ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಕಾರ್ಯಕ್ರಮದಲ್ಲಿ ಕ್ಯಾನ್ಸರ್ನ್ನು ಯಶಸ್ವಿಯಾಗಿ ಎದುರಿಸಿ ಬದುಕು ಗೆದ್ದ ಸರ್ವೈವರ್ಗಳು ಅವರ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬಲಾಯಿತು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ ಶರ್ಮಾ ಮಾತನಾಡಿ, ಕ್ಯಾನ್ಸರ್ ರೋಗನಿರ್ಣಯವಾದ ತಕ್ಷಣ ಬದುಕಿನ ಬಗ್ಗೆ ನಿರಾಶರಾಗುವ ಅಗತ್ಯವಿಲ್ಲ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದರೆ ಕ್ಯಾನ್ಸರ್ನಿಂದ ಗುಣಮುಖರಾಗಲು ಸಾಧ್ಯ ಎಂಬುದಕ್ಕೆ ಸಾವಿರಾರು ಸರ್ವೈವರ್ಗಳ ಬದುಕು ಸಾಕ್ಷಿಯಾಗಿದೆ ಎಂದು ಹೇಳಿದರು.ಕ್ಯಾನ್ಸರ್ ಚಿಕಿತ್ಸೆಯು ಸುದೀರ್ಘ ಪ್ರಕ್ರಿಯೆಯಾಗಿದ್ದು, ಈ ಅವಧಿಯಲ್ಲಿ ಕುಟುಂಬದವರ ಬೆಂಬಲ ಮತ್ತು ರೋಗಿಯ ಮನೋಬಲ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಳೆದ ಹಲವು ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳು ಯಶಸ್ವಿಯಾಗಿ ಚಿಕಿತ್ಸೆ ಪಡೆದು ಸರ್ವೈವರ್ಗಳಾಗಿದ್ದಾರೆ ಎಂದು ತಿಳಿಸಿದರು.
ಕಳೆದ ಎರಡು ದಶಕಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಿದ್ದು, ಐಎಂಆರ್ಟಿ, ಐಜಿಆರ್ಟಿ ಹಾಗೂ ಪ್ರೋಟಾನ್ ಥೆರಪಿಯಂತಹ ಅತ್ಯಾಧುನಿಕ ತಂತ್ರಜ್ಞಾನಗಳಿಂದ ಚಿಕಿತ್ಸೆಯ ನಿಖರತೆ ಹೆಚ್ಚಿದ್ದು, ಅಡ್ಡಪರಿಣಾಮಗಳು ಗಣನೀಯವಾಗಿ ಕಡಿಮೆಯಾಗಿವೆ ಎಂದು ಹೇಳಿದರು.
ಚಿಕಿತ್ಸೆಯ ಸಂದರ್ಭದಲ್ಲಿ ನಕಾರಾತ್ಮಕ ಚಿಂತನೆಗಳಿಂದ ದೂರವಿದ್ದು, ಆತ್ಮವಿಶ್ವಾಸ ಮತ್ತು ಆಶಾವಾದವನ್ನು ಉಳಿಸಿಕೊಳ್ಳುವುದು ಅಗತ್ಯ. ಚಿಕಿತ್ಸೆ ಪೂರ್ಣಗೊಂಡ ಬಳಿಕವೂ ನಿಯಮಿತ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳುವುದು ಮುಖ್ಯ ಎಂದು ಸಲಹೆ ನೀಡಿದರು.
ಪುರುಷರಲ್ಲಿ ಬಾಯಿ ಕ್ಯಾನ್ಸರ್ ಪ್ರಮುಖ ಕ್ಯಾನ್ಸರ್ಗಳಲ್ಲಿ ಒಂದಾಗಿದ್ದು, ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆದರೆ ದೀರ್ಘಕಾಲೀನ ಬದುಕು ಸಾಧ್ಯವಾಗುತ್ತದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು 8 ರಿಂದ 12 ವರ್ಷಗಳಿಗೂ ಹೆಚ್ಚು ಕಾಲ ಆರೋಗ್ಯವಂತರಾಗಿ ಬದುಕುತ್ತಿರುವ ಅನೇಕ ರೋಗಿಗಳು ಇದ್ದಾರೆ ಎಂದು ತಿಳಿಸಿದರು.
ಮತ್ತೋರ್ವ ಸರ್ವೈವರ್ ಸುರೇಶ ಮಾತನಾಡಿ, ಕ್ಯಾನ್ಸರ್ ಎಂಬುದು ಭಯಪಡುವ ಕಾಯಿಲೆಯಲ್ಲ. ಸಮಯಕ್ಕೆ ಸರಿಯಾಗಿ ರೋಗ ಪತ್ತೆ, ವೈದ್ಯರ ಸಲಹೆ ಪಾಲನೆ ಹಾಗೂ ಸೂಕ್ತ ಚಿಕಿತ್ಸೆಯಿಂದ ರೋಗವನ್ನು ಜಯಿಸಬಹುದು ಎಂದು ತಿಳಿಸಿದರು.