ಕನ್ನಡಪ್ರಭ ವಾರ್ತೆ ಹುಕ್ಕೇರಿ
ಪಟ್ಟಣದಲ್ಲಿ ಶುಕ್ರವಾರ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಕಳ್ಳಭಟ್ಟಿ ಸಾರಾಯಿ ತಯಾರಿಸುವವರು ಇವರ ಜೊತೆಗಿದ್ದಾರೆ. ಕಮೀಷನ್ ಪಡೆಯಲು ಅವರ ಏಜೆಂಟರು ನಿರತರಾಗಿದ್ದಾರೆ ಎಂದು ದೂರಿದರು.
ಹಿಂದು ಸಂಸ್ಕೃತಿ, ಪರಂಪರೆಗೆ ಅವಮಾನ ಮಾಡುತ್ತಾರೆ. ಹಿಂದು ಮಹಾನ್ ನಾಯಕರನ್ನು ಅಪಮಾನಿಸುತ್ತಾರೆ. ಛತ್ರಪತಿ ಶಿವಾಜಿ ಮಹಾರಾಜ ಮತ್ತು ಸಂಭಾಜಿ ಮಹಾರಾಜರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ ಎಂದು ಕಿಡಿಕಾರಿದರು.ವೋಟ್ ಹಾಕದಿದ್ದರೇ ಕರೆಂಟ್ ಕಟ್ ಮಾಡುತ್ತೇವೆಂದು ಬೆದರಿಕೆ ಹಾಕುತ್ತಿದ್ದಾರೆ. 10 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಬರ್ಬಾದ್ ಮಾಡಿದೆ. ರಾಹುಲ್ ಬಾಬಾ ಆ್ಯಂಡ್ ಕಂಪನಿ ಈ ದೇಶವನ್ನು ಸುರಕ್ಷಿತವಾಗಿ ಇಡುವುದಿಲ್ಲ. ಕೇವಲ ಮೋದಿ ಅವರಿಂದ ಮಾತ್ರ ದೇಶ ಸುರಕ್ಷಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ದೇಶಕ್ಕೆ ಅಂಟಿದ್ದ ಭಯೋತ್ಪಾದನೆ ನಿರ್ಮೂಲನೆ ಮಾಡಿದರು ಎಂದರು.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ್ ಪ್ರಕರಣದಲ್ಲಿ ಎಸ್ಡಿಪಿಐ ಕೈವಾಡವಿದೆ ಎಂಬುವುದನ್ನು ರಾಷ್ಟ್ರೀಯ ತನಿಖಾ ದಳ ಬಹಿರಂಗಪಡಿಸಿತ್ತು. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಸ್ಡಿಪಿಐ ಯನ್ನು ಸಮರ್ಥನೆ ಮಾಡಿಕೊಳ್ಳುತ್ತಿದೆ. ಅಂತಹ ಎಸ್ಡಿಪಿಐ ಸಹಕಾರ ಪಡೆದು ಕಾಂಗ್ರೆಸ್ ಲೋಕಸಭಾ ಚುನಾವಣೆ ಎದುರಿಸುತ್ತಿದೆ ಎಂದು ದೂರಿದರು.
ಸಿಎಂ ಉತ್ತರಿಸಲಿ:
ರಾಹುಲ್ ಬಾಬಾ ಸೋಲು ಖಚಿತ:
ಕೋವಿಡ್ ಸಂದರ್ಭದಲ್ಲಿ ರಾಹುಲ್ ಬಾಬಾ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ. ಅದು ಮೋದಿ ಲಸಿಕೆ ಎಂದು ಅಪಪ್ರಚಾರ ಮಾಡಿದರು. ಆದರೆ, ರಾಹುಲ್ ಗಾಂಧಿ ತಮ್ಮ ಸಹೋದರಿಯೊಂದಿಗೆ ರಾತೋರಾತ್ರಿ ವ್ಯಾಕ್ಸಿನ್ ತೆಗೆದುಕೊಂಡರು. 10 ವರ್ಷಗಳಲ್ಲಿ ಮೋದಿಯವರ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರ ಆರೋಪ ಬಂದಿಲ್ಲ ಎಂದು ತಿಳಿಸಿದರು.
ಮತಾಂತರ ಆಗಲು ವಿರೋಧಿಸಿದ್ದಕ್ಕೆ ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯಾಗಿದೆ. ಆದರೆ, ಕಾಂಗ್ರೆಸ್ನವರು ಈ ಪ್ರಕರಣವನ್ನು ವೈಯಕ್ತಿಕ ಎಂದು ಹೇಳಿದ್ದರು. ಬೇರೆ ಧರ್ಮಕ್ಕೆ ಮತಾಂತರಗೊಳ್ಳಲು ವಿರೋಧಿಸಿದ್ದಕ್ಕೆ ನೇಹಾ ಹತ್ಯೆಯಾಗಿದ್ದು, ಅವಳಿಗೆ ನ್ಯಾಯ ಸಿಗಬೇಕಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಆಗ ಅನ್ಯಾಯ ಮಾಡಿದವರಿಗೆ ತಲೆ ಕೆಳಗೆ ಮಾಡಿ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಕೇಂದ್ರ ಸಚಿವ ಅಮೀತ್ ಶಾ ಗುಡುಗಿದರು.
ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಂಸದ ರಮೇಶ ಕತ್ತಿ, ಶಾಸಕರಾದ ಶಶಿಕಲಾ ಜೊಲ್ಲೆ, ಧುರ್ಯೋಧನ ಐಹೊಳೆ, ನಿಖಿಲ ಕತ್ತಿ, ರಾಜೇಶ ನೇರ್ಲೆ ಮೊದಲಾದವರು ಉಪಸ್ಥಿತರಿದ್ದರು.3 ತಿಂಗಳಿಗೊಮ್ಮೆ ವಿದೇಶ ಪ್ರಯಾಣ ಮಾಡುವ ರಾಹುಲ್ ಬಾಬಾ ಬೇಕಾ? ಅಥವಾ ರಜೆ ಪಡೆಯದೇ ಕೆಲಸ ಮಾಡುವ ಮೋದಿ ಬೇಕಾ?. ಅಣ್ಣಾಸಾಹೇಬ ಜೊಲ್ಲೆ ಅವರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ 3ನೇ ಬಾರಿಗೆ ಮೋದಿ ಅವರನ್ನು ಪ್ರಧಾನಿಯನ್ನಾಗಿಸಬೇಕು. ಚಂದ್ರಯಾನಕ್ಕೆ 20 ಸಲ ಸೋನಿಯಾ ಗಾಂಧಿ ಪ್ರಯತ್ನಿಸಿದರೂ ಯಶಸ್ವಿ ಆಗಲಿಲ್ಲ. ಆದರೆ, ಮೋದಿಯವರು ಒಂದೇ ಬಾರಿಯಲ್ಲಿ ಚಂದ್ರಯಾನ ಸಕ್ಸಸ್ ಮಾಡಿದರು.
-ಅಮಿತ್ ಶಾ, ಕೇಂದ್ರ ಸಚಿವ.