ಹುಬ್ಬಳ್ಳಿ:
ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ. ರವಿ ಬಳಸಿರುವ ಪದವನ್ನು ನಾನು ಖಂಡಿಸುತ್ತೇನೆ. ಭಾರತದ ಸಂಸ್ಕೃತಿಯಲ್ಲಿ ಈ ರೀತಿಯ ಪದ ಬಳಕೆ ಶೋಭೆ ತರುವುದಿಲ್ಲ. ಒಬ್ಬ ಮಹಿಳೆ ಮಾಡಿರುವ ಆರೋಪದ ವಿರುದ್ಧ ಬಿಜೆಪಿಗರು ಹೋರಾಟ ಮಾಡುತ್ತಿದ್ದಾರೆ. ಅದು ಸುಳ್ಳು ಆರೋಪ ಎಂದು ವಾದಿಸುತ್ತಿದ್ದಾರೆ. ಯಾರೂ ಈ ರೀತಿಯ ಆರೋಪವನ್ನು ತಮ್ಮ ಮೇಲೆ ತಾವೇ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಬಿಜೆಪಿಗರು ಅರಿತುಕೊಳ್ಳಬೇಕು ಎಂದರು.
ಬೇರೇನೂ ಗೊತ್ತಿಲ್ಲ:ಬಿಜೆಪಿಯ ನೈತಿಕತೆ ಈ ವಿಚಾರದಲ್ಲಿ ಎದ್ದು ಕಾಣುತ್ತಿದೆ. ಕರ್ನಾಟಕ ಗೂಂಡಾ ರಾಜ್ಯ, ಪಾಕಿಸ್ತಾನ ಆಗಿದೆ ಎಂದು ಬೊಬ್ಬೆ ಹಾಕುವ ಬಿಜೆಪಿ ನಾಯಕರು ಇಂತಹ ಶಬ್ದವನ್ನು ಪ್ರಯೋಗಿಸಬಹುದೇ ಎಂದು ಪ್ರಶ್ನಿಸಿದರು?. ಅಲ್ಲದೆ, ಮುಸಲ್ಮಾನ, ಪಾಕಿಸ್ತಾನ, ಅಫ್ಘಾನಿಸ್ತಾನ ಬಿಟ್ಟರೆ ಇವರಿಗೆ ಬೇರೇನೂ ಗೊತ್ತಿಲ್ಲ ಎಂದು ಕಿಡಿಕಾರಿದರು.
ರವಿ ವಿರುದ್ಧ ಕೊಲೆಯ ಆರೋಪ ಮಾಡಿದಾಗ ದೂರು ಕೊಡಲಿ. ಅದನ್ನು ಬಿಟ್ಟು ಅವಾಚ್ಯ ಶಬ್ದಗಳ ಪ್ರಯೋಗ ಮಾಡುವುದು ಸರಿಯಲ್ಲ. ಆರ್ಎಸ್ಎಸ್ ಮತ್ತು ಬಿಜೆಪಿ ಯಾವ ಮಹಿಳೆ ಬಗ್ಗೆ ಗೌರವ ಇಟ್ಟಿದೆ?. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪಾರ್ಲಿಮೆಂಟ್ ನೂತನ ಕಟ್ಟಡಕ್ಕೆ ಏಕೆ ಕರೆದುಕೊಂಡು ಹೋಗಲಿಲ್ಲ? ಎಂದ ಅವರು, ಶ್ರೀರಾಮಮಂದಿರ ಪೂಜೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಗೆ ಬಿಟ್ಟರು? ಎಂದು ಪ್ರಶ್ನಿಸಿದರು. ಬಿಜೆಪಿ ನಾಯಕರು ಯಾವಾಗಲೂ ಅನಕೂಲಕ್ಕೆ ತಕ್ಕಂತೆ ಮಾತನಾಡುತ್ತಾರೆ ಎಂದರು. 45 ಲಕ್ಷ ಸಾವಿನ ಹೊಣೆ ಮೋದಿ ಹೊರುತ್ತಾರೆಯೆ?