ದೊಡ್ಡಬಳ್ಳಾಪುರ: ಭಾರತದಲ್ಲಿ 4 ನಿಮಿಷಕ್ಕೆ ಒಂದು ಕ್ಯಾನ್ಸರ್ ರೋಗ ಪತ್ತೆಯಾಗುತ್ತಿದ್ದು, 8 ನಿಮಿಷಕ್ಕೊಬ್ಬರು ಕ್ಯಾನ್ಸರ್ನಿಂದ ಸಾವನ್ನಪ್ಪುತ್ತಿರುವುದು ಕಂಡು ಬಂದಿದೆ. ಕ್ಯಾನ್ಸರ್ ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಆರಂಭದಲ್ಲಿಯೇ ತಪಾಸಣೆ ಮಾಡಿಸಿಕೊಂಡರೆ ಗುಣಪಡಿಸಲು ಸಾಧ್ಯವಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕಿದೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ವೈದ್ಯ ಡಾ.ಕೆ.ಎನ್.ಲೋಕೇಶ್ ತಿಳಿಸಿದರು.
ಸಾಮಾನ್ಯವಾಗಿ ಪುರುಷರಿಗೆ ಹೆಚ್ಚಿನದಾಗಿ ಶ್ವಾಸಕೋಶದ ಕ್ಯಾನ್ಸರ್ ಹಾಗೂ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ಗಳು ಬರುವ ಸಾಧ್ಯತೆಗಳಿವೆ. ಬಹಳಷ್ಟು ಮಂದಿ ಕ್ಯಾನ್ಸರ್ ರೋಗವನ್ನು ಆರಂಭದಲ್ಲಿ ನಿರ್ಲಕ್ಷ್ಯ ಮಾಡುವ ಪರಿಣಾಮ, ಅದು ಉಲ್ಬಣಗೊಳ್ಳುತ್ತದೆ. ಅಂತಿಮ ಹಂತ ತಲುಪಿದಾಗ ವೈದ್ಯರು ಸಹ ಏನೂ ಮಾಡಲಾಗುವುದಿಲ್ಲ ಎಂದರು.
ಕಾನ್ಸರ್ ಗುಣಪಡಿಸಬಹುದು:ಬದಲಾಗುತ್ತಿರುವ ಜೀವನ ಶೈಲಿಯಿಂದ ಉಂಟಾಗುವ ಹಾರ್ಮೋನ್ಗಳ ವ್ಯತ್ಯಾಸವೂ ಕ್ಯಾನ್ಸರ್ಗೆ ಕಾರಣವಾಗಬಹುದು. ಪೌಷ್ಟಿಕ ಆಹಾರ, ವ್ಯಾಯಾಮದ ಜೀವನ ಶೈಲಿಯನ್ನು ನಾವು ಅಳವಡಿಸಿಕೊಳ್ಳಬೇಕಾಗುತ್ತೆ. ಕ್ಯಾನ್ಸರ್ಗೆ ಈಗ ಆಧುನಿಕ ಚಿಕಿತ್ಸೆಗಳಿದ್ದು, ಕಿಮೋಥರಫಿ ಎಲ್ಲರಿಗೂ ತಿಳಿದ ಚಿಕಿತ್ಸೆಯಾಗಿದೆ. ಈಗ ಬಂದಿರುವ ಇಮ್ಯುನೋ ಥರಫಿ ಕ್ಯಾನ್ಸರ್ಕಾರಕ ಕಣಗಳನ್ನು ನಾಶ
ಭಾರತೀಯ ವೈದ್ಯಕೀಯ ಸಂಘದ ದೊಡ್ಡಬಳ್ಳಾಪುರ ಘಟಕದ ಅಧ್ಯಕ್ಷ ಡಾ.ವಿನಯ್ ಬಾಬು ಮಾತನಾಡಿ, ಕ್ಯಾನ್ಸರ್ ಕುರಿತಂತೆ ಹಲವಾರು ತಪ್ಪು ತಿಳುವಳಿಕೆಗಳಿವೆ. ನಾನು ಕ್ಯಾನ್ಸರ್
ಶ್ರೀ ರಾಮ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಜಿ.ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಾ.ಕೆ.ವಿ.ರಾಘವೇಂದ್ರ, ಸುಜ್ಞಾನ ದೀಪಿಕಾ ಸಂಸ್ಥೆಯ ಎಂ.ಎಸ್.ಮಂಜುನಾಥ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಡಿ.ಮಂಗಳಗೌರಿ, ಕಾರ್ಯದರ್ಶಿ ಕೆ.ಪಿ.ಲಕ್ಷೀನಾರಾಯಣ್, ಉಪಾಧ್ಯಕ್ಷ ನಂಜುಂಡ ಸ್ವಾಮಿ, ಜಂಟಿ ಕಾರ್ಯದರ್ಶಿ ಭಾರತಿ ಮಂಜುನಾಥ್ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರದ ಶ್ರೀ ರಾಮ ಆಸ್ಪತ್ರೆ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಕ್ಯಾನ್ಸರ್ ಕುರಿತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.