಯಾಂಪ್ಕೋ ನಿರ್ದೇಶಕ ಮುರಳಿ ಕೃಷ್ಣ ಅವರು ವಿಶ್ವ ಆರೋಗ್ಯ ಸಂಸ್ಥೆಯ ಉಪಕ್ರಮಗಳು ಮತ್ತು ಈ ಮಾರ್ಗಸೂಚಿಗಳು ಈ ಪ್ರದೇಶದ ಸಾವಿರಾರು ರೈತರ ಜೀವನೋಪಾಯದ ಮೇಲೆ ಬೀರುವ ಪರಿಣಾಮದ ಬಗ್ಗೆ ವಿವರವಾದ ಮಾಹಿತಿ ನೀಡಿದರು.ಸಂಸತ್ ಸದಸ್ಯೆ ಬಾನ್ಸುರಿ ಸ್ವರಾಜ್ ಅವರು ಈ ವಿಷಯವನ್ನು ಸಂಸತ್ ನಲ್ಲಿ ಮತ್ತು ವಾಣಿಜ್ಯ ಮತ್ತು ಕೃಷಿ ಸಚಿವಾಲಯದಲ್ಲಿ ಸಂಸದರಾದ ಬೃಜೇಶ್ ಚೌಟ ಮತ್ತು ಇತರ ನಾಯಕರ ನೇತೃತ್ವದಲ್ಲಿ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕಿ ಡಾ.ಸುಧಾ.ಎಸ್.ರಾವ್ ಹಾಜರಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ರವೀಂದ್ರ ರೈ ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.