ಕ್ಯಾನ್ಸರ್‌ ಜಾಗೃತಿ ಮೂಲಕ ತಡೆಗಟ್ಟುವುದು ಅಗತ್ಯ: ಬೋಳ ಪ್ರಶಾಂತ್‌ ಕಾಮತ್‌

KannadaprabhaNewsNetwork |  
Published : Nov 24, 2025, 03:15 AM IST
ಕಾರ್ಕಳದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾ ಉದ್ಘಾಟಿಸಿ ಬೋಳ ಪ್ರಶಾಂತ್ ಕಾಮತ್ ಅಭಿಮತ | Kannada Prabha

ಸಾರಾಂಶ

ಕ್ಯಾನ್ಸರ್ ಕುರಿತ ಮಾಹಿತಿ, ಜಾಗೃತಿ ಜಾಥಾಗಳು , ಸಂವಾದ ಕಾರ್ಯಕ್ರಮಗಳು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಕಾರ್ಕಳ ಟೈಗರ್ಸ್ ಸಂಸ್ಥಾಪಕ ಬೋಳ ಪ್ರಶಾಂತ್ ಕಾಮತ್ ಹೇಳಿದ್ದಾರೆ.

ಕಾರ್ಕಳ: ಬದುಕಿಗೆ ಅಸಹನೀಯವಾದ ಮತ್ತು ಜೀವಕ್ಕೆ ಮಾರಕವೆನಿಸುವ ಕಾಯಿಲೆಗಳಲ್ಲಿ ಕ್ಯಾನ್ಸರ್ ಮೊದಲ ಸ್ಥಾನದಲ್ಲಿದೆ . ಆಹಾರ ಕ್ರಮ ಮತ್ತು ಜೀವನಶೈಲಿ ಬದಲಾವಣೆ ಹಾಗೂ ವ್ಯಾಯಾಮಗಳ ಮೂಲಕ ದೇಹ ಪ್ರವೇಶಿಸದಂತೆ ಈ ಕಾಯಿಲೆಯನ್ನು ನಿಗ್ರಹಿಸಬಹುದು. ಆದಾಗ್ಯೂ ಒಂದೊಮ್ಮೆ ಪ್ರಾಥಮಿಕ ಹಂತದಲ್ಲಿಯೇ ಮುಂಜಾಗ್ರತೆಯ ಕ್ರಮಗಳಿಂದ ಗಂಭೀರ ಹಾನಿ ತಡೆಗಟ್ಟಬಹುದು . ಈ ನಿಟ್ಟಿನಲ್ಲಿ ಕ್ಯಾನ್ಸರ್ ಕುರಿತ ಮಾಹಿತಿ, ಜಾಗೃತಿ ಜಾಥಾಗಳು , ಸಂವಾದ ಕಾರ್ಯಕ್ರಮಗಳು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಕಾರ್ಕಳ ಟೈಗರ್ಸ್ ಸಂಸ್ಥಾಪಕ ಬೋಳ ಪ್ರಶಾಂತ್ ಕಾಮತ್ ಹೇಳಿದ್ದಾರೆ.ಮಂಗಳೂರು ಇನ್‌ಸ್ಟಿಟ್ಯೂಟ್‌ ಆಫ್ ಆಂಕಾಲಜಿ ಹಾಗೂ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಕ್ಯಾನ್ಸರ್ ಮಾಹಿತಿ ಕೇಂದ್ರ ಕಾರ್ಕಳ ನೇತೃತ್ವದಲ್ಲಿ , ಟೀಮ್ ಸಿಂಧೂರ್ ಕಾರ್ಕಳ, ಹೊಸ ಸಂಜೆ ಬಳಗ, ಕಾರ್ಕಳ ಟೈಗರ್ಸ್, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯ, ಜೆಸಿಐ ಕಾರ್ಕಳ, ಎಸ್‌ವಿಟಿ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ " ಕ್ಯಾನ್ಸರ್ ಜಾಗೃತಿ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು.ಪುರಸಭಾ ಸದಸ್ಯ ಲಕ್ಷ್ಮೀನಾರಾಯಣ ಮಲ್ಯ, ಕಾರ್ಕಳ ಜೆ ಸಿ ಐ ಅಧ್ಯಕ್ಷೆ ಶ್ವೇತಾ ಎಸ್ ಜೈನ್ , ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲು , ಕಾರ್ಯದರ್ಶಿ ಶೇಖರ್, ಮನಶ್ಯಾಸ್ತ್ರಜ್ಞೆ ಜ್ಯೇಷ್ಠಲಕ್ಷ್ಮೀ ಮಂಗಳೂರು, ಹೊಸಸಂಜೆ ಬಳಗದ ಅಧ್ಯಕ್ಷ ಆರ್ ದೇವರಾಯ ಪ್ರಭು , ಲಯನ್ಸ್ ಕ್ಲಬ್ ಸೆಂಟ್ರಲ್ ಕಾರ್ಯದರ್ಶಿ ದತ್ತಾತ್ರೇಯ ಹಿರಿಯಂಗಡಿ , ಟೀಮ್ ಸಿಂಧೂರದ ಶೋಭಾ ಭಾಸ್ಕರ್ ಮುಖ್ಯ ಅತಿಥಿಗಳಾಗಿದ್ದರು.ನಯನಾ ಸ್ವಾಗತಿಸಿದರು. ದಿವ್ಯಶ್ರೀ ಪ್ರಾಸ್ತಾವಿಕ ಮಾತನಾಡಿದರು. ಲಾವಣ್ಯ ನಿರೂಪಿಸಿದರು. ಅಮೃತಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿನೇದಿನೇ ಏರುತ್ತಿರುವ ಚಿನ್ನದ ದರ ಇಳಿಯಲಿ ಎಂದು ಭಕ್ತನ ಹರಕೆ !
₹70 ಲಕ್ಷ ವಿದ್ಯುತ್‌ ಬಿಲ್‌ ಬಾಕಿ: ಸಿದ್ಧಗಂಗಾ ಮಠಕ್ಕೆ ನೀರು ಬಂದ್‌!